ಬಿಗ್​​ಬಾಸ್ ಸೀಸನ್ 12 ದಿನಾಂಕ ಘೋಷಿಸಿದ ಕಿಚ್ಚ ಸುದೀಪ್

ಬಿಗ್​​ಬಾಸ್ ಕನ್ನಡ ಸೀಸನ್ 12 ಶೀಘ್ರವೇ ಪ್ರಾರಂಭವಾಗಲಿದೆ. ಸೀಸನ್ 12ರ ಮೊದಲ ಪ್ರೋಮೊ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿತ್ತು. ಆದರೆ ಸೀಸನ್ 12 ಯಾವಾಗಿನಿಂದ ಪ್ರಾರಂಭ ಆಗಲಿದೆ ಎಂಬ ದಿನಾಂಕವನ್ನು ಘೋಷಣೆ ಮಾಡಲಾಗಿರಲಿಲ್ಲ. ಇದೀಗ ಆಯೋಜಕರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ನಟ ಸುದೀಪ್ ಅವರು ಬಿಗ್​ಬಾಸ್ ಕನ್ನಡ ಸೀಸನ್ 12ರ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.

ಎಲ್ಲೆಡೆ ಬಿಗ್​ಬಾಸ್ ಸೀಸನ್ ಪ್ರಾರಂಭವಾಗಿದೆ. ಹಿಂದಿ ಬಿಗ್​​ಬಾಸ್ ಕಳೆದ ವಾರವಷ್ಟೆ ಪ್ರಾರಂಭವಾಗಿದೆ. ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ನಿರ್ಮಾಪಕ, ಉದ್ಯಮಿ, ರಾಜಕಾರಣಿ ಸಂದೇಶ್ ನಾಗರಾಜ್ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಟ ಸುದೀಪ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ಬಾಸ್ ಬಗ್ಗೆಯೂ ಮಾತನಾಡಿದರು.

 

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ‘ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ’ ಎಂದರು. ಆ ಮೂಲಕ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು. ಈ ಬಾರಿಯೂ ಸುದೀಪ್ ಅವರೇ ಬಿಗ್​​ಬಾಸ್ ನ ನಿರೂಪಣೆ ಮಾಡಲಿದ್ದು, ದಿನಾಂಕವನ್ನೂ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಳೆದ ಬಾರಿಯ ಬಿಗ್​​ಬಾಸ್ ಸೀಸನ್ 11 ಸೆಪ್ಟೆಂಬರ್ 29ರಂದು ಪ್ರಾರಂಭವಾಗಿತ್ತು. ಈ ಬಾರಿ ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆ ಆಗಿದ್ದು, ಕೆಲವರ ಆಯ್ಕೆಯಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಕಳೆದ ಸೀಸನ್ ನಿರೂಪಣೆ ಮಾಡುವಾಗ ತಾವು ಇನ್ನು ಮುಂದೆ ಬಿಗ್​​ಬಾಸ್ ನಿರೂಪಣೆ ಮಾಡುವುದಿಲ್ಲ ಇದೇ ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಆಯೋಜಕರು ಸುದೀಪ್ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ. ಆಯೋಜಕರ ಒತ್ತಡಕ್ಕೆ ಮಣಿದು ಸುದೀಪ್ ಅವರು ಬಿಗ್​​ಬಾಸ್ ನಿರೂಪಣೆಗೆ ಒಪ್ಪಿಗೆ ನೀಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!