ನಾವು ಸದಾ ನಿಮ್ಮೊಂದಿಗಿದ್ದೇವೆ…..RCB ಭಾವುಕ ಪೋಸ್ಟ್ !

ಇಂಡಿಯನ್ ಪ್ರೀಮಿಯರ್ ಲೀಗ್ ​ ಸೀಸನ್-18ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಜೂನ್ 4 ಎಂಬುದು ‘ಕಪ್​’ಚುಕ್ಕೆ. ಬೆಂಗಳೂರಿನಲ್ಲಿ ನಡೆದ RCB ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಅಸುನೀಗಿದ್ದರು. ಈ ದುರ್ಘಟನೆಯ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ.

ಇದೀಗ ಬರೋಬ್ಬರಿ 84 ದಿನಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಒಂದು ಕಾಣಿಸಿಕೊಂಡಿದೆ. ಅದು ಸಹ ಅಭಿಮಾನಿಗಳಿಗಾಗಿ ಹೊಸ ಭರವಸೆಯನ್ನು ನೀಡುವ ಮೂಲಕ ಎಂಬುದು ವಿಶೇಷ.

ಆರ್​ಸಿಬಿ ಪೋಸ್ಟ್​ ಸಾರಾಂಶ ಹೀಗಿದೆ:
ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.

ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು. ನೋವನ್ನೇ ಶ್ರದ್ಧೆಯಾಗಿ, ನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.

ಅದರ ಫಲವೇ ಆರ್‌ಸಿಬಿ ಕೇರ್ಸ್. ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.

ಇಂದು ನಾವು ಮರಳಿದ್ದೇವೆ. ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.

ಆರ್‌ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.

 

Related Posts

ಕ್ವಾಲಿಫೈಯರ್ ಆಡದೆಯೇ ಆರ್‌ಸಿಬಿ ಫೈನಲ್ ತಲುಪಬಹುದು..!

ಐಪಿಎಲ್ 2026 ಕ್ವಾಲಿಫೈಯರ್ 1 ರಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಧರ್ಮಶಾಲಾದಲ್ಲಿ ಸೆಣಸಾಡಲಿವೆ. ಈ ಪಂದ್ಯ ಮಳೆಯಿಂದ ರದ್ದಾದರೆ, ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತ ತಂಡಕ್ಕೆ ಕ್ವಾಲಿಫೈಯರ್ 2 ಆಡಲು ಮತ್ತೊಂದು ಅವಕಾಶವಿದ್ದರೂ,…

ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ವಿಶ್ವದಾಖಲೆ: ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ!

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ದೆಹಲಿ ತಂಡವನ್ನು ಮಣಿಸಿದ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿದೆ. ಇದರ ಜೊತೆಗೆ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲೇ ಯಾರೂ ಮಾಡದ ಅತಿದೊಡ್ಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್ ಇತಿಹಾಸದಲ್ಲಿ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!