ಅಮೆರಿಕಾದಲ್ಲಿ ಕುಳಿತು ಮುಧೋಳ ಕಳ್ಳತನ ತಪ್ಪಿಸಿದ ಮಗಳು!

ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ, ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು. ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ ಘಟನೆಯೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಹೆಚ್ಚಾಗಿದೆ. ಅಮೇರಿಕಾದಲ್ಲಿ ನೆಲೆಸಿದ ಮಗಳಿಂದ ಕಳ್ಳರ ಕೃತ್ಯ ಬಯಲಾಗಿದೆ. ಹನುಮಂತಗೌಡ ಸಂಕಪ್ಪನವರ ಎಂಬುವವರ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಸಿಸಿ ಕ್ಯಾಮರಾದ ದೃಶ್ಯಗಳು ತನ್ನ ಮೊಬೈಲ್ ವೀಕ್ಷಿಸುವಂತೆ ಹನುಮಂತಗೌಡ ಸಂಕಪ್ಪನವರ ಮಗಳು ವ್ಯವಸ್ಥೆ ಮಾಡಿಕೊಂಡಿದ್ದರು. ಮನೆಯ ಸಿಸಿ ಕ್ಯಾಮರಾದ ವಿಡಿಯೋ ನೋಡುವಾಗ ರಾತ್ರಿ ವೇಳೆ ತಮ್ಮ ಮನೆಗೆ ಯಾರೋ ಕಳ್ಳರು ಕಂಪೌಂಡ್ ದಾಟಿ ಬಂದಿರುವುದು ಕಂಡಿದೆ. ಅಮೇರಿಕಾದಲ್ಲಿ ಕುಳಿತೇ ತನ್ನ ಮೊಬೈಲ್‌ನಲ್ಲಿ ಸಿಸಿ ಕ್ಯಾಮರಾ ದೃಶ್ಯಗಳನ್ನು ಹನುಮಂತಗೌಡ ಸಂಕಪ್ಪನವರ ಮಗಳು ಶೃತಿ ಗಮನಿಸಿದ್ದಾರೆ. ತಕ್ಷಣವೇ ತಂದೆ ಹನುಮಂತಗೌಡ ಸಂಕಪ್ಪನವರ್ ಗೆ ಕರೆ ಮಾಡಿದ ಮಗಳು ಶೃತಿ ಆಲರ್ಟ್ ಆಗಿರುವಂತೆ ಹೇಳಿದ್ದಾರೆ. ನಂತರ‌ ತಂದೆ ಹನುಮಂತಗೌಡ ಸಂಕಪ್ಪನವರ ಬಾಗಿಲು ತೆರೆದಾಗ ಕಳ್ಳರು ಹೆದರಿಕೊಂಡು ಎಸ್ಕೇಪ್ ಆಗಿದ್ದಾರೆ. ಅಮೇರಿಕದಲ್ಲಿ ನೆಲೆಸಿರುವ ಹನುಮಂತಗೌಡ ಸಂಕಪ್ಪನವರ ಮಗಳು ಶೃತಿ ಸಂಕಪ್ಪನವರ ವೃತ್ತಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರ್ . ಶೃತಿ ತಮ್ಮ ಮೊಬೈಲ್‌ ನಲ್ಲಿ ಸಿಸಿ ಕ್ಯಾಮೆರಾ ದೃಶ್ಯ ಗಮನಿಸಿ ಮನೆಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ತಂದೆ ಬಾಗಿಲು ತೆರೆಯುತ್ತಿದ್ದಂತೆ ಕಳ್ಳರು ಎಸ್ಕೇಪ್ ಆಗಿದ್ದಾರೆ. ರಾಜಾರೋಷವಾಗಿ ಮನೆಗಳ್ಳತನ ಮಾಡಲು ಬಂದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಧೋಳ ನಗರದ ಸಿದ್ದರಾಮೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!