ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ: ಡಿಕೆ ಶಿವಕುಮಾರ್ ವಿವಾದಾತ್ಮಕ ಹೇಳಿಕೆ.

ಬೆಂಗಳೂರು: ಮೈಸೂರು ದಸರಾ ಉತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಸ್ತಾಕ್ ಅವರನ್ನು ಆಹ್ವಾನ ನೀಡಿರುವ ವಿಚಾರವನ್ನು ಪ್ರತಿಸ್ಪಂದಿಸಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ” ಎಂಬ ಹೇಳಿಕೆಯಿಂದ ವಿವಾದ ಕೆರಳಿಸಿದ್ದಾರೆ.

“ಅದು ಅವರ (ಬಾನು ಮುಸ್ತಾಕ್) ನಂಬಿಕೆ. ನಾವು ಮಸೀದಿ, ಜೈನ್ ದೇವಸ್ಥಾನ, ಗುರುದ್ವಾರಗಳಿಗೆ ಹೋಗುತ್ತೇವೆ. ಹಾಗೆಂದು ಯಾರಾದರೂ ನಮ್ಮನ್ನು ತಡೆಯುತ್ತಾರಾ? ಮುಸ್ಲಿಮರು ಹಿಂದೂಗಳಾಗಲ್ವಾ? ಹಿಂದೂಗಳು ಮುಸ್ಲಿಂ ಆಗಲ್ವಾ?” ಎಂದು ಅವರು ಪ್ರಶ್ನಿಸಿದರು.

“ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಯಾರಿಗೂ ತಡೆ ಇಲ್ಲ. ಹಿಂದೂ ದೇವಾಲಯಗಳಿಗೆ ಹಲವಾರು ಧರ್ಮಗಳವರು ಭೇಟಿ ಕೊಡುತ್ತಾರೆ. ಇದು ಸಂವಿಧಾನಪಾಲನೆಯ ರಾಷ್ಟ್ರ. ಮದುವೆಯಾದ ದಂಪತಿಗಳಲ್ಲಿ ಧರ್ಮ ಕಲ್ಪನೆ ಬೇರೆ ಬೇರೆ ಆಗಬಹುದು, ಆದರೆ ಮಕ್ಕಳಿಗೆ ಆಯ್ಕೆಯಿರಬೇಕು,” ಎಂದು ಅವರು ತಿಳಿಸಿದರು.

“ಬಾನು ಮುಸ್ತಾಕ್ ಕನ್ನಡದಲ್ಲಿ ಬರೆದಿದ್ದಾರೆ. ಯಾರು ಯಾವ ಧರ್ಮದವರು ಎಂದು ನಾವು ಪ್ರಶ್ನೆ ಮಾಡುವಲ್ಲ. ನಾವು ಧರ್ಮದ ಮೇಲೆ ರಾಜಕಾರಣ ಮಾಡುವುದಿಲ್ಲ; ನಾವು ಜಾತ್ಯಾತೀತ ತತ್ವಗಳಲ್ಲಿ ನಂಬಿಕೆ ಇಡುವವರು,” ಎಂದು ಡಿಕೆಶಿ ಹೇಳಿದ್ದಾರೆ.

ಡಿಕೆಶಿಯ ಹೇಳಿಕೆಗೆ ಯದುವೀರ್ ಕಿರಿಆಲಿಸಿ

ಮೈಸೂರು: “ಚಾಮುಂಡಿಬೆಟ್ಟ ಹಿಂದೂಗಳ ಆಸ್ತಿಯಲ್ಲ” ಎಂಬ ಡಿಕೆಶಿಯ ಹೇಳಿಕೆಯನ್ನು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ ಅವರು, “ಗೌರಿ ಹಬ್ಬದ ಪವಿತ್ರ ದಿನವೇ ಇಂತಹ ಹೇಳಿಕೆ ನೀಡಿ ಅವರು ಹಿಂದೂ ಸಂಪ್ರದಾಯ ಮತ್ತು ನಂಬಿಕೆಗಳಿಗೆ ಧಕ್ಕೆಯಾಗುವ ಕೆಲಸ ಮಾಡಿದ್ದಾರೆ. ಚಾಮುಂಡಿಬೆಟ್ಟವು ಶಕ್ತಿ ಪೀಠವಾಗಿದ್ದು ಶಾಸ್ತ್ರಸಮ್ಮತವಾಗಿದೆ. ಕೋಟ್ಯಂತರ ಹಿಂದೂಗಳು ಪೂಜಿಸುವ ಈ ಸ್ಥಳ ಯಾವಾಗಲೂ ಹಿಂದೂಗಳ ಆಸ್ತಿಯಾಗಿಯೇ ಇರುತ್ತದೆ,” ಎಂದು ಹೇಳಿದ್ದಾರೆ.

“ಕರ್ನಾಟಕದ ಜನರು ಎಲ್ಲಾ ಧರ್ಮಗಳಿಗೆ ಗೌರವವಿಡುತ್ತಾರೆ. ಆದರೆ ಹಿಂದೂ ದೇವಾಲಯಗಳು, ಹಬ್ಬಗಳು ಮತ್ತು ಸಂಪ್ರದಾಯಗಳ ಮೇಲಿನ ನಿರಂತರ ದಾಳಿಯನ್ನು ಎಂದಿಗೂ ಸಹಿಸಲಾರರು,” ಎಂದು ಯದುವೀರ್ ಎಚ್ಚರಿಸಿದ್ದಾರೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!