ಸಹೋದರಿಯ ಕೂರಿಸಿಕೊಂಡು ರಾಹುಲ್ ಗಾಂಧಿ ಬುಲೆಟ್ ಸವಾರಿ..!

ಬಿಹಾರ್ ವೋಟ್ ಅಧಿಕಾರ್ ರ್ಯಾಲಿಯಲ್ಲಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ತೇಜಸ್ವಿ ಯಾದವ್ ಬೈಕ್‌ಗಳಲ್ಲಿ ಕಾಣಿಸಿಕೊಂಡರು. ಈ ಬಾರಿ ಅಣ್ಣ-ತಂಗಿ ಜೋಡಿ ಡಿಫ್ರೆಂಟ್​ ಆಗಿ ಕಾಣಿಸಿಕೊಂಡಿದೆ. ರಾಹುಲ್ ಗಾಂಧಿ, ತಮ್ಮ ಸಹೋದರಿ ಪ್ರಿಯಾಂಕ ಗಾಂಧಿಯನ್ನ ಬುಲೆಟ್​​​ನಲ್ಲಿ ಕೂರಿಸಿಕೊಂಡು ಪ್ರತಿಭಟನಾ ಱಲಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದಾರೆ. ಚುನಾವಣಾ ಆಯೋಗದ ವಿರುದ್ಧವೂ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್​ ದೇಶಾದ್ಯಂತ ಪ್ರತಿಭಟನೆಗಳನ್ನು ಹಮ್ಮಿಕೊಳ್ತಿದೆ. ಅದರ ಮುಂದುವರಿದ ಭಾಗವಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬಿಹಾರ ಮತದಾನ ಹಕ್ಕುಗಳ ಱಲಿಗಾಗಿ ಮುಜಫರ್‌ಪುರದಲ್ಲಿದ್ದಾರೆ. ಆಗಸ್ಟ್ 26 ರಂದು ಸುಪೌಲ್‌ನಲ್ಲಿ ನಡೆದ ಱಲಿಯಲ್ಲಿ ಭಾಗವಹಿಸಿದ್ದರು.

ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರುಗಳನ್ನು ತೆಗೆದುಹಾಕಿರುವ ಬಗ್ಗೆ ಉತ್ತರ ನೀಡುವಂತೆ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದಾರೆ. ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮತಗಳನ್ನು ಹೇಗೆ ಕಳ್ಳತನ ಮಾಡಲಾಗಿದೆ ಅಂತಾ ದಾಖಲೆ ಸಹಿತ ಬಿಚ್ಚಿಡುತ್ತಿದ್ದೇವೆ ಎಂದು ಗುಡುಗಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವತ್ತಿನಿಂದ ಈ ಱಲಿಯಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್‌ನ ‘ಮತದಾರರ ಹಕ್ಕುಗಳ ಯಾತ್ರೆ’ಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಂಸದೆ ಕನಿಮೋಳಿ ಕೂಡ ಸಾಥ್ ನೀಡಿದ್ದಾರೆ.

ಒಟ್ಟು 1,300 ಕಿ.ಮೀ ದೂರದ ಱಲಿ ಇದಾಗಿದೆ. ಆಗಸ್ಟ್ 17 ರಂದು ಸಸಾರಾಮ್​ನಿಂದ ಶುರುವಾಗಿದ್ದು, ಸೆಪ್ಟೆಂಬರ್ 1 ರಂದು ಮುಕ್ತಾಯಗೊಳ್ಳಲಿದೆ. ಸೆಪ್ಟೆಂಬರ್ 1 ರಂದು ಪಾಟ್ನಾದಲ್ಲಿ ಬೃಹತ್ ಱಲಿ ನಡೆಯಲಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು