ಅಮೆರಿಕಾದಲ್ಲಿ ಕುಳಿತು ಮುಧೋಳ ಕಳ್ಳತನ ತಪ್ಪಿಸಿದ ಮಗಳು!

ಈಗಿನ ಕಾಲದಲ್ಲಿ ತಂತ್ರಜ್ಞಾನ ಬಹಳಷ್ಟು ಮುಂದುವರಿದಿದೆ. ಅಮೆರಿಕಾದಲ್ಲಿ ಕುಳಿತು ದೂರದ ಬಾಗಲಕೋಟೆಯ ಮುಧೋಳ ನಗರದಲ್ಲಿ ಏನಾಗುತ್ತಿದೆ, ತಮ್ಮ ಮನೆಯ ಹತ್ತಿರ ಯಾರು ಬಂದಿದ್ದಾರೆ ಎಂಬುದನ್ನು ವಿಡಿಯೋದಲ್ಲಿ ನೋಡಬಹುದು. ಮುಧೋಳದಲ್ಲಿ ನಡೆಯುವ ಘಟನೆಯನ್ನು ದೂರದ ಅಮೆರಿಕಾದಲ್ಲಿ ನೋಡಿ ಅಪರಾಧ ಕೃತ್ಯವನ್ನು ತಪ್ಪಿಸಿದ ಚಾಣಾಕ್ಷ ಘಟನೆಯೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಚಡ್ಡಿ ಗ್ಯಾಂಗ್ ಕಳ್ಳರ ಹಾವಳಿ ಹೆಚ್ಚಾಗಿದೆ. ಅಮೇರಿಕಾದಲ್ಲಿ ನೆಲೆಸಿದ ಮಗಳಿಂದ ಕಳ್ಳರ ಕೃತ್ಯ ಬಯಲಾಗಿದೆ. ಹನುಮಂತಗೌಡ ಸಂಕಪ್ಪನವರ ಎಂಬುವವರ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ಸಿಸಿ ಕ್ಯಾಮರಾದ ದೃಶ್ಯಗಳು ತನ್ನ ಮೊಬೈಲ್ ವೀಕ್ಷಿಸುವಂತೆ ಹನುಮಂತಗೌಡ ಸಂಕಪ್ಪನವರ ಮಗಳು ವ್ಯವಸ್ಥೆ ಮಾಡಿಕೊಂಡಿದ್ದರು. ಮನೆಯ ಸಿಸಿ ಕ್ಯಾಮರಾದ ವಿಡಿಯೋ ನೋಡುವಾಗ ರಾತ್ರಿ ವೇಳೆ ತಮ್ಮ ಮನೆಗೆ ಯಾರೋ ಕಳ್ಳರು ಕಂಪೌಂಡ್ ದಾಟಿ ಬಂದಿರುವುದು ಕಂಡಿದೆ. ಅಮೇರಿಕಾದಲ್ಲಿ ಕುಳಿತೇ ತನ್ನ ಮೊಬೈಲ್‌ನಲ್ಲಿ ಸಿಸಿ ಕ್ಯಾಮರಾ ದೃಶ್ಯಗಳನ್ನು ಹನುಮಂತಗೌಡ ಸಂಕಪ್ಪನವರ ಮಗಳು ಶೃತಿ ಗಮನಿಸಿದ್ದಾರೆ. ತಕ್ಷಣವೇ ತಂದೆ ಹನುಮಂತಗೌಡ ಸಂಕಪ್ಪನವರ್ ಗೆ ಕರೆ ಮಾಡಿದ ಮಗಳು ಶೃತಿ ಆಲರ್ಟ್ ಆಗಿರುವಂತೆ ಹೇಳಿದ್ದಾರೆ. ನಂತರ‌ ತಂದೆ ಹನುಮಂತಗೌಡ ಸಂಕಪ್ಪನವರ ಬಾಗಿಲು ತೆರೆದಾಗ ಕಳ್ಳರು ಹೆದರಿಕೊಂಡು ಎಸ್ಕೇಪ್ ಆಗಿದ್ದಾರೆ. ಅಮೇರಿಕದಲ್ಲಿ ನೆಲೆಸಿರುವ ಹನುಮಂತಗೌಡ ಸಂಕಪ್ಪನವರ ಮಗಳು ಶೃತಿ ಸಂಕಪ್ಪನವರ ವೃತ್ತಿಯಲ್ಲಿ ಸಾಪ್ಟ್ ವೇರ್ ಇಂಜಿನಿಯರ್ . ಶೃತಿ ತಮ್ಮ ಮೊಬೈಲ್‌ ನಲ್ಲಿ ಸಿಸಿ ಕ್ಯಾಮೆರಾ ದೃಶ್ಯ ಗಮನಿಸಿ ಮನೆಗೆ ಕರೆ ಮಾಡಿ ಎಚ್ಚರಿಸಿದ್ದಾರೆ. ತಂದೆ ಬಾಗಿಲು ತೆರೆಯುತ್ತಿದ್ದಂತೆ ಕಳ್ಳರು ಎಸ್ಕೇಪ್ ಆಗಿದ್ದಾರೆ. ರಾಜಾರೋಷವಾಗಿ ಮನೆಗಳ್ಳತನ ಮಾಡಲು ಬಂದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಧೋಳ ನಗರದ ಸಿದ್ದರಾಮೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!