ಕಾಲ್ತುಳಿತದಲ್ಲಿ ಸಾ*ನ್ನಪ್ಪಿದವರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ …

ಐಪಿಎಲ್ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಸತತ 17 ವರ್ಷಗಳಿಂದ ಪ್ರಶಸ್ತಿ ವಂಚಿತವಾಗಿದ್ದ RCB ತಂಡ, 2025ರ ಆವೃತ್ತಿಯಲ್ಲಿ ಚಾಂಪಿಯನ್‌ ಆಗಿತ್ತು. ಜೂನ್ 3ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಿಂದ ಮಣಿಸುವ ಮೂಲಕ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿತ್ತು.

ಹೀಗಾಗಿ, ವಿಶ್ವದಾದ್ಯಂತ RCB ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಮರುದಿನ (ಜೂನ್ 4ರಂದು) ಬೆಂಗಳೂರಿನಲ್ಲಿ ಆಯೋಜಿಸಿದ್ದ ವಿಜಯೋತ್ಸವದಲ್ಲಿ ನಿರೀಕ್ಷೆಗೂ ಮೀರಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದರು. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ತಕ್ಷಣವೇ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದ RCB, ಇದೀಗ ಮೃತರ ಕುಟುಂಬಗಳಿಗೆ ಅದೇ RCB CARES ಮೂಲಕ ತಲಾ 25 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ RCB, “ಜೂನ್ 4, 2025- ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ. ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನಷ್ಟೇ ಅಲ್ಲ…ನಮ್ಮ ಕುಟುಂಬ ಸದಸ್ಯರನ್ನು. ಅವರು ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ. ಅವರ (ಮೃತ ಅಭಿಮಾನಿಗಳು) ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ 25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿ ಭರವಸೆ” ಎಂದು ಹೇಳಿದೆ.

ಆರ್‌ಸಿಬಿ ಅಧಿಕೃತ ಪ್ರಕಟಣೆಯಲ್ಲಿ ಏನಿದೆ ?

ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.
ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ ಮತ್ತು ತಂಡಕ್ಕೆ ಜೀವ ತುಂಬುವ ಬೆಳಕಾಗಿತ್ತು. ನಮ್ಮ ನೆನಪುಗಳಲ್ಲಿ ಅವರು ಸದಾ ಜೀವಂತವಾಗಿರುತ್ತಾರೆ.
ಅವರ ಜಾಗವನ್ನು ಯಾವ ಸಹಾಯವೂ ತುಂಬಲಾರದು. ಆದರೆ ಮೊದಲನೇ ಮತ್ತು ಗೌರವದ ಸಂಕೇತವಾಗಿ, ಆರ್‌ಸಿಬಿ ಪ್ರತಿ ಕುಟುಂಬಕ್ಕೆ ತಲಾ ₹25 ಲಕ್ಷ ನೆರವನ್ನು ನೀಡಿದೆ. ಇದು ಕೇವಲ ಆರ್ಥಿಕ ಸಹಾಯವಲ್ಲ; ಕರುಣೆ, ಒಗ್ಗಟ್ಟು ಮತ್ತು ನಿರಂತರ ಕಾಳಜಿಯ ಭರವಸೆ.
ಇದು ಆರ್‌ಸಿಬಿ ಕೇರ್ಸ್‌ನ ಆರಂಭವೂ ಹೌದು. ಅವರ ನೆನಪನ್ನು ಗೌರವಿಸುವ ಮೂಲಕ ಶುರುವಾದ ಈ ಪ್ರಯತ್ನ, ಅಭಿಮಾನಿಗಳ ಭಾವನೆ, ನಂಬಿಕೆ ಮತ್ತು ಸುರಕ್ಷತೆ ಪ್ರತಿಬಿಂಬಿಸುವ ದೀರ್ಘಕಾಲದ ಬದ್ಧತೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!