ಅಪ್ಪುವಿನ ಅಪ್ಪುಗೆಯ ಫೋಟೋ ನೋಡಿ ಮದುವೆಯಲ್ಲಿ ಭಾವುಕರಾದ ಅನುಶ್ರೀ…!

ಸ್ಟಾರ್ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು, ಸ್ನೇಹಿತರ ಸಮ್ಮುಖದಲ್ಲಿ ರೋಷನ್​ ಅವರು ಅನುಶ್ರೀ ಕೊರಳಿಗೆ ತಾಳಿ ಕಟ್ಟಿದ್ದಾರೆ.

 

ನಿರೂಪಕಿ, ನಟಿ ಅನುಶ್ರೀ ಅವರ ಮದುವೆ ಫೋಟೋಗಳು ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿವೆ. ಅದರಲ್ಲೂ ಒಂದು ಫೋಟೋ ಮಾತ್ರ ಅನುಶ್ರೀ ಹಾಗೂ ಅಭಿಮಾನಿಗಳು ಭಾವುಕರಾಗುವಂತೆ ಮಾಡಿದೆ. ಅದುವೆ ಪವರ್​ ಸ್ಟಾರ್​ ಪುನೀತ್ ರಾಜ್​ಕುಮಾರ್ ಫೋಟೋ.

ಹೌದು, ನಿರೂಪಕಿ ಅನುಶ್ರೀ ಆರತಕ್ಷತೆ ಕಾರ್ಯಕ್ರಮದಲ್ಲಿ ಅವರ ಸ್ನೇಹಿತರ ಗುಂಪೊಂದು ಫೋಟೋ ಫ್ರೇಮ್​ ಅನ್ನು ಕೊಟ್ಟಿದ್ದಾರೆ. ಆ ಫ್ರೇಮ್​ನಲ್ಲಿ ಅಪ್ಪು ಅವರು ಅನುಶ್ರೀ ಹಾಗೂ ರೋಷನ್​ ಅವರ ಮದುವೆ ಮಧ್ಯೆ

ನಿಂತುಕೊಂಡು ಫೋಟೋಗೆ ಫೋಸ್​ ಕೊಡುತ್ತಿರೋ ಹಾಗೇ ಕ್ರಿಯೇಟ್ ಮಾಡಲಾಗಿದೆ.

ಇದೇ ಫೋಟೋವನ್ನು ನೋಡಿದ ಅನುಶ್ರೀ ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋ ಫ್ರೇಮ್​ ಅನ್ನು ಉಡುಗೊರೆ ನೀಡಿದ ಸ್ನೇಹಿತರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ ಇದೇ ಫೋಟೋ ನೋಡಿದ ಅಭಿಮಾನಿಗಳು ಕೂಡ ಸೋಷಿಯಲ್​ ಮೀಡಿಯಾದಲ್ಲಿ ಅಪ್ಪು ಅಜರಾಮರ, ನಗುಮುಖದ ಒಡೆಯ, ಅಪ್ಪು ಸದಾ ಜೀವಂತ ಅಂತ ಭಾವುಕರಾಗಿ ಕಾಮೆಂಟ್ಸ್​ ಮಾಡಿದ್ದಾರೆ.

ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋ..
ಅನುಶ್ರೀ ಅವರು ನಟ ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿ ಅಂತ ಎಲ್ಲರಿಗೂ ಗೊತ್ತಿದೆ. ಅನುಶ್ರೀ ಅವರು ಏನೇ ಶುಭ ಕಾರ್ಯ ಮಾಡಿದರೂ ಅಪ್ಪು ಅವರನ್ನು ನೆನೆಯುತ್ತಾ ಇರುತ್ತಾರೆ. ಅದರಂತೆ ತಮ್ಮ ಮದುವೆ ಸಮಾರಂಭದಲ್ಲೂ ಪುನೀತ್ ರಾಜ್​ಕುಮಾರ್ ಅವರ ಫೋಟೋವನ್ನು ಮಂಟಪದಲ್ಲಿ ಹಾಕಿಸಿ ಮೊದಲು ಅವರ ಆರ್ಶೀವಾದ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ‘ಅಪ್ಪು ಸರ್​ ರೋಷನ್ ಮತ್ತು ನನ್ನ ಸೇರಿಸಿದ್ದರು ಅಂತ ಕೂಡ ಹೇಳಿಕೊಂಡಿದ್ದರು.

ಇನ್ನೂ, ಅನುಶ್ರೀ ಅವರಿಗೆ ಗಿಫ್ಟ್ ಆಗಿ ಬಂದ ಫೋಟೋ​ದಲ್ಲಿ ಅಪ್ಪು ಅವರು ನಿಜವಾಗಲೂ ಮದುವೆಗೆ ಬಂದ ಹಾಗೇ ನೈಜತೆಯಿಂದ ಕೂಡಿದೆ. ಮುಖದಲ್ಲಿ ಅದೇ ನಗು, ಪಂಚೆ ಶರ್ಟ್ ಧರಿಸಿಕೊಂಡು ಅಪ್ಪು ಅವರು ಮಂದಹಾಸ ಬೀರುತ್ತಾ ಫೋಟೋಗೆ ಪೋಸ್​ ಕೊಟ್ಟಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!