ಗೂಗಲ್ ಮ್ಯಾಪ್ ತಂಡದವರ ಮೇಲೆ ಹಳ್ಳಿಗರ ದಾಳಿ…!

ಗೂಗಲ್ ಮ್ಯಾಪ್​(Google Map) ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿ ಜನ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಟಂಪುರದಲ್ಲಿ ನಡೆದಿದೆ. ಠಾಣೆಯ ಬಿರ್ಹಾರ್ ಔಟ್‌ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ ಅಳವಡಿಸಲಾದ ಕಾರನ್ನು ಕಳ್ಳರ ಕಾರು ಎಂದು ತಪ್ಪಾಗಿ ಭಾವಿಸಿದ್ದರು.

 

ಗ್ರಾಮಸ್ಥರು ಕಾರನ್ನು ಸುತ್ತುವರೆದು ಗದ್ದಲ ಸೃಷ್ಟಿಸಲು ಪ್ರಾರಂಭಿಸಿದಾಗ,ಸಿಬ್ಬಂದಿ ಭಯಭೀತರಾಗಿದ್ದರು.ಪೊಲೀಸರಿಗೆ ಕರೆ ಮಾಡಿದ್ದರು.ಸಾಧ್ ಪೊಲೀಸರು ಸ್ಥಳಕ್ಕೆ ತಲುಪಿ ಜನರಿಗೆ ವಿವರಿಸಿದರು. ಇದಾದ ನಂತರ ಕಾರನ್ನು ಕಳುಹಿಸಲಾಯಿತು.

ಸಾಧ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಘಟನೆಗಳಿಂದ ಜನರು ಭಯದಲ್ಲೇ ಕಾಲ ಕಳೆಯುತ್ತಿದ್ದಾರೆ. ಶಹಪುರ್ ಉಮ್ರಾ ಗ್ರಾಮದಲ್ಲಿ ಒಂಬತ್ತು ತಿಂಗಳ ಶಿಶುವಿನ ಹಣೆಗೆ ಬಂದೂಕಿಟ್ಟು, ದರೋಡೆ ಮಾಡಿದ ಪ್ರಕರಣವೂ ವರದಿಯಾಗಿದೆ.

 

ಮತ್ತಷ್ಟು ಓದಿ: ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು

ಗುರುವಾರ, ಗೂಗಲ್‌ನ ಸ್ಟ್ರೀಟ್ ವ್ಯೂ ಮ್ಯಾಪಿಂಗ್ ಕಾರು, 360 ಡಿಗ್ರಿ ಕ್ಯಾಮೆರಾ ಹೊತ್ತು ಹಾದುಹೋದಾಗ, ಊರಿಗೆ ಕಳ್ಳರು ಬಂದಿದ್ದಾರೆಂಬ ವದಂತಿ ಶರವೇಗದಲ್ಲಿ ಹಬ್ಬಿತ್ತು. ಇದಾದ ನಂತರ, ಗ್ರಾಮಸ್ಥರು ಕಾರನ್ನು ಎಲ್ಲಾ ಕಡೆಯಿಂದ ಸುತ್ತುವರೆದು ಗದ್ದಲ ಸೃಷ್ಟಿಸಲು ಪ್ರಾರಂಭಿಸಿದರು. ಕಾರನ್ನು ನಿಲ್ಲಿಸಲು ಅವರು ರಸ್ತೆಯ ಮೇಲೆ ಮರದ ದಿಮ್ಮಿಗಳನ್ನು ಹಾಕಿದರು. ಕಾರಿನಲ್ಲಿದ್ದ ಸಿಬ್ಬಂದಿ ಭಯಭೀತರಾಗಿದ್ದರು.

ಅವರು ತಕ್ಷಣ ಪೊಲೀಸರಿಗೆ ಕರೆ ಮಾಡಿದರು. ಮಾಹಿತಿಯ ಮೇರೆಗೆ ಪೊಲೀಸರು ಆಗಮಿಸಿ ಜನರಿಗೆ ವಿವರಿಸಿದರು. ಗ್ರಾಮಸ್ಥರಿಗೆ ವಿವರಿಸಿದ ನಂತರ ಕಾರನ್ನು ಸುರಕ್ಷಿತವಾಗಿ ಕಳುಹಿಸಲಾಯಿತು ಎಂದು ಇನ್ಸ್‌ಪೆಕ್ಟರ್ ಹೇಳಿದರು.

ತಡರಾತ್ರಿ ಕಳ್ಳರು ಕಾರಿನಲ್ಲಿ ಬಂದು ಕಳ್ಳತನ ಮಾಡಿರುವ ಸಾಕಷ್ಟು ಘಟನೆಗಳು ಅಲ್ಲಿ ಅಂಭವಿಸಿದೆ. ಹೀಗಾಗಿ ಜನರು ಜಾಗರೂಕರಾಗಿದ್ದು, ಅಲ್ಲಿ ಓಡಾಡುವ ಎಲ್ಲಾ ವಾಹನಗಳ ಮೇಲೆ ನಿಗಾ ಇಡುತ್ತಿದ್ದಾರೆ. ಆಗಸ್ಟ್​ 28ರಂದು ಗೂಗಲ್ ಮ್ಯಾಪ್ ತಂಡವುಪೊಲೀಸರು ಅಥವಾ ಗ್ರಾಮ ಅಧಿಕಾರಿಗಳಿಗೆ ಪೂರ್ವ ಸೂಚನೆ ನೀಡದೆ ರಸ್ತೆ ಮಟ್ಟದ ಸಮೀಕ್ಷೆಯನ್ನು ನಡೆಸುತ್ತಿತ್ತು. ಆಗ ಊರಿನವರು ಅವರು ಕಳ್ಳರೆಂದು ಥಳಿಸಿದ್ದಾರೆ.

ಪೊಲೀಸರು ಗ್ರಾಮಸ್ಥರು ಮತ್ತು ಸಮೀಕ್ಷಾ ತಂಡವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಗ್ರಾಮಸ್ಥರು ನಮ್ಮನ್ನು ಸುತ್ತುವರೆದರು. ಅವರು ನಮ್ಮ ದಾಖಲೆಗಳನ್ನು ಪರಿಶೀಲಿಸಿದ್ದರೆ, ಅವರಿಗೆ ನಮ್ಮ ಉದ್ದೇಶ ಅರ್ಥವಾಗುತ್ತಿತ್ತು ಎಂದು ಆ ತಂಡದ ನಾಯಕ ಸಂದೀಪ್ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು