ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟಿ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ

ನಟಿ ಭಾರತಿರಿಂದ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಕೆ
ನಿನ್ನೆಯಷ್ಟೇ ಕನ್ನಡ ಚಿತ್ರರಂಗದ ನಟಿಯರಾದ ಜಯಾಮಾಲಾ, ಶೃತಿ ಹಾಗೂ ಮಾಳವಿಕಾ ಅವಿನಾಶ್ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ನಟ, ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಧಿಕೃತ ಮನವಿ ಸಲ್ಲಿಸಿದ್ದರು.
ಇಂದು ವಿಷ್ಣುವರ್ಧನ್ ಪತ್ನಿ ಭಾರತಿ ಹಾಗೂ ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕನಿಷ್ಠ 10 ಗುಂಟೆ ಜಾಗವನ್ನು ರಾಜ್ಯ ಸರ್ಕಾರ ನೀಡಬೇಕೆಂದು ಲಿಖಿತ ಮನವಿ ಸಲ್ಲಿಸಿದ್ದಾರೆ. ಜೊತೆಗೆ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಭಾರತಿ ಹಾಗೂ ಅನಿರುದ್ಧ ಮನವಿ ಸಲ್ಲಿಸಿದ್ದಾರೆ.
ಹೀಗಾಗಿ ಕರ್ನಾಟಕದಲ್ಲಿ ಮತ್ತೊಬ್ಬ ನಟನಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯ ನಿರೀಕ್ಷೆ ಮೂಢಿದೆ. ಈಗಾಗಲೇ ದಿವಂಗತ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದೆ.
ಇನ್ನೂ ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಸಿಎಂಗೆ ಮನವಿ ಮಾಡಿರುವುದನ್ನು ಖಚಿತಪಡಿಸಿದ್ದಾರೆ. ಸಿಎಂ ರನ್ನ ಭೇಟಿ ಮಾಡಿದ್ದೇವು. ವಿಷ್ಣು ವರ್ಧನ್ ಅವರ ಅಭಿಮಾನಿಗಳಿಗಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ರವರ ಸ್ಮಾರಕಕ್ಕೆ ಜಾಗ ಕೇಳಿದ್ದೇವೆ. ಅದಕ್ಕೆ ಸಿಎಂ ಸರಿ ಎಂದಿದ್ದಾರೆ. ಅವರಿಗೆ ನಾನು ಧನ್ಯವಾದ ಹೇಳ್ತೇನೆ. ಕರ್ನಾಟಕ ರತ್ನ ಕೊಡಿ ಎಂದು‌ ನಾನು ಕೇಳಲ್ಲ. ಆದರೆ ಅಭಿಮಾನಿ ಗಳು ಕೇಳುತ್ತಿದ್ದಾರೆ. ಅವರಿಗಾಗಿ ಕರ್ನಾಟಕ ರತ್ನ ಕೊಡಬೇಕು. ಅಭಿಮಾನಿಗಳು ಬಂದು ನಮಸ್ಕಾರ ಮಾಡಲು ಜಾಗಕ್ಕೆ ಅನುಮತಿ ಕೊಡಬೇಕು . ೧೮ನೇ ತಾರೀಖಿನಂದು ವಿಷ್ಣುರವರ ಹುಟ್ಟು ಹಬ್ಬ ಇದೆ. ಅಷ್ಟರೊಳಗೆ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಸರ್ಕಾರ ಅನುಮತಿ ಕೊಡಬಹುದೆಂಬ ನಿರೀಕ್ಷೆ ಇದೆ ಎಂದಿದ್ದಾರೆ.

 

ವಿಷ್ಣುವರ್ಧನ್ ಅಳಿಯ ನಟ ಅನಿರುದ್ದ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಅಭಿಮಾನ್ ಸ್ಟುಡಿಯೋ ದಲ್ಲಿರುವ ಹತ್ತು ಗುಂಟೆ ಜಾಗಕ್ಕಾಗಿ ಮನವಿ ಮಾಡಿದ್ದೇವೆ. ಆ ಜಾಗದಲ್ಲಿ ಮಂಟಪ ನಿರ್ಮಿಸಲು ಅನುಮತಿ ಕೊಡಿ ಎಂದು ಕೇಳಿದ್ದೇವೆ. ಹಿಂದೆ ಅಲ್ಲಿ ನಾವೇ ಮಂಟಪವನ್ನು ಕಟ್ಟಿದ್ದೇವು. ಈಗಲೂ ಜಾಗ ಕೊಟ್ಟರೆ ನಾವೇ ಮಂಟಪ ಕಟ್ಟಿಕೊಳ್ತೇವೆ. ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಜೊತೆಗೂ ಸಿಎಂ ಮಾತಾಡಿದ್ದಾರೆ . ಅವರು ಕೂಡ ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ . ಸೆಪ್ಟೆಂಬರ್ ೧೮ ರೊಳಗೆ ಜಾಗಕ್ಕೆ ಅನುಮತಿ ಸಿಗಬಹುದು. ನಾಳೆಯ ಕ್ಯಾಬಿನೆಟ್ ನಲ್ಲಿ ಕರ್ನಾಟಕ ರತ್ನದ ಬಗ್ಗೆ ಸಿಎಂ ಚರ್ಚೆ ಮಾಡೋದಾಗಿ ಹೇಳಿದ್ದಾರೆ. ನಾಳೆ ಚರ್ಚೆ ಆಗಿ ಅಪ್ಪ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಯಾಗುವ ಸಾಧ್ಯತೆ ಇದೆ ಎಂದು ನಟ ಅನಿರುದ್ಧ ಹೇಳಿದ್ದಾರೆ.

Related Posts

UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ :- ಈಗಾಗಲೇ ಕೇಂದ್ರ ಸರ್ಕಾರ 2,000 ವರೆಗಿನ ಯುಪಿಐ ಹಾಗೂ ರೂಪೇ (RuPay) ಡೆಬಿಟ್ ಕಾರ್ಡ್ ವಹಿವಾಟುಗಳಿಗೆ ಯಾವುದೇ ಬ್ಯಾಂಕ್ ಅಥವಾ ಪಾವತಿ ಸಂಸ್ಥೆಗಳು ಶುಲ್ಕ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಬ್ಯಾಂಕ್‌ಗಳು, ಸೇವಾ ಪೂರೈಕೆದಾರರು ಮತ್ತು ವಿವಿಧ ಸಂಘಟನೆಗಳ…

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ರಾಜ್ಯ ಸರ್ಕಾರವು ಇತ್ತೀಚೆಗೆ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ, ವಕೀಲ ಗಿರೀಶ್ ಭಾರದ್ವಾಜ್ ಅವರು ವಕೀಲ ಅಂಗದ್ ಕಾಮತ್ ಅವರ ಮೂಲಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ…

You Missed

45 ವರ್ಷದ ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

45 ವರ್ಷದ  ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

UPI  ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

lja5nqb73ba7bxod16

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು