ಪೃಥ್ವಿ ಶಾ ಬಾಳಿಗೆ 3ನೇ ಗರ್ಲ್​ಫ್ರೆಂಡ್​​ ಎಂಟ್ರಿ..ನಿಧಿ ತಪಾಡಿಯಾ ಹೋದ್ಲು.. ಹೊಸ ಹುಡುಗಿ ಬಂದ್ಲು

ಟೀಮ್​ ಇಂಡಿಯಾಗೆ ಸಿಕ್ಕ ಅಪರೂಪದ ಟ್ಯಾಲೆಂಟೆಡ್​ ಕ್ರಿಕೆಟರ್​. ಭಾರತದ ಪರ ಡೆಬ್ಯೂ ಪಂದ್ಯದಲ್ಲೇ ಶತಕ ಸಿಡಿಸಿ ಟೀಮ್ ಇಂಡಿಯಾದ ಭವಿಷ್ಯ ಎನಿಸಿಕೊಂಡ ಆಟಗಾರ. ಈತನ ಆಟ ನೋಡಿದ ದಿಗ್ಗಜರು, ಮರಿ ಸಚಿನ್, ಸೆಹ್ವಾಗ್ ಎಂದೇ ಗುಣಗಾನ ಮಾಡಿದ್ರು. 18ನೇ ವಯಸ್ಸಿನಲ್ಲೇ ಇಂಟರ್​ನ್ಯಾಷನಲ್ ಕ್ರಿಕೆಟ್​​ಗೆ ಗ್ರ್ಯಾಂಡ್​​ ಎಂಟ್ರಿ ನೀಡಿದ ಫೈರಿ ಓಪನರ್​ ಅಷ್ಟೇ ವೇಗವಾಗಿ ಮರೆಯಾಗಿ ಹೋದ್ರು. ಸ್ವಯಂಕೃತ ಅಪರಾಧಗಳು ಕರಿಯರ್​ಗೆ​ ಕೊಳ್ಳಿ ಇಟ್ವು.

ನಾನು ಕ್ರಿಕೆಟ್​​ಗಿಂತ ಬೇರೆಯದ್ದಕ್ಕೆ ಹೆಚ್ಚು ನಾನು ಟೈಮ್​ ನೀಡ್ತಿದ್ದೆ. ನನ್ನ ಕರಿಯರ್​ ಹಳ್ಳ ಹಿಡಿಯೋಕೆ ಇದು ಮುಖ್ಯ ಕಾರಣ ಎಂದಿದ್ದ ಪೃಥ್ವಿ ಶಾ ಇದೀಗ ಮತ್ತೆ ಅದೇ ದಾರಿಯಲ್ಲಿ ಸಾಗ್ತಿದ್ದಂತೆ ಕಾಣ್ತಿದ್ದಾರೆ. ಕ್ರಿಕೆಟ್​​​ ಕರಿಯರ್​​ಗೆ ಕಾಲಿಟ್ಟ ಕೆಲವೇ ದಿನಗಳಲ್ಲಿ ಪೃಥ್ವಿ ಶಾ ಲವ್​ನಲ್ಲಿ ಬಿದ್ದ ಸುದ್ದಿ ಹೊರಬಿದ್ದಿತ್ತು. ನಟಿ ಪ್ರಾಚಿ ಸಿಂಗ್​ ಜೊತೆಗೆ ಪೃಥ್ವಿಯ ಹೆಸರು ಸಖತ್​ ಸೌಂಡ್​ ಮಾಡಿತ್ತು. ಅಷ್ಟೇ ವೇಗವಾಗಿ ಇಬ್ಬರ ಬ್ರೇಕ್​ ಅಪ್​ ಆಗಿತ್ತು.

 

ಪ್ರಾಚಿ ಸಿಂಗ್​ ಬಳಿಕ ಬಾಲಿವುಡ್​ ನಟಿ ನಿಧಿ ತಪಾಡಿಯಾ ಜೊತೆಗೆ ಪೃಥ್ವಿ ಹೆಸರು ಥಳುಕು ಹಾಕಿಕೊಂಡಿತ್ತು. ಇಬ್ಬರ ನಡೆಗಳೂ ಕೂಡ ಲವ್​ ಗಾಸಿಪ್​ಗೆ ಮತ್ತಷ್ಟು ಪುಷ್ಠಿ ನೀಡಿದ್ವು. 2023ರ ಐಫಾ ಅವಾರ್ಡ್​ ಫಂಕ್ಷನ್​ ವೇಳೆ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ರು. ಅದಾಗಿ ಕೆಲವೇ ದಿನಕ್ಕೆ ಈ ಲವ್​ ಕಹಾನಿಯೂ ಮುರಿದು ಬಿದ್ದ ಸುದ್ದಿ ಹೊರಬಿದ್ದಿತ್ತು.

ನಿಧಿ ತಪಾಡಿಯಾ ದೂರಾದ ಬಳಿಕ ಪೃಥ್ವಿ ಲೈಫ್​ಗೆ ಹೊಸ ಗೆಳತಿಯ ಎಂಟ್ರಿಯಾಗಿದೆ. ಆಕೆಯ ಹೆಸರೇ ಆಕೃತಿ ಅಗರ್​ವಾಲ್​. ಪೃಥ್ವಿ ಶಾ ಹಾಗೂ ಆಕೃತಿ ಅಗರ್​​ವಾಲ್​ ಇಬ್ಬರ ನಡುವೆ ಸಂಮ್​​ಥಿಂಗ್​-ಸಂಮ್​​ಥಿಂಗ್​ ಹ್ಯಾಪನಿಂಗ್​ ಅನ್ನೋ ಗಾಸಿಪ್​ ಬಹಳ ಹಿಂದಿನಿಂದ ಇತ್ತು. ಆ ಗಾಸಿಪ್​ಗೆ ಪುಷ್ಟಿ ಸಿಕ್ಕಿದೆ. ಪೃಥ್ವಿ ಶಾ- ಆಕೃತಿ ಅಗರ್​ವಾಲ್​ ಇಬ್ಬರೂ ಒಟ್ಟಾಗಿ ಗಣೇಶನ ಹಬ್ಬವನ್ನ ಆಚರಿಸಿದ್ದಾರೆ. ಹಬ್ಬದ ಸಂಭ್ರಮದ ಫೋಟೋಗಳನ್ನ ಆಕೃತ್ತಿ ತಮ್ಮ ಇನ್ಸ್​​ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

ಆಕೃತಿ ಅಗರ್​ವಾಲ್​ ಫೋಟೋಗಳನ್ನ ಹಂಚಿಕೊಂಡಿದ್ದೆ ತಡ ಫ್ಯಾನ್ಸ್​​ ಕಮೆಂಟ್​ಗಳ ಸುರಿಮಳೆ ಸುರಿಸಿದ್ದಾರೆ. ಕೆಲವರು ಲವ್​ ಬಗ್ಗೆ ಮಾತನಾಡಿದ್ರೆ, ಇನ್ನು ಕೆಲವರು ಪೃಥ್ವಿಗೆ ಇನ್ನೂ ಬುದ್ಧಿ ಬಂದಿಲ್ವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರಿಯರ್​ ಮೇಲೆ ಗಮನವಹಿಸಿ ರೈಟ್​​ ಟ್ರ್ಯಾಕ್​ಗೆ ಮರಳೋಕೆ ಇನ್ನೂ ಅವಕಾಶ ಇದೆ. ಅದಕ್ಕೆ ಏನ್​ ಮಾಡಬೇಕೋ ಅದನ್ನ ಬಿಟ್ಟು ಉಳಿದಿರೋದ್ರ ಮೇಲೆ ಹೆಚ್ಚು ಗಮನವಹಿಸ್ತಿದ್ದೀರಾ ಎಂದು ಕಿಡಿಕಾರಿದ್ದಾರೆ.

 

ಒಟ್ಟಿನಲ್ಲಿ ಪೃಥ್ವಿ ಷಾ ಬದುಕಿಗೆ ಹೊಸ ಗೆಳತಿಯ ಎಂಟ್ರಿಯಾಗಿದೆ. ಹೊಸ ಗೆಳತಿಯರ ಎಂಟ್ರಿಯ ಬಳಿಕ ಹಲವು ಕ್ರಿಕೆಟರ್​ಗಳ ಕರಿಯರ್​ ಬದಲಾದ ಉದಾಹರಣೆಗಳಿವೆ. ಹೀಗಾಗಿ ಈ ಆಕೃತಿ ಅಗರ್​ವಾಲ್​ ಪೃಥ್ವಿ ಜೀವನಕ್ಕೆ ಅದೃಷ್ಟ ದೇವತೆಯಾಗ್ತಾರಾ? ಹಳಿ ತಪ್ಪಿರೋ ಪೃಥ್ವಿಯ ಕರಿಯರ್​​ನ ಸರಿದಾರಿಗೆ ತರಲು ಪ್ರಯತ್ನಿಸ್ತಾರಾ? ಕಾದು ನೋಡೋಣ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು