ಸಹೋದರಿಯ ಕೂರಿಸಿಕೊಂಡು ರಾಹುಲ್ ಗಾಂಧಿ ಬುಲೆಟ್ ಸವಾರಿ..!

ಬಿಹಾರ್ ವೋಟ್ ಅಧಿಕಾರ್ ರ್ಯಾಲಿಯಲ್ಲಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ತೇಜಸ್ವಿ ಯಾದವ್ ಬೈಕ್‌ಗಳಲ್ಲಿ ಕಾಣಿಸಿಕೊಂಡರು. ಈ ಬಾರಿ ಅಣ್ಣ-ತಂಗಿ ಜೋಡಿ ಡಿಫ್ರೆಂಟ್​ ಆಗಿ ಕಾಣಿಸಿಕೊಂಡಿದೆ. ರಾಹುಲ್ ಗಾಂಧಿ, ತಮ್ಮ ಸಹೋದರಿ ಪ್ರಿಯಾಂಕ ಗಾಂಧಿಯನ್ನ ಬುಲೆಟ್​​​ನಲ್ಲಿ ಕೂರಿಸಿಕೊಂಡು ಪ್ರತಿಭಟನಾ ಱಲಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗದ ವಿರುದ್ಧವೂ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್​ ದೇಶಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ತಿದೆ. ಅದರ ಮುಂದುವರಿದ ಭಾಗವಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬಿಹಾರ ಮತದಾನ ಹಕ್ಕುಗಳ ಱಲಿಗಾಗಿ ಮುಜಫರ್‌ಪುರದಲ್ಲಿದ್ದಾರೆ. ಆಗಸ್ಟ್ 26 ರಂದು ಸುಪೌಲ್‌ನಲ್ಲಿ ನಡೆದ ಱಲಿಯಲ್ಲಿ ಭಾಗವಹಿಸಿದ್ದರು.

ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರುಗಳನ್ನು ತೆಗೆದುಹಾಕಿರುವ ಬಗ್ಗೆ ಉತ್ತರ ನೀಡುವಂತೆ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ. ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮತಗಳನ್ನು ಹೇಗೆ ಕಳ್ಳತನ ಮಾಡಲಾಗಿದೆ ಅಂತಾ ದಾಖಲೆ ಸಹಿತ ಬಿಚ್ಚಿಡುತ್ತಿದ್ದೇವೆ ಎಂದು ಗುಡುಗಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವತ್ತಿನಿಂದ ಈ ಱಲಿಯಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್‌ನ ‘ಮತದಾರರ ಹಕ್ಕುಗಳ ಯಾತ್ರೆ’ಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದೆ ಕನಿಮೋಳಿ ಕೂಡ ಸಾಥ್ ನೀಡಿದ್ದಾರೆ.

ಒಟ್ಟು 1,300 ಕಿ.ಮೀ ದೂರದ ಱಲಿ ಇದಾಗಿದೆ. ಆಗಸ್ಟ್ 17 ರಂದು ಸಸಾರಾಮ್​ನಿಂದ ಶುರುವಾಗಿದ್ದು, ಸೆಪ್ಟೆಂಬರ್ 1 ರಂದು ಮುಕ್ತಾಯಗೊಳ್ಳಲಿದೆ. ಸೆಪ್ಟೆಂಬರ್ 1 ರಂದು ಪಾಟ್ನಾದಲ್ಲಿ ಬೃಹತ್ ಱಲಿ ನಡೆಯಲಿದೆ.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!