ವೈಷ್ಣೋದೇವಿ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಾ*ವಿನ ಸಂಖ್ಯೆ 35ಕ್ಕೆ ಏರಿಕೆ

ಜಮ್ಮುವಿನಲ್ಲಿ ಭಾರೀ ಮಳೆಯಿಂದಾಗಿ ವೈಷ್ಣೋ ದೇವಿ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಅನೇಕ ಯಾತ್ರಿಕರು ಸೇರಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ವೈಷ್ಣೋ ದೇವಿ ಯಾತ್ರೆ ಸ್ಥಗಿತಗೊಂಡಿದೆ. ಜೊತೆಗೆ ದೂರಸಂಪರ್ಕ ಸೇವೆಗಳು ಅಸ್ತವ್ಯಸ್ತವಾಗಿವೆ.

ಸಾಂಬಾ, ಕಥುವಾ, ಜಮ್ಮು, ಉಧಂಪುರ, ದೋಡಾ ಮುಂತಾದ ತಗ್ಗು ಪ್ರದೇಶಗಳಿಗೆ ಭಾರೀ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ನದಿ ಪಾತ್ರಗಳಲ್ಲಿ ವಾಸಿಸೋರ ಸುರಕ್ಷತೆಗಾಗಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮಳೆ ಬಹುತೇಕ ನಿಂತಿರೋದ್ರಿಂದ ಸ್ವಲ್ಪ ಸಮಾಧಾನವಾಗಿದೆ. ತಗ್ಗು ಪ್ರದೇಶಗಳಿಂದ ನೀರು ಕಡಿಮೆಯಾಗಲು ಪ್ರಾರಂಭಿಸಿದೆ. ವಿಪತ್ತಿನಿಂದ ಉಂಟಾದ ಹಾನಿ ನಿಮ್ಮ ಮುಂದೆಯೇ ಇದೆ. 2014 ರಲ್ಲಿಯೂ ಹೀಗೆಯೇ ಆಗಿತ್ತು ಎಂದು ಸಿಎಂ ಹೇಳಿದ್ದಾರೆ.

 

ಮಾತಾ ವೈಷ್ಣೋ ದೇವಿ ಕತ್ರಾ, ಜಮ್ಮು ತಾವಿ ಮತ್ತು ಪಠಾಣ್‌ಕೋಟ್ ರೈಲು ನಿಲ್ದಾಣಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಬಗ್ಗೆ ಮಾಹಿತಿಗಾಗಿ ಸಹಾಯ ಪಡೆಯಬಹುದು.

ಸಹಾಯವಾಣಿ ಸಂಖ್ಯೆಗಳು
ಜಮ್ಮು- 7888839911
ದೆಹಲಿ- 9717638775

ಇನ್ನು ಲಡಾಖ್‌ನಲ್ಲಿ ಭಾರೀ ಮಳೆಯಿಂದಾಗಿ ಹಲವಾರು ರಸ್ತೆಗಳು, ರೈಲು ಸೇವೆಗಳು ಮತ್ತು ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ರಂಬನ್ ಜಿಲ್ಲೆಯ ಮರೋಗ್, ದಿಗ್ಡೋಲ್, ಬ್ಯಾಟರಿ ಚಶ್ಮಾ ಮತ್ತು ಕೇಲಾ ಮೋರ್ಹ್‌ಗಳಲ್ಲಿ ಹಲವಾರು ಭೂಕುಸಿತಗಳು, ಮಣ್ಣು ಕುಸಿತ ಮತ್ತು ಗುಂಡಿನ ಕಲ್ಲುಗಳಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

Related Posts

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಪರೇಲ್‌ನ ಗ್ಲೆನೀಗಲ್ಸ್ ಆಸ್ಪತ್ರೆಯ ನಿರ್ದೇಶಕ ಮತ್ತು ಹೃದ್ರೋಗ ತಜ್ಞ ಡಾ. ರಾಹುಲ್ ಗುಪ್ತಾ, ಮಾದರಿಗಳಲ್ಲಿನ ಸ್ಪಷ್ಟ ಬದಲಾವಣೆಯನ್ನು ಗಮನಿಸಿದ್ದಾರೆ. ಈಗ, 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೃದಯಾಘಾತದ ಪ್ರವೃತ್ತಿ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ. ಆಘಾತಕ್ಕೆ ಎದುರಾಗಿರುವ ಕಾರಣಗಳು ಇಲ್ಲಿವೆ. ಮೊದಲೆಲ್ಲಾ 60 ವರ್ಷ…

ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಅಮೆರಿಕ!

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!