ಪತಿಯ ಮನೆಯ ಮುಂದೆ ಪತ್ನಿ ಧರಣಿ ಕಾರಣ ವರದಕ್ಷಿಣೆ …!

ತುಮಕೂರಿನ ಪತಿ ಮನೆ ಮುಂದೆ ಪತ್ನಿಯ ಧರಣಿ ಸತ್ಯಾಗ್ರಹ
ಪತಿ, ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದ ಪ್ರೇರಣಾ
ತನ್ನ ಒಡವೆ ವಾಪಸ್ ಕೊಡುವಂತೆ ಪ್ರೇರಣಾರಿಂದ ಧರಣಿ
ವರದಕ್ಷಿಣೆ ಕಿರುಕುಳ ಆರೋಪ ಹೊರಿಸಿರುವ ನವ ವಿವಾಹಿತೆ ತನ್ನ ಪತಿಯ ಮನೆಯ ಮುಂದೆ ಧರಣಿ ನಡೆಸುತ್ತಿದ್ದಾರೆ. ಮದುವೆ ವೇಳೆ ತನಗೆ ತನ್ನ ಪೋಷಕರು ನೀಡಿದ್ದ ಒಡವೆಗಳನ್ನು ಗಂಡ ಹಾಗೂ ಗಂಡನ ಮನೆಯವರು ಇಟ್ಟುಕೊಂಡಿದ್ದಾರೆ. ಅವುಗಳನ್ನು ವಾಪಸ್ ನೀಡಬೇಕೆಂದು ಆಗ್ರಹಿಸಿ ಪತಿಯ ಮನೆ ಮುಂದೆ ಪತ್ನಿ ಧರಣಿ ಆರಂಭಿಸಿದ್ದಾರೆ. ತುಮಕೂರು ನಗರದ ಸಪ್ತಗಿರಿ ಬಡಾವಣೆಯ ಪತಿ ಪ್ರಜ್ವಲ್ ಶಂಕರ್ ಮನೆ ಮುಂದೆ ಪತ್ನಿ ಪ್ರೇರಣಾ ಧರಣಿ ಆರಂಭಿಸಿದ್ದಾರೆ.
ತನಗೆ ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಪ್ರೇರಣಾ ಆರೋಪ ಮಾಡಿದ್ದಾರೆ. ಮನೆಯ ಮುಂದೆ ಧರಣಿ ನಡೆಸುತ್ತಿರುವ ಸೊಸೆ ಪ್ರೇರಣಾಳನ್ನು ಅತ್ತೆ, ಮಾವ, ಗಂಡ ಭೇಟಿಯಾಗದೇ ಮನೆಯೊಳಗೆ ಇದ್ದಾರೆ.
ನಾನೇ ಬೇಡವಾದ ಮೇಲೆ, ನನ್ನ ಚಿನ್ನದ ಒಡವೆಗಳನ್ನು ಏಕೆ ಇಟ್ಟುಕೊಂಡಿದ್ದೀರಿ, ಅವುಗಳನ್ನು ವಾಪಸ್ ಕೊಡಿ ಎಂದು ಪತ್ನಿ ಪ್ರೇರಣಾ ಆಗ್ರಹಿಸುತ್ತಿದ್ದಾರೆ. ಮದುವೆ ವೇಳೆ ತನಗೆ ತನ್ನ ಪೋಷಕರು 130 ಗ್ರಾಂ ಚಿನ್ನದ ಆಭರಣ ನೀಡಿದ್ದರು. ಅವುಗಳನ್ನು ತನಗೆ ವಾಪಸ್ ನೀಡಬೇಕು ಅನ್ನೋದು ಪತ್ನಿ ಪ್ರೇರಣಾ ಆಗ್ರಹ. ಈಗ ನಮ್ಮ ಅಪ್ಪ, ಅಮ್ಮ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಅವರ ಸಾಲ ತೀರಿಸಲು ನಮಗೆ ನಮ್ಮ ಒಡವೆಗಳು ವಾಪಸ್ ಬೇಕು ಎಂದು ಪತ್ನಿ ಪ್ರೇರಣಾ ಪಟ್ಟು ಹಿಡಿದಿದ್ದಾರೆ. ಮಗಳು ಪ್ರೇರಣಾ ಜೊತೆ ತಾಯಿ ಚಂದ್ರಕಲಾ ಕೂಡ ಧರಣಿ ನಡೆಸುತ್ತಿದ್ದಾರೆ.

ರಾಜ್ಯ ಮಹಿಳಾ ಆಯೋಗ ಹಾಗೂ ಪೊಲೀಸ್ ಠಾಣೆಗೆ ನೀಡಿರುವ ದೂರಿನ ಪ್ರತಿ, ಪ್ರೇರಣಾ-ಪ್ರಜ್ವಲ್ ಶಂಕರ್ ಮದುವೆ ಪೋಟೋ.

ಕಳೆದ ವರ್ಷದ ಆಗಸ್ಟ್ ನಲ್ಲಿ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ನಿವಾಸಿ ಪ್ರೇರಣಾ ಹಾಗೂ ತುಮಕೂರಿನ ಸಪ್ತಗಿರಿ ಬಡಾವಣೆಯ ನಿವಾಸಿ ಪ್ರಜ್ವಲ್ ಶಂಕರ್ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಮದುವೆಯಾದ ನಾಲ್ಕು ತಿಂಗಳಲ್ಲೇ ಪತಿ ಪ್ರಜ್ವಲ್ ಶಂಕರ್ ಹಾಗೂ ಪೋಷಕರು ತನಗೆ ವರದಕ್ಷಿಣೆ ಕಿರುಕುಳ ನೀಡಿದ್ದರು ಎಂದು ಪತ್ನಿ ಪ್ರೇರಣಾ ಆರೋಪಿಸಿ ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ ಮೇಲೆ ಹಲ್ಲೆ ನಡೆಸಿ, ದೈಹಿಕ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ತುಮಕೂರಿನ ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಎರಡು ಕಡೆಯವರನ್ನು ಕರೆಸಿ, ರಾಜೀ ಸಂಧಾನ ಮಾಡಿ ಪೊಲೀಸರು ಬುದ್ದಿವಾದ ಹೇಳಿ ಕಳಿಸಿದ್ದಾರೆ. ಆದರೇ, ಮತ್ತೆ ಪತಿ ಪ್ರಜ್ವಲ್ ಶಂಕರ್ ಹಾಗೂ ಆತನ ಪೋಷಕರು ನನಗೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ ಎಂದು ಪತ್ನಿ ಪ್ರೇರಣಾ ಆರೋಪಿಸಿದ್ದಾರೆ. ಈಗ ನ್ಯಾಯಕ್ಕಾಗಿ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಾರೆ.
ತನ್ನ ಚಿನ್ನಾಭರಣಗಳನ್ನು ವಾಪಸ್ ನೀಡುವವರೆಗೂ ಪತಿಯ ಮನೆಯ ಮುಂದೆ ಧರಣಿ ಮುಂದುವರಿಸುವುದಾಗಿ ಪ್ರೇರಣಾ ಹೇಳಿದ್ದಾರೆ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!