ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್

ಬಿಗ್​​ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ನಟ ಸುದೀಪ್ ಅವರು ಬಿಗ್​ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.

ಎಲ್ಲೆಡೆ ಬಿಗ್​ಬಾಸ್ ಸೀಸನ್ ಪ್ರಾರಂಭವಾಗಿದೆ. ಹಿಂದಿ ಬಿಗ್​​ಬಾಸ್ ಕಳೆದ ವಾರವಷ್ಟೆ ಪ್ರಾರಂಭವಾಗಿದೆ. ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಟ ಸುದೀಪ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ಬಾಸ್ ಬಗ್ಗೆಯೂ ಮಾತನಾಡಿದರು.

 

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ‘ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ’ ಎಂದರು. ಆ ಮೂಲಕ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು. ಈ ಬಾರಿಯೂ ಸುದೀಪ್ ಅವರೇ ಬಿಗ್​​ಬಾಸ್ ನ ನಿರೂಪಣೆ ಮಾಡಲಿದ್ದು, ದಿನಾಂಕವನ್ನೂ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಬಿಗ್​​ಬಾಸ್ ಸೀಸನ್ 11 ಸೆಪ್ಟೆಂಬರ್ 29ರಂದು ಪ್ರಾರಂಭವಾಗಿತ್ತು. ಈ ಬಾರಿ ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆ ಆಗಿದ್ದು, ಕೆಲವರ ಆಯ್ಕೆಯಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಕಳೆದ ಸೀಸನ್ ನಿರೂಪಣೆ ಮಾಡುವಾಗ ತಾವು ಇನ್ನು ಮುಂದೆ ಬಿಗ್​​ಬಾಸ್ ನಿರೂಪಣೆ ಮಾಡುವುದಿಲ್ಲ ಇದೇ ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಆಯೋಜಕರು ಸುದೀಪ್ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ. ಆಯೋಜಕರ ಒತ್ತಡಕ್ಕೆ ಮಣಿದು ಸುದೀಪ್ ಅವರು ಬಿಗ್​​ಬಾಸ್ ನಿರೂಪಣೆಗೆ ಒಪ್ಪಿಗೆ ನೀಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!