ಕಾಂಗ್ರೆಸ್​-RJD ವೇದಿಕೆಯಲ್ಲಿ ನನ್ನ ತಾಯಿನ ನಿಂದಿಸಿದರು.. ಪ್ರಧಾನಿ ಹೇಳಿಕೆ ..

ಆರ್​ಜೆಡಿ ಹಾಗೂ ಕಾಂಗ್ರೆಸ್​ ವೇದಿಕೆಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ಕೇವಲ ನನ್ನ ತಾಯಿ ಮಾತ್ರವಲ್ಲ, ಇಡೀ ದೇಶದ ತಾಯಂದಿರನ್ನು ಅಪಮಾನ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಅವರು ಆರೋಪ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಬಿಹಾರ ರಾಜ್ಯ ಜೀವಿಕ್​ ನಿಧಿ ಸಾಖ್ ಸಹಕಾರಿ ಸಂಘ ಲಿಮಿಟೆಡ್​ ಉದ್ಘಾಟನೆ ಮಾಡಿದರು. ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನನ್ನ ತಾಯಿ ದೇಶ ಸೇವೆ ಮಾಡು ಎಂದು ಆಶೀರ್ವಾದ ಮಾಡಿದ್ದಾಳೆ. ಪ್ರತಿ ತಾಯಿ ತನ್ನ ಮಗ, ತನ್ನ ಸೇವೆ ಮಾಡಲಿ ಎಂದು ಬಯಸುತ್ತಾಳೆ. ಅದರಂತೆ ದೇಶದ ತಾಯಂದಿರ ಸೇವೆ ಮಾಡು ಎಂದು ನನ್ನ ತಾಯಿ ಕಿವಿ ಮಾತು ಹೇಳಿದ್ದಳು. ಈಗ ನನ್ನ ತಾಯಿ ನನ್ನ ಜೊತೆ ಇಲ್ಲ, ನಮ್ಮನ್ನು ಬಿಟ್ಟು ಹೋಗಿದ್ದಾರೆ. ಆದರೆ ಆರ್​​ಜೆಡಿ-ಕಾಂಗ್ರೆಸ್​ ವೇದಿಕೆಯಲ್ಲಿ ನನ್ನ ತಾಯಿಯನ್ನು ನಿಂದಿಸಲಾಯಿತು. ಇದು ತುಂಬಾ ಕಷ್ಟ, ದುಃಖ ಕೊಡುತ್ತದೆ ಎಂದು ಹೇಳಿದ್ದಾರೆ.

 

ತಾಯಿ ಎಂದರೆ ನಮ್ಮ ಸಂಸಾರ, ಪ್ರಪಂಚ. ತಾಯಿ ನಮ್ಮ ಸ್ವಾಭಿಮಾನಿ, ಆತ್ಮಗೌರವ ಆಗಿರುತ್ತಾಳೆ. ಸಮೃದ್ಧವಾದ ಸಂಸ್ಕೃತಿ ಹೊಂದಿರುವ ಬಿಹಾರದಲ್ಲಿ ಕೆಲವು ದಿನಗಳ ಹಿಂದೆ ನಡೆದಂತಹದ್ದನ್ನು ನಾನು ಯಾವಾತ್ತು ಕೂಡ ಕಲ್ಪನೆ ಕೂಡ ಮಾಡಿರಲಿಲ್ಲ. ಬಿಹಾರದ ಯಾವೊಬ್ಬ ತಾಯಿ, ತಂಗಿಯರಿಗೆ, ದೇಶದ ಜನರಿಗೆ ಈ ಕಲ್ಪನೆ ಬಂದಿರಲಿಲ್ಲ. ಆದರೆ ಬಿಹಾರದಲ್ಲಿ ಆರ್​​ಜೆಡಿ- ಕಾಂಗ್ರೆಸ್​ ವತಿಯಿಂದ ನನ್ನ ತಾಯಿಯನ್ನು ನಿಂದಿಸಲಾಯಿತು ಎಂದು ಪ್ರಧಾನಿ ಮೋದಿಯವರು ಆರೋಪ ಮಾಡಿದ್ದಾರೆ.

ಈ ನಿಂದನೆ ಕೇವಲ ನನ್ನ ತಾಯಿಯನ್ನು ಅಪಮಾನ ಮಾಡಿದಂತೆ ಅಲ್ಲ. ಇಡೀ ದೇಶದ ತಾಯಿ, ಅಕ್ಕ, ತಂಗಿ, ಮಗಳಿಗೆ ಮಾಡಿದಂತ ಅಪಮಾನ ಆಗಿದೆ. ಕಾಂಗ್ರೆಸ್​-ಆರ್​​ಜೆಡಿ ಹೇಳಿದ್ದು ಬಿಹಾರದ ಪತ್ರಿ ಮಹಿಳೆಯರಿಗೆ, ಪುರುಷರಿಗೆ ಬೇಸರ ಆಗಿದೆ. ನಾನು ನಿಮ್ಮ ಮಗನಿದ್ದೇನೆ. ಇಷ್ಟೊಂದು ತಾಯಂದಿರ, ಸಹೋದರಿಯರ ನಮ್ಮ ಮುಂದೆ ಇದ್ದಾರೆ. ಇವತ್ತು ನನ್ನ ಮನಸನ್ನು, ನನ್ನ ದುಃಖವನ್ನು ನಿಮ್ಮ ಮುಂದೆ ಹೇಳಿದ್ದೇನೆ. ಇದಕ್ಕೆ ತಾಯಂದಿರ ಆಶೀರ್ವಾದ ಬೇಕು ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು