ರಾಷ್ಟ್ರಪತಿಗಳ ಮೈಸೂರು ಪ್ರವಾಸ.. !

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮತ್ತು ನಾಳೆ ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನ ಪ್ರವಾಸದಲ್ಲಿದ್ದಾರೆ. ಇವತ್ತು ಮಧ್ಯಾಹ್ನ 3 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ಆಗಮಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಮೈಸೂರಿನ ಆಯುಷ್ (ಎಐಐಎಸ್‌ಹೆಚ್)ನಲ್ಲಿ ಯಾವುದೇ ಚಿಕಿತ್ಸೆಗಳು ಲಭ್ಯ ಇರುವುದಿಲ್ಲ. ಜೊತೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿರುತ್ತದೆ.

ಅದರಂತೆ ಸಂಜೆ ವೇಳೆಗೆ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ದ್ರೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಈ ವೇಳೆ ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ ಎಂಟು ಗಂಟೆ ತನಕ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಮಾಡಲಾಗಿದೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಹೋಗುವವರು ಈ ಬಗ್ಗೆ ಮಾಹಿತಿ ತಿಳಿದಿರಬೇಕು. ರಾಷ್ಟ್ರಪತಿ ಭೇಟಿ ನೀಡುತ್ತಿರುವ ಕಾರಣ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.

 

ಸೆಪ್ಟೆಂಬರ್ 2, ಅಂದರೆ ನಾಳೆ ರಾಷ್ಟ್ರಪತಿಗಳು ಐತಿಹಾಸಿಕವಾದ ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಭದ್ರತಾ ಹಿತದೃಷ್ಟಿಯಿಂದ ಹಾಗೂ ಶಿಷ್ಟಾಚಾರ ಪಾಲನೆಗಾಗಿ ನಾಳೆ ಪ್ರವಾಸಿಗರಿಗೆ ಅರಮನೆಯ ಪ್ರವೇಶ, ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿರುತ್ತದೆ. ಇಂದಿನಿಂದ ಮೈಸೂರು ಅರಮನೆ ಅವರಣದಲ್ಲಿ ನಡೆಯುವ ಧ್ವನಿ, ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿರುತ್ತದೆ.

Related Posts

ಮೈಸೂರಿನ ಫಾಲ್ಕನ್ ಟೈರ್ಸ್ ಲಿ. ನ ಮಾಜಿ ಮಾಲೀಕ ಅಂದರ್ !

    ಬಹು ವರ್ಷಗಳ ಹಿಂದೆ ಫಾಲ್ಕನ್ ಟೈರ್ಸ್ ನ ಕಾರ್ಮಿಕರಿಗೆ ಅನ್ಯಾಯವೆಸಗಿ ಕಾರ್ಮಿಕರನ್ನು ಬೀದಿ ಪಾಲು ಮಾಡಿದ್ದ ಪವನ್ ಕುಮಾರ್ ರುಹಿಯಾ 315 ಕೋಟಿ ರೂ. ಸೈಬರ್ ವಂಚನೆ ಪ್ರತ್ಯೇಕ ಪ್ರಕರಣದಲ್ಲಿ ಪವನ್ ಕುಮಾರ್ ರುಹಿಯಾ ಬಂಧನ ಈ ಕಳ್ಳನಿಗೆ…

ಸೊಸೈಟಿಗಳ ಮೂಲಕವೇ ಬೆಳೆ ಖರೀದಿ-ಮಾರಾಟ: ರೈತರ ಸ್ವಾವಲಂಬನೆಗೆ ಹೊಸ ಯೋಜನೆ.

ಪಾಂಡವಪುರ : ಬೆಳೆಗಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ಖರೀದಿಸಿ ಮಾರಾಟ ಮಾಡಿ, ರೈತರ ಬೆಳೆಗೆ ಅಧಿಕ ಲಾಭ ನೀಡುವ ಹೊಸ ಕಾಠ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸೊಸೈಟಿಗಳು ಇಷ್ಟು ದಿನ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು