ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳಲ್ಲಿ ದಾಖಲೆ ಮಾಡಿದ ಬೆಂಗಳೂರು ಟೆಕ್ಕಿ: ಅರ್ಧ ಲಕ್ಷ ದಂಡ ಪಾವತಿ.

ಬೆಂಗಳೂರು : ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದವರಿಗೆ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರ ರಿಯಾಯಿತಿ ಯೋಜನೆಯು ಸೂರನಿಕೆಯಂತೆ ಬಳಸಿಕೊಳ್ಳಲು ಅವಕಾಶ ನೀಡಿದ್ದು, ಅದರಿಂದ ಫಾಯ್ದೆ ಪಡೆದಿರುವ ಉದಾಹರಣೆ ಇಲ್ಲಿದೆ. ಬಳ್ಳಾರಿ ಮೂಲದ ಬೆಂಗಳೂರು ನಿವಾಸಿ ಟೆಕ್ಕಿಯೊಬ್ಬರು ತಮ್ಮ ವಿರುದ್ಧವಿದ್ದ 130 ಕ್ಕೂ ಹೆಚ್ಚು ಉಲ್ಲಂಘನೆ ಪ್ರಕರಣಗಳನ್ನು ನಿವಾರಿಸಿಕೊಂಡು, ಅರ್ಧ ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿಕೊಂಡಿದ್ದಾರೆ.

ಅವನಿಗೆ ಸೇರಿದ ಎರಡು ವಾಹನಗಳ ಮೇಲೆ ಒಟ್ಟು ₹1,13,000 ದಂಡ ಬಾಕಿ ಇತ್ತು. ಆದರೆ, ಪೊಲೀಸರು ಪ್ರಾರಂಭಿಸಿದ ರಿಯಾಯಿತಿ ಡ್ರೈವ್‌ ನ ಪ್ರಯೋಜನ ಪಡೆದು, ಕೇವಲ ₹56,500 ಪಾವತಿಸಿ ಎಲ್ಲಾ ಕೇಸ್‌ಗಳನ್ನು ಕ್ಲಿಯರ್ ಮಾಡಿಕೊಂಡಿದ್ದಾರೆ.

ಟ್ರಾಫಿಕ್ ಪೊಲೀಸ್ ಎಎಸ್‌ಐ ದೇವರಾಜ್.ಎಸ್ ಅವರು ಈ ಮಾಹಿತಿಯನ್ನು ವಾಟ್ಸಾಪ್ ಗ್ರೂಪ್‌ಗಳಲ್ಲಿ ಹಂಚಿಕೊಂಡಿದ್ದು, ಈ ಮೂಲಕ ಘಟನೆ ಸಾರ್ವಜನಿಕತೆಗೆ ಬಂದಿದೆ. “ಇದೊಂದು ಇತರ ಟ್ರಾಫಿಕ್ ಉಲ್ಲಂಘಕರಿಗೆ ನಿದರ್ಶನವಾಗಲಿ ಎಂಬ ಆಶಯ ನಮ್ಮದು” ಎಂದು ಅವರು ತಿಳಿಸಿದ್ದಾರೆ.

ಇದುವರೆಗೆ ಈ ರಿಯಾಯಿತಿ ಅಭಿಯಾನದಿಂದ ಸುಮಾರು ₹18.9 ಕೋಟಿ ದಂಡ ಸಂಗ್ರಹವಾಗಿದ್ದು, 6.7 ಲಕ್ಷ ಪ್ರಕರಣಗಳು ನಿವಾರಣೆಯಾಗಿವೆ. ಟೆಕ್ಕಿಯ ಎರಡು ಕಾರುಗಳಲ್ಲೊಂದು ಮೇಲೆ ₹46,500 ಹಾಗೂ ಇನ್ನೊಂದರ ಮೇಲೆ ₹10,000 ದಂಡ ವಿಧಿಸಲಾಗಿತ್ತು. ಈ ದಂಡಗಳು ಬೆಂಗಳೂರಿನ ಎಇಸಿಎಸ್ ಲೇಔಟ್‌ನಲ್ಲಿ ಪಾವತಿಯಾಗಿವೆ.

ದಂಡದ ಹೆಚ್ಚಿನ ಪ್ರಮಾಣವು ನೋ ಪಾರ್ಕಿಂಗ್, ಚಲಿಸುತ್ತಿರುವ ವಾಹನದಲ್ಲಿ ಮೊಬೈಲ್ ಬಳಕೆ, ಹಾಗೂ ಇತರ ಸಾಮಾನ್ಯ ಉಲ್ಲಂಘನೆಗಳಿಂದ ಬರುವ ವರದಿ ಸೇರಿದೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ಇಲಾಖೆ ಆರಂಭಿಸಿರುವ ಈ ರಿಯಾಯಿತಿ ಅಭಿಯಾನವು ಜನತೆಯಲ್ಲಿ ಉತ್ತಮ ಸ್ಪಂದನೆ ಪಡೆದುಕೊಂಡಿದೆ ಎಂಬುದು ಸ್ಪಷ್ಟವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!