ಮೌನ ಮುರಿದ ವಿರಾಟ್ ಕೊಹ್ಲಿRCB ವಿಜಯೋತ್ಸವ ದುರಂತ ಆಯಿತು….!

18 ವರ್ಷದ ಬಳಿಕ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಆರ್​ಸಿಬಿ ವಿಜಯೋತ್ಸವದಲ್ಲಿ ವಿರಾಟ್ ಕೊಹ್ಲಿ, ಕ್ಯಾಪ್ಟನ್ ರಜತ್ ಪಾಟಿದಾರ್ ಸೇರಿದಂತೆ ತಂಡದ ಎಲ್ಲ ಆಟಗಾರರು ಭಾಗಿಯಾಗಿದ್ದರು. ಈ ಆಟಗಾರರನ್ನೆಲ್ಲ ಕಣ್ತುಂಬಿಕೊಳ್ಳಬೇಕು ಎಂದು ಲಕ್ಷಾಂತರ ಜನರು ಸ್ಟೇಡಿಯಂ ಬಳಿ ಒಂದೇ ಬಾರಿ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 11 ಜನರು ಉಸಿರು ಚೆಲ್ಲಿದ್ರೆ, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸದ್ಯ ಈ ಸಂಬಂಧ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ಜೂನ್ 4 ರಂದು ನಡೆದಂತಹ ದುರ್ಘಟನೆಯಿಂದ ನಿಮ್ಮನ್ನು ಮತ್ತೆ ಸಿದ್ಧಪಡಿಸಲು ಆಗುವುದಿಲ್ಲ. ಆರ್​ಸಿಬಿ ಫ್ರಾಂಚೈಸಿಯ ಐತಿಹಾಸಿಕ ಸಂತೋಷದ ಕ್ಷಣ ಏನಾಗಬೇಕಿತ್ತು ಎಂದುಕೊಂಡಿತ್ತೋ ಅದು ಆಗಲಿಲ್ಲ. ಬದಲಿಗೆ ಅದು ದೊಡ್ಡ ದುರಂತವಾಗಿ ಬದಲಾಯಿತು. ಇದು ತುಂಬಾ ದುಃಖಕರ ಸಂಗತಿ. ಘಟನೆಯಲ್ಲಿ ಉಸಿರು ಚೆಲ್ಲಿರುವಂತಹ ಅವರ ಕುಟುಂಬದ ಬಗ್ಗೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಗಾಯಗೊಂಡವರು ಬೇಗ ರಿಕವರಿ ಆಗಲೆಂದು ಕೇಳಿಕೊಂಡಿದ್ದೇನೆ. ನಿಮ್ಮನ್ನು ಕಳೆದುಕೊಂಡಿರುವುದು ನಮ್ಮಲ್ಲಿ ಭಾಗವಾಗಿದೆ. ಇನ್ಮುಂದೆ ಕಾಳಜಿ, ಗೌರವ ಮತ್ತು ಜವಾಬ್ದಾರಿಯಿಂದ ನಾವು ಮುಂದೆ ಸಾಗುತ್ತೇವೆ ಎಂದು ವಿರಾಟ್ ಕೊಹ್ಲಿ ಅವರು ಭಾವುಕವಾಗಿ ಹೇಳಿದ್ದಾರೆ.

 

ಘಟನೆಯ ಬಳಿಕ ಸುದೀರ್ಘ ಮೌನಕ್ಕೆ ಜಾರಿದ್ದ ಆರ್​​​ಸಿಬಿ ಅಗಸ್ಟ್​​ 28ರಂದು ಫ್ಯಾನ್ಸ್​ಗೆ ಭಾವನಾತ್ಮಕ ಪತ್ರ ಬರೆದಿತ್ತು. ಮೌನ ಮುರಿದು ಆರ್​​ಸಿಬಿ ಕೇರ್ಸ್​ ಅನ್ನೋ ಯೋಜನೆಯನ್ನ ರೂಪಿಸಿರೋದಾಗಿ ತಿಳಿಸಿತ್ತು. ಎರಡು ದಿನಗಳ ಹಿಂದೆ ಕಾಲ್ತುಳಿತ ದುರಂತದಲ್ಲಿ ಅಸುನೀಗಿದ ಕುಟುಂಬದವರಿಗೆ 10 ಲಕ್ಷದ ಬದಲಾಗಿ 25 ಲಕ್ಷ ಪರಿಹಾರ ನೀಡೋದಾಗಿ ಘೋಷಿಸಿತ್ತು.

Related Posts

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!