ಆಸ್ತಿ ತೆರಿಗೆ ವಸೂಲಿ ಮಾಡಲು ಮುಂದಾದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಮಾಡದೇ ಇರುವ ಸುಸ್ತಿದಾರರಿಗೆ ಬಿಬಿಎಂಪಿ (BBMP) ನೋಟಿಸ್ ನೀಡಿದ್ದು, ಕೂಡಲೇ ಪಾವತಿ ಮಾಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಮಾಡುವುದು ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ 2.75 ಲಕ್ಷ ಆಸ್ತಿ ಮಾಲೀಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ತೆರಿಗೆ ಪಾವತಿ ಮಾಡದವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.ಆಸ್ತಿ ತೆರಿಗೆ ಪಾವತಿಸುವುದನ್ನು ಬಾಕಿ ಇರಿಸಿಕೊಂಡವರು BBMPtax.karnataka.gov.in ವೆಬ್​ಸೈಟ್​​ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸುವಂತೆ ಬಿಬಿಎಂಪಿ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

 

ತೆರಿಗೆ ಬಾಕಿ ಇರುವ ಏರಿಯಾಗಳು:
ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಏರಿಯಾಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿರುವ ಆಸ್ತಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮಹದೇವಪುರ ವಲಯದಲ್ಲೇ ಅತ್ಯಧಿಕ ಆಸ್ತಿಗಳು ತೆರಿಗೆ ಕಟ್ಟದೆ ಬಾಕಿ ಉಳಿಸಿವೆ. ಈ ವಲಯದಲ್ಲಿ 65,040 ಸುಸ್ತಿದಾರರು ಇದ್ದು, 197.90 ಕೋಟಿ ರೂ. ತೆರಿಗೆ ಪಾವತಿಗೆ ಬಾಕಿ ಇದೆ. ದಕ್ಷಿಣ ವಲಯದಲ್ಲೂ ದೊಡ್ಡ ಪ್ರಮಾಣದ ತೆರಿಗೆ ಬಾಕಿ ಇದ್ದು, 25,162 ಸುಸ್ತಿದಾರರಿದ್ದಾರೆ. 116.81 ಕೋಟಿ ರೂ. ತೆರಿಗೆ ಬಾಕಿ ಇದೆ. ಪೂರ್ವ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿಯೂ ಸಹ ಗಣನೀಯ ಸಂಖ್ಯೆಯ ಆಸ್ತಿ ಮಾಲೀಕರು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ. ಇದೇ ರೀತಿ ಯಲಹಂಕ ಮತ್ತು ಪಶ್ಚಿಮ ವಲಯಗಳಲ್ಲಿ ಕೂಡ ತೆರಿಗೆ ಬಾಕಿದಾರರ ಸಂಖ್ಯೆ ಹೆಚ್ಚಾಗಿದೆ. ರಾಜರಾಜೇಶ್ವರಿ ನಗರ ಮತ್ತು ದಸರಹಳ್ಳಿ ವಲಯಗಳಲ್ಲಿಯೂ ಸಹ ಸಾಕಷ್ಟು ಆಸ್ತಿಗಳು ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರೀ ನಷ್ಟ ಉಂಟುಮಾಡಿವೆ. ಒಟ್ಟಾರೆಯಾಗಿ, ಬೆಂಗಳೂರು ನಗರದ ಎಲ್ಲಾ ವಲಯಗಳನ್ನು ಸೇರಿಸಿದಾಗ 786.86 ಕೋಟಿ ರೂ. ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರಿ ನಷ್ಟವಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!