ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ.

ಬೆಂಗಳೂರು: ಮೈಸೂರು ದಸರಾ ಉತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಸ್ತಾಕ್ ಅವರನ್ನು ಆಹ್ವಾನ ನೀಡಿರುವ ವಿಚಾರವನ್ನು ಪ್ರತಿಸ್ಪಂದಿಸಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ” ಎಂಬ ಹೇಳಿಕೆಯಿಂದ ವಿವಾದ ಕೆರಳಿಸಿದ್ದಾರೆ.

“ಅದು ಅವರ (ಬಾನು ಮುಸ್ತಾಕ್) ನಂಬಿಕೆ. ನಾವು ಮಸೀದಿ, ಜೈನ್ ದೇವಸ್ಥಾನ, ಗುರುದ್ವಾರಗಳಿಗೆ ಹೋಗುತ್ತೇವೆ. ಹಾಗೆಂದು ಯಾರಾದರೂ ನಮ್ಮನ್ನು ತಡೆಯುತ್ತಾರಾ? ಮುಸ್ಲಿಮರು ಹಿಂದೂಗಳಾಗಲ್ವಾ? ಹಿಂದೂಗಳು ಮುಸ್ಲಿಂ ಆಗಲ್ವಾ?” ಎಂದು ಅವರು ಪ್ರಶ್ನಿಸಿದರು.

“ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಯಾರಿಗೂ ತಡೆ ಇಲ್ಲ. ಹಿಂದೂ ದೇವಾಲಯಗಳಿಗೆ ಹಲವಾರು ಧರ್ಮಗಳವರು ಭೇಟಿ ಕೊಡುತ್ತಾರೆ. ಇದು ಸಂವಿಧಾನಪಾಲನೆಯ ರಾಷ್ಟ್ರ. ಮದುವೆಯಾದ ದಂಪತಿಗಳಲ್ಲಿ ಧರ್ಮ ಕಲ್ಪನೆ ಬೇರೆ ಬೇರೆ ಆಗಬಹುದು, ಆದರೆ ಮಕ್ಕಳಿಗೆ ಆಯ್ಕೆಯಿರಬೇಕು,” ಎಂದು ಅವರು ತಿಳಿಸಿದರು.

“ಬಾನು ಮುಸ್ತಾಕ್ ಕನ್ನಡದಲ್ಲಿ ಬರೆದಿದ್ದಾರೆ. ಯಾರು ಯಾವ ಧರ್ಮದವರು ಎಂದು ನಾವು ಪ್ರಶ್ನೆ ಮಾಡುವಲ್ಲ. ನಾವು ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ; ನಾವು ಜಾತ್ಯಾತೀತ ತತ್ವಗಳಲ್ಲಿ ನಂಬಿಕೆ ಇಡುವವರು,” ಎಂದು ಡಿಕೆಶಿ ಹೇಳಿದ್ದಾರೆ.

ಡಿಕೆಶಿಯ ಹೇಳಿಕೆಗೆ ಯದುವೀರ್ ಕಿರಿಆಲಿಸಿ

ಮೈಸೂರು: “ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ” ಎಂಬ ಡಿಕೆಶಿಯ ಹೇಳಿಕೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ ಅವರು, “ಗೌರಿ ಹಬ್ಬದ ಪವಿತ್ರ ದಿನವೇ ಇಂತಹ ಹೇಳಿಕೆ ನೀಡಿ ಅವರು ಹಿಂದೂ ಸಂಪ್ರದಾಯ ಮತ್ತು ನಂಬಿಕೆಗಳಿಗೆ ಧಕ್ಕೆಯಾಗುವ ಕೆಲಸ ಮಾಡಿದ್ದಾರೆ. ಚಾಮುಂಡಿಬೆಟ್ಟವು ಶಕ್ತಿ ಪೀಠವಾಗಿದ್ದು ಶಾಸ್ತ್ರಸಮ್ಮತವಾಗಿದೆ. ಕೋಟ್ಯಂತರ ಹಿಂದೂಗಳು ಪೂಜಿಸುವ ಈ ಸ್ಥಳ ಯಾವಾಗಲೂ ಹಿಂದೂಗಳ ಆಸ್ತಿಯಾಗಿಯೇ ಇರುತ್ತದೆ,” ಎಂದು ಹೇಳಿದ್ದಾರೆ.

“ಕರ್ನಾಟಕದ ಜನರು ಎಲ್ಲಾ ಧರ್ಮಗಳಿಗೆ ಗೌರವವಿಡುತ್ತಾರೆ. ಆದರೆ ಹಿಂದೂ ದೇವಾಲಯಗಳು, ಹಬ್ಬಗಳು ಮತ್ತು ಸಂಪ್ರದಾಯಗಳ ಮೇಲಿನ ನಿರಂತರ ದಾಳಿಯನ್ನು ಎಂದಿಗೂ ಸಹಿಸಲಾರರು,” ಎಂದು ಯದುವೀರ್ ಎಚ್ಚರಿಸಿದ್ದಾರೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!