ನಾವು ಸದಾ ನಿಮ್ಮೊಂದಿಗಿದ್ದೇವೆ…..RCB ಭಾವುಕ ಪೋಸ್ಟ್ !

ಇಂಡಿಯನ್ ಪ್ರೀಮಿಯರ್ ಲೀಗ್ ​ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ಎಂಬುದು ‘ಕಪ್​’ಚುಕ್ಕೆ. ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಅಸುನೀಗಿದ್ದರು. ಈ ದುರ್ಘಟನೆಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ.

ಇದೀಗ ಬರೋಬ್ಬರಿ 84 ದಿನಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಒಂದು ಕಾಣಿಸಿಕೊಂಡಿದೆ. ಅದು ಸಹ ಅಭಿಮಾನಿಗಳಿಗಾಗಿ ಹೊಸ ಭರವಸೆಯನ್ನು ನೀಡುವ ಮೂಲಕ ಎಂಬುದು ವಿಶೇಷ.

ಆರ್​ಸಿಬಿ ಪೋಸ್ಟ್​ ಸಾರಾಂಶ ಹೀಗಿದೆ:
ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.

ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.

ಅದರ ಫಲವೇ ಆರ್‌ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.

ಇಂದು ನಾವು ಮರಳಿದ್ದೇವೆ. ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.

ಆರ್‌ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.

 

Related Posts

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!