ಗದ್ದೆಗೆ ಇಳಿದು ಭತ್ತದ ನಾಟಿಯಲ್ಲಿ ತೊಡಗಿದ ವಿದ್ಯಾರ್ಥಿಗಳು: ಪ್ರಾಯೋಗಿಕ ಅನುಭವದಿಂದ ಕೃಷಿಯ ಅರಿವು.

ನಾಪೋಕ್ಲು: ಹಳೆ ತಾಲೂಕು ಸಮೀಪದ ಅಂಕುರ್ ಪಬ್ಲಿಕ್ ಶಾಲೆಯ ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಉದ್ದೇಶದಿಂದ ಭತ್ತದ ನಾಟಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ, 9ನೇ ತರಗತಿಯ ವಿದ್ಯಾರ್ಥಿಗಳು ಕೊಳಕೇರಿ ಗ್ರಾಮದ ಕೆಟೋಳಿರ ರಾಜಾ ಚರ್ಮಣ ಅವರ ಹೊಲದಲ್ಲಿ ಕೆಸರು ಗದ್ದೆಗೆ ಇಳಿದು ನಾಟಿ ನಡೆಸಿದರು. ತಮ್ಮ ಕೈಯಾರೆ ಭತ್ತದ ಅಗೆ ನೆಡುವ ಮೂಲಕ ಕೃಷಿ ಬದುಕಿನ ಮಹತ್ವ, ಶ್ರಮದ ಮೌಲ್ಯ ಮತ್ತು ಅನ್ನದಾತರ ಪರिश್ರಮವನ್ನು ನೇರವಾಗಿ ಅನುಭವಿಸಿದರು.

ಶಾಲೆಯ ಕಾರ್ಯದರ್ಶಿ ರತ್ನಾ ಚರ್ಮಣ ಅವರು ಮಕ್ಕಳೊಂದಿಗೆ ನೇರವಾಗಿ ಭಾಗವಹಿಸಿ, ಭತ್ತದ ಸಸಿ ಎಡೆಯುವುದು, ನಾಟಿ ಮಾಡುವುದು, ಕಳೆ ಕೀಳುವುದು ಹಾಗೂ ಬೆಳೆ ಬೆಳೆಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷತೆ ನೀಡಿದರು. ಕೃಷಿಯ ಮಹತ್ವವನ್ನು ವಿವರಿಸುತ್ತಾ, “ಭೂಮಿಯನ್ನು ಬಂಜರಾಗಿ ಬಿಡದೆ ಉಪಯೋಗಿಸಬೇಕು, ಅದು ನಮ್ಮ ಭವಿಷ್ಯದ ಪಾಲಿಗೆ ಅತಿಮಹತ್ವದ ದಾರಿ” ಎಂದು ವಿದ್ಯಾರ್ಥಿಗಳಿಗೆ ಮನಮಿಡಿಯುವಂತೆ ವಿವರಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಶೈಲಾ ನರೇಶ್ ಮತ್ತು ಶೃತಿ ಅವರು ಭತ್ತದ ನಾಟಿಯ ತಂತ್ರ, ವಿಧಾನಗಳು ಹಾಗೂ ಕೃಷಿಯ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಈ ರೀತಿಯ ಕಾರ್ಯಕ್ರಮಗಳು ಶಾಲೆಯ ಪಾಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳನ್ನು ಕೃಷಿಯ ಹತ್ತಿರ ತರಲು ಸಹಾಯ ಮಾಡುತ್ತಿದ್ದು, ಪರಿಸರ ಸ್ನೇಹಿ ಶಿಕ್ಷಣದತ್ತ ಒಂದು ಹೆಜ್ಜೆಯೆಂದು ಶಾಲಾ ಆಡಳಿತ ಮಂಡಳಿ ಅಭಿಪ್ರಾಯಪಟ್ಟಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು