ಪ್ರಜ್ವಲ್ ರೇವಣ್ಣ ಈಗ ಜೈಲಿನಲ್ಲಿ ಕೂಲಿಕೆಲಸಗಾರ…!

ಪ್ರಜ್ವಲ್ ರೇವಣ್ಣ
ಜೈಲಿನಲ್ಲಿ ಕೃಷಿ ಕೂಲಿ ಕೆಲಸ ಮಾಡುವುದಾಗಿ ಹೇಳಿದ ಪ್ರಜ್ವಲ್
ಕೃಷಿ ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸ ಮಾಡುವ ಪ್ರಜ್ವಲ್
ಅಪರಾಧಿಗಳು ಜೈಲಿನಲ್ಲಿ ಯಾವುದಾದರೂ ಕೆಲಸ ಮಾಡಲೇಬೇಕು
ರೇಪ್ ಕೇಸ್ ನಲ್ಲಿ ಅಪರಾಧಿ ಆಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿರುವ ಹಾಸನದ ಮಾಜಿ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ, ಕೊನೆಗೂ ಜೈಲಿನಲ್ಲಿ ಏನು ಕೆಲಸ ಮಾಡುತ್ತೇನೆ ಎಂದು ಆಯ್ಕೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿ ಆರೋಪ ಸಾಬೀತಾದ ಅಪರಾಧಿಗಳು ಯಾವುದಾದರೊಂದು ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು. ಜೈಲಿನಲ್ಲಿ ಈ ಕೂಲಿ ಕೆಲಸ ಮಾಡಿದ್ದಕ್ಕೆ ಕೂಲಿ ಹಣವನ್ನು ನೀಡಲಾಗುತ್ತೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನಲ್ಲಿ ಈಗ ತಾನು ಕೃಷಿ ಕೆಲಸ ಮಾಡುತ್ತೇನೆ. ಜೊತೆಗೆ ಅಡ್ಮಿನಿಸ್ಟ್ರೇಟೀವ್ ಕೆಲಸಗಳನ್ನು ಮಾಡುತ್ತೇನೆ ಎಂದು ಜೈಲು ಅಧಿಕಾರಿಗಳಿಗೆ ಹೇಳಿದ್ದಾರೆ. ಹೀಗಾಗಿ ಈಗ ಪ್ರಜ್ವಲ್ , ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೃಷಿ ಕೂಲಿ ಕೆಲಸಗಾರ. ಜೊತೆಗೆ ಅಡ್ಮಿನಿಸ್ಟ್ರೇಟಿವ್ ಕೆಲಸಗಳ ಕೂಲಿ ಕೆಲಸಗಾರ.
ಪ್ರಜ್ವಲ್ ಗೆ ಜೈಲಿನಲ್ಲಿ ಮಾಡಿದ ಕೆಲಸಕ್ಕೆ ದಿನಕ್ಕೆ 540 ರೂಪಾಯಿ ಕೂಲಿ ಸಿಗಲಿದೆ. ಒಂದು ವರ್ಷ ಆದ ನಂತರ ದಿನಕ್ಕೆ 615 ರೂಪಾಯಿ ಕೂಲಿ ನಿಗದಿಯಾಗಲಿದೆ.
ಜೈಲಿನ ಹೊರಗೆ ಹತ್ತಾರು ಜನಕ್ಕೆ ತನ್ನ ತೋಟದಲ್ಲೇ ಪ್ರಜ್ವಲ್ ರೇವಣ್ಣ ಕೆಲಸ ಕೊಟ್ಟಿದ್ದ. ಇಡೀ ಲೋಕಸಭಾ ಕ್ಷೇತ್ರಕ್ಕೆ ಎಂಪಿಯಾಗಿದ್ದ. ಪ್ರಜ್ವಲ್ ಗೆ ಜೈಲು ಹೊರಗೆ ಎಲ್ಲದ್ದಕ್ಕೂ ಅಳುಗಳು ಇದ್ದರು. ಆದರೇ, ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣನೇ ಕೂಲಿ ಕೆಲಸ ಮಾಡಿ, ನಿತ್ಯದ ಕೂಲಿಯಾಗಿ 540 ರೂಪಾಯಿ ಹಣವನ್ನು ಪಡೆಯಬೇಕಾದ ಸ್ಥಿತಿ ಬಂದಿದೆ.

ಜೈಲು ಕಾಯ್ದೆ ಪ್ರಕಾರ ಜೈಲು ಅಧಿಕಾರಿಗಳು ನೀಡುವ ಕೆಲಸವನ್ನು ಸಜಾ ಬಂಧಿಗಳು ಮಾಡಬೇಕು ಅಥವಾ ವ್ಯಾಸಂಗಕ್ಕೆ ಅನುಗುಣವಾಗಿ ಕೆಲಸ ಮಾಡ್ತೀನಿ ಅಂತ ಜೈಲು ಅಧಿಕಾರಿಗಳಿಗೆ ತಿಳಿಸಬೇಕು. ಈಗ ಪ್ರಜ್ವಲ್ ರೇವಣ್ಣ ತಾನು ಕೃಷಿ ಕೆಲಸ ಹಾಗೂ ಅಡ್ಮಿನಿಸ್ಟ್ರೇಟಿವ್ ಕೆಲಸ ಮಾಡುವುದಾಗಿ ಜೈಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!