ಸಿಎಂ ಸಿದ್ದರಾಮಯ್ಯ ಭೇಟಿಯಾದ ನಟಿ ಭಾರತಿ ವಿಷ್ಣುವರ್ಧನ್, ನಟ ಅನಿರುದ್ಧ

ನಟಿ ಭಾರತಿರಿಂದ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಕೆ
ನಿನ್ನೆಯಷ್ಟೇ ಕನ್ನಡ ಚಿತ್ರರಂಗದ ನಟಿಯರಾದ ಜಯಾಮಾಲಾ, ಶೃತಿ ಹಾಗೂ ಮಾಳವಿಕಾ ಅವಿನಾಶ್ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ನಟ, ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಅಧಿಕೃತ ಮನವಿ ಸಲ್ಲಿಸಿದ್ದರು.
ಇಂದು ವಿಷ್ಣುವರ್ಧನ್ ಪತ್ನಿ ಭಾರತಿ ಹಾಗೂ ಅಳಿಯ ಅನಿರುದ್ಧ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕನಿಷ್ಠ 10 ಗುಂಟೆ ಜಾಗವನ್ನು ರಾಜ್ಯ ಸರ್ಕಾರ ನೀಡಬೇಕೆಂದು ಲಿಖಿತ ಮನವಿ ಸಲ್ಲಿಸಿದ್ದಾರೆ. ಜೊತೆಗೆ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಸಿಎಂ ಸಿದ್ದರಾಮಯ್ಯಗೆ ಭಾರತಿ ಹಾಗೂ ಅನಿರುದ್ಧ ಮನವಿ ಸಲ್ಲಿಸಿದ್ದಾರೆ.
ಹೀಗಾಗಿ ಕರ್ನಾಟಕದಲ್ಲಿ ಮತ್ತೊಬ್ಬ ನಟನಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯ ನಿರೀಕ್ಷೆ ಮೂಢಿದೆ. ಈಗಾಗಲೇ ದಿವಂಗತ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಈ ಹಿಂದಿನ ಬಿಜೆಪಿ ಸರ್ಕಾರ ನೀಡಿದೆ.
ಇನ್ನೂ ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಬೇಕೆಂದು ಸಿಎಂಗೆ ಮನವಿ ಮಾಡಿರುವುದನ್ನು ಖಚಿತಪಡಿಸಿದ್ದಾರೆ. ಸಿಎಂ ರನ್ನ ಭೇಟಿ ಮಾಡಿದ್ದೇವು. ವಿಷ್ಣು ವರ್ಧನ್ ಅವರ ಅಭಿಮಾನಿಗಳಿಗಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ರವರ ಸ್ಮಾರಕಕ್ಕೆ ಜಾಗ ಕೇಳಿದ್ದೇವೆ. ಅದಕ್ಕೆ ಸಿಎಂ ಸರಿ ಎಂದಿದ್ದಾರೆ. ಅವರಿಗೆ ನಾನು ಧನ್ಯವಾದ ಹೇಳ್ತೇನೆ. ಕರ್ನಾಟಕ ರತ್ನ ಕೊಡಿ ಎಂದು‌ ನಾನು ಕೇಳಲ್ಲ. ಆದರೆ ಅಭಿಮಾನಿ ಗಳು ಕೇಳುತ್ತಿದ್ದಾರೆ. ಅವರಿಗಾಗಿ ಕರ್ನಾಟಕ ರತ್ನ ಕೊಡಬೇಕು. ಅಭಿಮಾನಿಗಳು ಬಂದು ನಮಸ್ಕಾರ ಮಾಡಲು ಜಾಗಕ್ಕೆ ಅನುಮತಿ ಕೊಡಬೇಕು . ೧೮ನೇ ತಾರೀಖಿನಂದು ವಿಷ್ಣುರವರ ಹುಟ್ಟು ಹಬ್ಬ ಇದೆ. ಅಷ್ಟರೊಳಗೆ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಸರ್ಕಾರ ಅನುಮತಿ ಕೊಡಬಹುದೆಂಬ ನಿರೀಕ್ಷೆ ಇದೆ ಎಂದಿದ್ದಾರೆ.

 

ವಿಷ್ಣುವರ್ಧನ್ ಅಳಿಯ ನಟ ಅನಿರುದ್ದ್ ಮಾಧ್ಯಮಗಳ ಜೊತೆ ಮಾತನಾಡಿದ್ದರು. ಅಭಿಮಾನ್ ಸ್ಟುಡಿಯೋ ದಲ್ಲಿರುವ ಹತ್ತು ಗುಂಟೆ ಜಾಗಕ್ಕಾಗಿ ಮನವಿ ಮಾಡಿದ್ದೇವೆ. ಆ ಜಾಗದಲ್ಲಿ ಮಂಟಪ ನಿರ್ಮಿಸಲು ಅನುಮತಿ ಕೊಡಿ ಎಂದು ಕೇಳಿದ್ದೇವೆ. ಹಿಂದೆ ಅಲ್ಲಿ ನಾವೇ ಮಂಟಪವನ್ನು ಕಟ್ಟಿದ್ದೇವು. ಈಗಲೂ ಜಾಗ ಕೊಟ್ಟರೆ ನಾವೇ ಮಂಟಪ ಕಟ್ಟಿಕೊಳ್ತೇವೆ. ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಜೊತೆಗೂ ಸಿಎಂ ಮಾತಾಡಿದ್ದಾರೆ . ಅವರು ಕೂಡ ಸಕಾರಾತ್ಮಕ ವಾಗಿ ಸ್ಪಂದಿಸಿದ್ದಾರೆ . ಸೆಪ್ಟೆಂಬರ್ ೧೮ ರೊಳಗೆ ಜಾಗಕ್ಕೆ ಅನುಮತಿ ಸಿಗಬಹುದು. ನಾಳೆಯ ಕ್ಯಾಬಿನೆಟ್ ನಲ್ಲಿ ಕರ್ನಾಟಕ ರತ್ನದ ಬಗ್ಗೆ ಸಿಎಂ ಚರ್ಚೆ ಮಾಡೋದಾಗಿ ಹೇಳಿದ್ದಾರೆ. ನಾಳೆ ಚರ್ಚೆ ಆಗಿ ಅಪ್ಪ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಘೋಷಣೆ ಯಾಗುವ ಸಾಧ್ಯತೆ ಇದೆ ಎಂದು ನಟ ಅನಿರುದ್ಧ ಹೇಳಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು