ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಮಂಗಳೂರು: ಎಸ್ಐಟಿ ತನಿಖೆಯಿಂದ ಅನೇಕ ವಿಷಯಗಳು ಹೊರಗೆ ಬರುತ್ತಿವೆ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಹುಟ್ಟಿ ಪುಣ್ಯ ಮಾಡಿದ್ದೇವೆ: ಬೆಳ್ತಂಗಡಿ ತಾಲೂಕಿನ ಸಮಸ್ತ ಜೈನ ಬಾಂಧವರ ನೇತೃತ್ವದಲ್ಲಿ ನಡೆದ ‘ಬೃಹತ್ ಧರ್ಮ ಸಂರಕ್ಷಣಾ ಸಮಾವೇಶ’ದಲ್ಲಿ ಮಾತನಾಡಿರುವ ಡಾ.ವೀರೇಂದ್ರ ಹೆಗ್ಗಡೆ, ಎಷ್ಟು ದೂರದವರು ಬಂದರೂ ಹತ್ತಿರದವರು ಯಾಕೆ ಬರ್ತಿಲ್ಲ ಎಂಬ ಮಾತು ಇತ್ತು. ಇವತ್ತು ನಮ್ಮವವರೆಲ್ಲಾ ಇಲ್ಲಿಗೆ ಬಂದಿದ್ದಾರೆ. ನಾವು ಈ ಕುಟುಂಬದಲ್ಲಿ ಹುಟ್ಟಿರೋದೇ ಅದೃಷ್ಟ. ಧರ್ಮಸ್ಥಳದಲ್ಲಿ ಹುಟ್ಟಿ ಪುಣ್ಯ ಮಾಡಿದ್ದೇವೆ.
ನಮ್ಮ ಇಡೀ ಕುಟುಂಬ ಇಲ್ಲಿ ಹುಟ್ಟಿ ಪುಣ್ಯ ಮಾಡಿದೆ. ಈ ಕಾರಣದಿಂದ ನಿಮಗೆ ನಮ್ಮ ಮೇಲೆ ಪ್ರೀತಿ ಅಭಿವ್ಯಕ್ತವಾಯಿತು. ಇಷ್ಟು ದಿನ ಪ್ರೀತಿ ಇದ್ದರೂ ಅಭಿವ್ಯಕ್ತಪಡಿಸಲು ಅವಕಾಶ ಇರಲಿಲ್ಲ. ಎಸ್ಐಟಿಯಲ್ಲಿ ಅನೇಕ ವಿಷಯಗಳು ಹೊರಗೆ ಬರ್ತಿವೆ. ಆ ಎಲ್ಲಾ ತನಿಖೆಯ ವಿಷಯಗಳು ನಮಗೆ ಪೂರಕವಾಗಿರಲಿ. ಮಂಜುನಾಥ ಸ್ವಾಮಿಯ ಅನುಗ್ರಹ ಎಲ್ಲರ ಮೇಲೆ ಹೀಗೆಯೇ ಇರಲಿ ಎಂದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಪತ್ನಿ ಹೇಮಾವತಿ ಹೆಗ್ಗಡೆ ಸೇರಿ ಕುಟುಂಬಸ್ಥರು ಭಾಗಿ ಸಮಾವೇಶದಲ್ಲಿ ಭಾಗಿಯಾಗಿದ್ದರು.





