ಗೂಗಲ್ ಮ್ಯಾಪ್ ತಂಡದವರ ಮೇಲೆ ಹಳ್ಳಿಗರ ದಾಳಿ…!

ಗೂಗಲ್ ಮ್ಯಾಪ್​(Google Map) ತಂಡದ ಸದಸ್ಯರನ್ನು ಕಳ್ಳರೆಂದು ಭಾವಿಸಿ ಹಳ್ಳಿ ಜನ ಥಳಿಸಿರುವ ಘಟನೆ ಉತ್ತರ ಪ್ರದೇಶದ ಘಟಂಪುರದಲ್ಲಿ ನಡೆದಿದೆ. ಠಾಣೆಯ ಬಿರ್ಹಾರ್ ಔಟ್‌ಪೋಸ್ಟ್ ಪ್ರದೇಶದ ಮಹೋಲಿಯಾ ಗ್ರಾಮದ ಗ್ರಾಮಸ್ಥರು ಗೂಗಲ್ ಮ್ಯಾಪ್ ಕ್ಯಾಮೆರಾ ಅಳವಡಿಸಲಾದ ಕಾರನ್ನು ಕಳ್ಳರ ಕಾರು ಎಂದು ತಪ್ಪಾಗಿ ಭಾವಿಸಿದ್ದರು.

 

ಗ್ರಾಮಸ್ಥರು ಕಾರನ್ನು ಸುತ್ತುವರೆದು ಗದ್ದಲ ಸೃಷ್ಟಿಸಲು ಪ್ರಾರಂಭಿಸಿದಾಗ,ಸಿಬ್ಬಂದಿ ಭಯಭೀತರಾಗಿದ್ದರು.ಪೊಲೀಸರಿಗೆ ಕರೆ ಮಾಡಿದ್ದರು.ಸಾಧ್ ಪೊಲೀಸರು ಸ್ಥಳಕ್ಕೆ ತಲುಪಿ ಜನರಿಗೆ ವಿವರಿಸಿದರು. ಇದಾದ ನಂತರ ಕಾರನ್ನು ಕಳುಹಿಸಲಾಯಿತು.

ಸಾಧ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಘಟನೆಗಳಿಂದ ಜನರು ಭಯದಲ್ಲೇ ಕಾಲ ಕಳೆಯುತ್ತಿದ್ದಾರೆ. ಶಹಪುರ್ ಉಮ್ರಾ ಗ್ರಾಮದಲ್ಲಿ ಒಂಬತ್ತು ತಿಂಗಳ ಶಿಶುವಿನ ಹಣೆಗೆ ಬಂದೂಕಿಟ್ಟು, ದರೋಡೆ ಮಾಡಿದ ಪ್ರಕರಣವೂ ವರದಿಯಾಗಿದೆ.

 

ಮತ್ತಷ್ಟು ಓದಿ: ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು

ಗುರುವಾರ, ಗೂಗಲ್‌ನ ಸ್ಟ್ರೀಟ್ ವ್ಯೂ ಮ್ಯಾಪಿಂಗ್ ಕಾರು, 360 ಡಿಗ್ರಿ ಕ್ಯಾಮೆರಾ ಹೊತ್ತು ಹಾದುಹೋದಾಗ, ಊರಿಗೆ ಕಳ್ಳರು ಬಂದಿದ್ದಾರೆಂಬ ವದಂತಿ ಶರವೇಗದಲ್ಲಿ ಹಬ್ಬಿತ್ತು. ಇದಾದ ನಂತರ, ಗ್ರಾಮಸ್ಥರು ಕಾರನ್ನು ಎಲ್ಲಾ ಕಡೆಯಿಂದ ಸುತ್ತುವರೆದು ಗದ್ದಲ ಸೃಷ್ಟಿಸಲು ಪ್ರಾರಂಭಿಸಿದರು. ಕಾರನ್ನು ನಿಲ್ಲಿಸಲು ಅವರು ರಸ್ತೆಯ ಮೇಲೆ ಮರದ ದಿಮ್ಮಿಗಳನ್ನು ಹಾಕಿದರು. ಕಾರಿನಲ್ಲಿದ್ದ ಸಿಬ್ಬಂದಿ ಭಯಭೀತರಾಗಿದ್ದರು.

ಅವರು ತಕ್ಷಣ ಪೊಲೀಸರಿಗೆ ಕರೆ ಮಾಡಿದರು. ಮಾಹಿತಿಯ ಮೇರೆಗೆ ಪೊಲೀಸರು ಆಗಮಿಸಿ ಜನರಿಗೆ ವಿವರಿಸಿದರು. ಗ್ರಾಮಸ್ಥರಿಗೆ ವಿವರಿಸಿದ ನಂತರ ಕಾರನ್ನು ಸುರಕ್ಷಿತವಾಗಿ ಕಳುಹಿಸಲಾಯಿತು ಎಂದು ಇನ್ಸ್‌ಪೆಕ್ಟರ್ ಹೇಳಿದರು.

ತಡರಾತ್ರಿ ಕಳ್ಳರು ಕಾರಿನಲ್ಲಿ ಬಂದು ಕಳ್ಳತನ ಮಾಡಿರುವ ಸಾಕಷ್ಟು ಘಟನೆಗಳು ಅಲ್ಲಿ ಅಂಭವಿಸಿದೆ. ಹೀಗಾಗಿ ಜನರು ಜಾಗರೂಕರಾಗಿದ್ದು, ಅಲ್ಲಿ ಓಡಾಡುವ ಎಲ್ಲಾ ವಾಹನಗಳ ಮೇಲೆ ನಿಗಾ ಇಡುತ್ತಿದ್ದಾರೆ. ಆಗಸ್ಟ್​ 28ರಂದು ಗೂಗಲ್ ಮ್ಯಾಪ್ ತಂಡವುಪೊಲೀಸರು ಅಥವಾ ಗ್ರಾಮ ಅಧಿಕಾರಿಗಳಿಗೆ ಪೂರ್ವ ಸೂಚನೆ ನೀಡದೆ ರಸ್ತೆ ಮಟ್ಟದ ಸಮೀಕ್ಷೆಯನ್ನು ನಡೆಸುತ್ತಿತ್ತು. ಆಗ ಊರಿನವರು ಅವರು ಕಳ್ಳರೆಂದು ಥಳಿಸಿದ್ದಾರೆ.

ಪೊಲೀಸರು ಗ್ರಾಮಸ್ಥರು ಮತ್ತು ಸಮೀಕ್ಷಾ ತಂಡವನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಗ್ರಾಮಸ್ಥರು ನಮ್ಮನ್ನು ಸುತ್ತುವರೆದರು. ಅವರು ನಮ್ಮ ದಾಖಲೆಗಳನ್ನು ಪರಿಶೀಲಿಸಿದ್ದರೆ, ಅವರಿಗೆ ನಮ್ಮ ಉದ್ದೇಶ ಅರ್ಥವಾಗುತ್ತಿತ್ತು ಎಂದು ಆ ತಂಡದ ನಾಯಕ ಸಂದೀಪ್ ತಿಳಿಸಿದ್ದಾರೆ.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!