ವೈಷ್ಣೋದೇವಿ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಾ*ವಿನ ಸಂಖ್ಯೆ 35ಕ್ಕೆ ಏರಿಕೆ

ಜಮ್ಮುವಿನಲ್ಲಿ ಭಾರೀ ಮಳೆಯಿಂದಾಗಿ ವೈಷ್ಣೋ ದೇವಿ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಅನೇಕ ಯಾತ್ರಿಕರು ಸೇರಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ವೈಷ್ಣೋ ದೇವಿ ಯಾತ್ರೆ ಸ್ಥಗಿತಗೊಂಡಿದೆ. ಜೊತೆಗೆ ದೂರಸಂಪರ್ಕ ಸೇವೆಗಳು ಅಸ್ತವ್ಯಸ್ತವಾಗಿವೆ.

ಸಾಂಬಾ, ಕಥುವಾ, ಜಮ್ಮು, ಉಧಂಪುರ, ದೋಡಾ ಮುಂತಾದ ತಗ್ಗು ಪ್ರದೇಶಗಳಿಗೆ ಭಾರೀ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ನದಿ ಪಾತ್ರಗಳಲ್ಲಿ ವಾಸಿಸೋರ ಸುರಕ್ಷತೆಗಾಗಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮಳೆ ಬಹುತೇಕ ನಿಂತಿರೋದ್ರಿಂದ ಸ್ವಲ್ಪ ಸಮಾಧಾನವಾಗಿದೆ. ತಗ್ಗು ಪ್ರದೇಶಗಳಿಂದ ನೀರು ಕಡಿಮೆಯಾಗಲು ಪ್ರಾರಂಭಿಸಿದೆ. ವಿಪತ್ತಿನಿಂದ ಉಂಟಾದ ಹಾನಿ ನಿಮ್ಮ ಮುಂದೆಯೇ ಇದೆ. 2014 ರಲ್ಲಿಯೂ ಹೀಗೆಯೇ ಆಗಿತ್ತು ಎಂದು ಸಿಎಂ ಹೇಳಿದ್ದಾರೆ.

 

ಮಾತಾ ವೈಷ್ಣೋ ದೇವಿ ಕತ್ರಾ, ಜಮ್ಮು ತಾವಿ ಮತ್ತು ಪಠಾಣ್‌ಕೋಟ್ ರೈಲು ನಿಲ್ದಾಣಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಬಗ್ಗೆ ಮಾಹಿತಿಗಾಗಿ ಸಹಾಯ ಪಡೆಯಬಹುದು.

ಸಹಾಯವಾಣಿ ಸಂಖ್ಯೆಗಳು
ಜಮ್ಮು- 7888839911
ದೆಹಲಿ- 9717638775

ಇನ್ನು ಲಡಾಖ್‌ನಲ್ಲಿ ಭಾರೀ ಮಳೆಯಿಂದಾಗಿ ಹಲವಾರು ರಸ್ತೆಗಳು, ರೈಲು ಸೇವೆಗಳು ಮತ್ತು ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ರಂಬನ್ ಜಿಲ್ಲೆಯ ಮರೋಗ್, ದಿಗ್ಡೋಲ್, ಬ್ಯಾಟರಿ ಚಶ್ಮಾ ಮತ್ತು ಕೇಲಾ ಮೋರ್ಹ್‌ಗಳಲ್ಲಿ ಹಲವಾರು ಭೂಕುಸಿತಗಳು, ಮಣ್ಣು ಕುಸಿತ ಮತ್ತು ಗುಂಡಿನ ಕಲ್ಲುಗಳಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಶೂ*ಟೌಟ್ ಪ್ರಕರಣ: ಅರಣ್ಯ ಇಲಾಖೆ ವಿರುದ್ಧ ಮೃ*ತರ ಕುಟುಂಬಸ್ಥರ ಗಂಭೀರ ಆರೋಪ

ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮದ ಶಾಗ್ಯ ಬೀಟ್‌ನ ಹೊಳೆಮುರಿದಟ್ಟಿ ಅರಣ್ಯ (ತೋಮಿಯರ್ಪಾಳ್ಯ ಗ್ರಾಮದ ಬಳಿ) ಪ್ರದೇಶದಲ್ಲಿ ನಡೆದ ಮೂವರ ಶೂ*ಟೌಟ್ ಪ್ರಕರಣ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸಾವನ್ನಪ್ಪಿದ ಮೂವರೂ ಹವ್ಯಾಸಿ ಬೇಟೆಗಾರರಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ರಜೆಯ ಸಂದರ್ಭದಲ್ಲಿ ಜಿಂಕೆ ಬೇಟೆಗೆ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!