ಅಧಿಕೃತವಾಗಿ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಆಹ್ವಾನ…..!

ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಭಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಇಂದು ದಸರಾ ಸಮಿತಿ ಬಾನು ಮುಷ್ತಾಕ್ ನಿವಾಸಕ್ಕೆ ಭೇಟಿಯಾಗಿ, ಅಧಿಕೃತವಾಗಿ ಆಹ್ವಾನಿಸಿದೆ.

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಚಾಮುಂಡೇಶ್ವರಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರೂಪಾ ಮತ್ತು ಮೈಸೂರು ಜಿಲ್ಲಾಡಳಿತ ನೇತೃತ್ವದ ತಂಡವು ಅಮೀರ್ ಮೊಹಲ್ಲಾದಲ್ಲಿರುವ ಭಾನು ಮುಷ್ತಾಕ್ ನಿವಾಸಕ್ಕೆ ಆಗಮಿಸಿ, ಆಹ್ವಾನ ನೀಡಿದೆ.

ಕುಟುಂಬ ಸಮೇತರಾಗಿ ದಸರಾಗೆ ಬರಬೇಕೆಂದು ಡಿ.ಸಿ ಲಕ್ಷ್ಮಿಕಾಂತರೆಡ್ಡಿ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಆನೆ ವಿಗ್ರಹ ನೀಡಿ ಕರೆಯೋಲೆ ಕೊಟ್ಟಿದ್ದಾರೆ. ದಸರಾ ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿದ ಬಾನು ಮುಷ್ತಾಕ್, ಬರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಅವರು..

ಖಂಡಿತಾ ನನಗೆ ಖುಷಿ ವಿಚಾರ. ದಸರಾವನ್ನು ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ನೀವು ಚಾಮುಂಡೇಶ್ವರಿ ತಾಯಿ ಅಂತಿರಿ, ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡಹಬ್ಬ ಅಂತಾರೆ, ಅದನ್ನು ಗೌರವಿಸುತ್ತೇನೆ. ನಾಡಹಬ್ಬ, ಚಾಮುಂಡೇಶ್ವರಿ ತಾಯಿ ಎಂದು ಪ್ರೀತಿ, ಅಭಿಮಾನದಿಂದ ಕರೀತೀರಿ. ಇದು ನಮ್ಮ ಸಂಸ್ಕೃತಿಯ ಭಾಗವೇ ಆಗಿದೆ, ನಾಡಿನ ಭಾಗವಾಗಿದೆ. ಹಾಗಾಗಿ ಇದು ನನಗೂ ಪ್ರಿಯವಾಗಿದೆ. ನಾನು ಗೌರವಿಸುವ ಹಬ್ಬವಾಗಿದೆ. ಪ್ರೀತಿಯಿಂದ ಭಾಗಿಯಾಗುವ ಹಬ್ಬವಾಗಿದೆ. ನಾನು ತಂದೆ ತಾಯಿ ಜೊತೆ ಹಲವು ಬಾರಿ ಜಂಬು ಸವಾರಿ ನೋಡಲು ಹೋಗ್ತಿದ್ದೆ. ಈಗ ನಾನೇ ದಸರಾ ಉದ್ಘಾಟನೆ ಸಂದರ್ಭದ ಆಹ್ವಾನ ಬಂದಿದೆ. ನನಗೆ ಸಂತೋಷವಾಗಿದೆ.

ಬಾನು ಮುಷ್ತಾಕ್, ಹಿರಿಯ ಸಾಹಿತಿ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!