ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.

ಗುರುವಾರ ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ನಟ ಶರಣ್, ಹಿರಿಯ ನಟಿ ಪ್ರೇಮ, ಡಾಲಿ ಧನಂಜಯ್, ಚೈತ್ರಾ ಆಚಾರ್, ನಾಗಭೂಷಣ, ಗಾಯಕ ವಿಜಯಪ್ರಕಾಶ್, ನಟ ವಿಜಯ ರಾಘವೇಂದ್ರ ಸೇರಿದಂತೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.

Related Posts

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!