ಇಲ್ಲಿವೆ ಅನುಶ್ರೀ ಮದುವೆ ಫೋಟೋಗಳು…

ಆ್ಯಂಕರ್ ಅನುಶ್ರೀ ಯಾವ ಊರಿಗೆ ಹೋದರೂ, ಯಾವ ಸ್ಟೇಜಿಗೆ ಹೋದರೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡರೂ ಅದೊಂದೇ ಪ್ರಶ್ನೆ ಎದುರಾಗ್ತಿತ್ತು. ಅನುಶ್ರೀ ಮದುವೆ ಯಾವಾಗ? ಅನ್ನೋ ಪ್ರಶ್ನೆ ಆಗಿಂದಾಗೇ ಕೇಳಿ ಬರ್ತಿತ್ತು. ಈ ಪ್ರಶ್ನೆಗೀಗ ಉತ್ತರ ಸಿಕ್ಕಿದ್ದು, ಪ್ರೀತಿಸಿದ ಹುಡುಗನ ಜೊತೆಗೆ ಸಪ್ತಪದಿ ತುಳಿದಿದ್ದಾರೆ.

ಆ್ಯಂಕರ್ ಅನುಶ್ರೀ ಯಾವ ಊರಿಗೆ ಹೋದರೂ, ಯಾವ ಸ್ಟೇಜಿಗೆ ಹೋದರೂ ಸೋಷಿಯಲ್ ಮೀಡಿಯಾದಲ್ಲಿ ಕಾಣಿಸಿಕೊಂಡರೂ ಅದೊಂದೇ ಪ್ರಶ್ನೆ ಎದುರಾಗ್ತಿತ್ತು. ಅನುಶ್ರೀ ಮದುವೆ ಯಾವಾಗ? ಅನ್ನೋ ಪ್ರಶ್ನೆ ಆಗಿಂದಾಗೇ ಕೇಳಿ ಬರ್ತಿತ್ತು. ಈ ಪ್ರಶ್ನೆಗೀಗ ಉತ್ತರ ಸಿಕ್ಕಿದ್ದು, ಪ್ರೀತಿಸಿದ ಹುಡುಗನ ಜೊತೆಗೆ ಸಪ್ತಪದಿ ತುಳಿದಿದ್ದಾರೆ.

ಅನುಶ್ರೀ.. ಕನ್ನಡ ಕಿರುತೆರೆಯ ಚಿರ ಪರಿಚಿತ ಹೆಸರು. ಅನುಶ್ರೀ ಗೊತ್ತಿಲ್ಲದಂತ ಟಿ.ವಿ ವೀಕ್ಷಕರೇ ಇಲ್ಲ. ಆ ಮಟ್ಟಿಗಿನ ಜನಪ್ರಿಯತೆ ಗಳಿಸಿರೋ ನಿರೂಪಕಿ‌. ಹರಳು ಉರಿದಂತ ತಮ್ಮ ಮಾತುಗಳಿಂದ ಇಡೀ ಶೋವನ್ನು, ವೇದಿಕೆಯನ್ನು ಹಿಡಿದಿಟ್ಟುಕೊಳ್ಳುವ ಶಕ್ತಿ ಅನುಶ್ರೀಗಿದೆ. ಇಂತಹ ಅನುಶ್ರೀಗೆ ಹೋದಲ್ಲಿ ಬಂದಲ್ಲಿ, ಒಂದೇ ಪ್ರಶ್ನೆ ಎದುರಾಗ್ತಿತ್ತು. ಅನುಶ್ರೀ ಮದುವೆ ಯಾವಾಗ ಅನ್ನೋ ಪ್ರಶ್ನೆ ಕೇಳಿ, ಕೇಳಿ ಅನುಶ್ರೀಗೂ. ಮದುವೆಯಾಗೋ ಮನಸ್ಸಾಯ್ತು ಅನ್ನಿಸುತ್ತೆ. ಕೊನೆಗೂ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ‌.

ಅನುಶ್ರೀ ಮದುವೆ ವಿಚಾರವಾಗಿ ಅಂತೆ-ಕಂತೆ ವಿಚಾರಗಳು ಬಂದಾಗಲೇ ಅನುಶ್ರೀಗೆ ಶುಭ ಹಾರೈಕೆಗಳ ಸುರಿಮಳೆ ಹರಿದಿತ್ತು. ನೆಚ್ಚಿನ ನಿರೂಪಕಿಯ ಮದುವೆ ಸುದ್ದಿ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ರು. ಅದ್ರಲ್ಲೂ ಹುಡುಗನ ಫೋಟೊ ರಿವೀಲ್ ಆದ ಬಳಿಕ ಹುಡುಗ ಯಾರು..? ಹುಡುಗನ ಹಿನ್ನೆಲೆ ಏನು..? ಅನ್ನೋ ಹುಡುಕಾಟ ಶುರುವಾಗಿದ್ದವು.

ಫೈನಲಿ, ಇಂದು ಪ್ರೀತಿಯ ಗೆಳೆಯ ರೋಷನ್ ಜೊತೆಗೆ ಅನುಶ್ರೀ ಹಸೆಮಣೆ ಏರಿದರು. ಕನಕಪುರ ರಸ್ತೆಯ ಕಗ್ಗಲಿಪುರ ಬಳಿಯ ಖಾಸಗಿ ಸ್ಥಳದಲ್ಲಿ ಮದುವೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ಅನುಶ್ರೀ ಆಪ್ತರು, ಕುಟುಂಬಸ್ಥರು ಹಾಗೂ ಸ್ಯಾಂಡಲ್ವುಡ್ ತಾರೆಯರು ಭಾಗಿಯಾಗಿದ್ರು.

ಅನುಶ್ರೀಯನ್ನು ನಿರೂಪಕಿ ಅನ್ನೋದಕ್ಕಿಂತ ಹೆಚ್ಚಾಗಿ, ಸ್ನೇಹಿತೆಯಂತೆ ಕಂಡವರು ಜಾಸ್ತಿ. ಹೀಗಾಗಿಯೇ ಮದುವೆಗೆ ಸ್ಯಾಂಡಲ್ವುಡ್ ತಾರೆಯರು ಕುಟುಂಬಸ್ಥರಾಗಿ ಆಗಮಿಸಿದ್ರು. ಶಿವಣ್ಣ, ಡಾಲಿ ಧನಂಜಯ, ರಚಿತಾ ರಾಮ್, ರಾಜ್ ಬಿ ಶೆಟ್ಟಿ, ತರುಣ್ ಸುಧೀರ್, ಶರಣ್, ಪ್ರೇಮ್, ವಿಜಯ್ ರಾಘವೇಂದ್ರ. ಹೀಗೆ ಸಾಲು ಸಾಲು ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿಯಾಗಿದ್ರು.

ಮದುವೆ ಸಮಾರಂಭದಲ್ಲಿ ತುಂಬಾ ಹೊತ್ತು ಕಾಲ ಕಳೆದ ಶಿವಣ್ಣ, ಮದುವೆಯ ನಂತರ ಅನುಶ್ರೀ ಮದುವೆಯ ವಿಚಾರವಾಗಿ ಮಾತನಾಡಿದ್ರು. ಅನುಶ್ರೀ ನಮ್ಮ ಮನೆಯ ಸದಸ್ಯೆ ಅಂತಾ ಪ್ರೀತಿಯಿಂದ ಮಾತನಾಡಿದ್ರು.

ಮದುವೆಯ ನಂತರ ಮಾಧ್ಯಮಗಳೊಂದಿಗೆ ನವ ದಂಪತಿ ಪ್ರೀತಿಯಿಂದ ಹಾರೈಸಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ರು. ಅಲ್ಲದೇ ತಮ್ಮ ಲವ್‌ ಕಂ ಅರೇಂಜ್ಡ್ ಮ್ಯಾರೇಜ್ ಮಾಹಿತಿಯನ್ನು ಪ್ರೀತಿಯಿಂದ ಹಂಚಿಕೊಂಡ್ರು.

ಒಟ್ಟಾರೆ ಅನುಶ್ರೀ ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಕಾರ್ಯಕ್ರಮ ನಿರೂಪಣೆಯಂತೆ‌. ಜೀವನದ ನಿರೂಪಣೆಯೂ ಯಶಸ್ವಿ ಆಗಲಿ ಅನ್ನೋದು ಅಭಿಮಾನಿಗಳ ಹಾರೈಕೆ ಆಗಿದೆ.

Related Posts

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

    ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು