ವಿಶ್ವ ವಿಖ್ಯಾತಿ ಮೈಸೂರು ದಸರಾ ಕೇವಲ ಮೈಸೂರಿಗೆ ಮಾತ್ರ ಸೀಮಿತವಾಯ್ತಾ ,,,!

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತಮಟ್ಟದ ಸಭೆ ನಡೆದು ತಿಂಗಳಾಗಿದೆ. ಉದ್ಘಾಟಕರಾಗಿ ಸಾಹಿತಿ, ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ ಹೆಸರು ಘೋಷಣೆಯಾಗಿದೆ. ಈ ಸಂಗತಿಗಳನ್ನು ಹೊರತು ಪಡಿಸಿ ದಸರಾ-೨೦೨೫ ರ ಯಾವುದೇ ಕಾರ್ಯಕ್ರಮಗಳ ವಿವರ ಲಭ್ಯವಿಲ್ಲ.

ಮೈಸೂರು ದಸರಾ ಮಹೋತ್ಸವದ ಇಂಚಿಂಚು ಮಾಹಿತಿಯನ್ನು ಒದಗಿಸಬೇಕಾಗಿದ್ದ ದಸರಾ ವೆಬ್‌ ಸೈಟ್‌ ಈತನಕ ಸಿದ್ಧಗೊಂಡಿಲ್ಲ. ಯಾರಾದರು ಕುತೂಹಲದಿಂದ ಈ ಸೈಟ್‌ ಗೆ ಭೇಟಿ ನೀಡಿದರೆ ನಿರಾಸೆ ಖಂಡಿತ.

ಕಾರಣ ಈ ವೆಬ್‌ ಸೈಟ್‌ ನಲ್ಲಿ ಯಾವುದೇ ಮಾಹಿತಿ ಇಲ್ಲ. ಅಸಲಿಗೆ ಈ ಸೈಟ್‌ ಒಪನ್‌ ಆಗೋದೇ ಇಲ್ಲ. ಅದು ಯೂಸರ್‌ ನೇಮ್‌ ,ಪಾಸವರ್ಡ್‌ ಕೇಳುತ್ತದೆ. ದಸರಾ ಮಹೋತ್ಸವ ವೀಕ್ಷಿಸಲು ಪ್ಲಾನ್‌ ಮಾಡುವ ಉದ್ದೇಶ ಹೊಂದಿರುವ ವಿದೇಶಿಗರಿಗೆ ಇದರಿಂದ ತೀವ್ರ ನಿರಾಸೆಯಾಗಿದೆ. ಟಿಕೆಟ್‌ ಅದರಲ್ಲೂ “ ಗೋಲ್ಡ್‌ ಕಾರ್ಡ್‌ “ ಪಡೆದು ಕಾರ್ಯಕ್ರಮ ವೀಕ್ಷಿಸುವ ಬಯಕೆ ಹೊಂದಿರುವವರು ವೆಬ್‌ ಸೈಟ್‌ ಸಿದ್ಧವಾಗದ್ದನ್ನು ಕಂಡು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ.

ಈ ಸಾಲಿನ ದಸರಾ ಮಹೋತ್ಸವದ ಕಾರ್ಯಕ್ರಮಗಳೇನು, ಯಾವಯಾವ ಕಲಾವಿದರು ಬರುತ್ತಾರೆ. ಕಾರ್ಯಕ್ರಮಗಳು ಎಲ್ಲಿ ನಡೆಯುತ್ತವೆ. ಅದರ ಸಮಯ ಏನು..? ಈ ಯಾವ ಮಾಹಿತಿಯು ಈ ತನಕ ಲಭ್ಯವಿಲ್ಲ.

ಯುವ ದಸರಾ ಎಲ್ಲಿ..?:

ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಕಳೆದ ವರ್ಷ ಮಹಾರಾಜ ಕಾಲೇಜು ಮೈದಾನದ ಬದಲಿಗೆ ಮೈಸೂರಿನ ಹೊರ ವಲಯದಲ್ಲಿ ಯುವ ದಸರಾ ನಡೆಸಲಾಗಿತ್ತು. ಇಳಯರಾಜ, ರೆಹಮಾನ್ ರಂಥ ಚಲನಚಿತ್ರರಂಗದ ಘಟಾನುಘಟಿ ಕಲಾವಿದರನ್ನು ಆಹ್ವಾನಿಸಿದ್ದರಿಂದ ನಗರ ಪ್ರದೇಶದಲ್ಲಿ ಜನದಟ್ಟನೆ ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ವರ್ಷ ಎಲ್ಲಿ ಯುವ ದಸರಾ ನಡೆಸುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ. ಕಲಾವಿದರ ಡೇಟ್ಸ್‌ ಪೈನಲ್‌ ಆದ ಬಳಿಕ ಕಾರ್ಯಕ್ರಮ ಸ್ಥಳ ನಿಗಧಿಪಡಿಸುವ ಉದ್ದೇಶ ಹೊಂದಲಾಗಿದೆ.

ದಸರಾ ಮಹೋತ್ಸವದ ಅಧಿಕೃತ ವೆಬ್‌ಸೈಟ್ ಸಿದ್ಧವಾಗದಿರುವುದರಿಂದ ಪ್ರವಾಸಿಗರಿಗೆ ಮಾಹಿತಿ ಪಡೆಯಲು ತೊಂದರೆಯಾಗಿದೆ. ಇದು ಸಂಘಟನೆ ಕೊರತೆ ಸೂಚಿಸುತ್ತದೆ.

ಮೈಸೂರು ದಸರಾದ ವಿಶ್ವವಿಖ್ಯಾತ ಸ್ಥಾನಕ್ಕೆ ಇದರ ಐತಿಹಾಸಿಕ, ಸಾಂಸ್ಕೃತಿಕ, ಮತ್ತು ದೃಶ್ಯಾತ್ಮಕ ವೈಭವವೇ ಕಾರಣ. ಆದ್ದರಿಂದ 2025ರ ಆಚರಣೆಯ ಸಿದ್ಧತೆಯ ಕೊರತೆಯನ್ನು ಸರಿಪಡಿಸಲು ರಾಜ್ಯ ಸರಕಾರ ಶೀಘ್ರ ಕ್ರಮ ಕೈಗೊಂಡು , ಈ ವರ್ಷದ ದಸರಾವೂ ಯಶಸ್ವಿಯಾಗಿ ಜಗತ್ತಿನ ಗಮನ ಸೆಳೆಯುವಂತಾಗಲಿ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು