ಧರ್ಮಸ್ಥಳದ ವಿಷಯದಲ್ಲಿ ಕೇಂದ್ರದ ನಡೆ ಏನು ? ಸಂದರ್ಭ ಬಂದಾಗ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ!

ಧರ್ಮಸ್ಥಳದ ಅಪಪ್ರಚಾರದ ವಿಷಯದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ವಚನಾನಂದ ಸ್ವಾಮೀಜಿ ನೇತೃತ್ವದ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದು ಅಮಿತ್ ಶಾ ಹೇಳಿದ್ದಾರೆ.

ಅಮಿತ್ ಶಾ ಭೇಟಿಯಾದ ಮಠಾಧೀಶರ ನಿಯೋಗ ಧರ್ಮಸ್ಥಳ ಅಪಪ್ರಚಾರದ ತನಿಖೆಯನ್ನು ಎನ್‌ಐಎಗೆ ವಹಿಸಲು ಮನವಿ ಸಂದರ್ಭ ಬಂದಾಗ ಕೇಂದ್ರ ಎಂಟ್ರಿ ಕೊಡುತ್ತೆ ಎಂದ ಅಮಿತ್ ಶಾ ಧರ್ಮಸ್ಥಳದಲ್ಲಿ ಬುರುಡೆ ಗ್ಯಾಂಗ್‌ನಿಂದ ಅಪಪ್ರಚಾರ ವಿಚಾರವಾಗಿ ರಾಜ್ಯದ ವಿವಿಧ ಮಠಾಧೀಶರು ದೆಹಲಿಗೆ ತೆರಳಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಠಾಧೀಶರ ನಿಯೋಗ ಹರಿಹರದ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿಗಳ ನೇತೃತ್ವದ ವಿವಿಧ ಮಠಾಧೀಶರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯದ ಎಸ್‌ಐಟಿಯಿಂದ ಕೇಂದ್ರದ ಎನ್ಐಎಗೆ ವರ್ಗಾಯಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಸ್ವಾಮೀಜಿಗಳ ನಿಯೋಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನೀವೇನು ಆತಂಕಕ್ಕೆ ಒಳಗಾಗಬೇಡಿ. ನಾವು ಧರ್ಮಸ್ಥಳದ ಪ್ರಕರಣವನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯ ಸರ್ಕಾರ ಪ್ರಕರಣ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ಗೊತ್ತಿದೆ. ಎಸ್‌ಐಟಿ ತನಿಖೆಯನ್ನು ಯಾವ ಮಾರ್ಗದಲ್ಲಿ ಕೊಂಡ್ಯೊಯ್ಯುತ್ತಿದೆ ಎಂಬುದರ ಪಿನ್ ಟು‌ ಪಿನ್ ಮಾಹಿತಿ ನಮಗಿದೆ. ಧರ್ಮಸ್ಥಳ ವಿಚಾರದಲ್ಲಿ ನಾವಿದ್ದೇವೆ. ಯಾವಾಗ ಸಂದರ್ಭ ಎದುರಾಗುತ್ತೋ ಆಗ ಖಂಡಿತಾ ನಾವು‌ ಪ್ರವೇಶ ಮಾಡಿಯೇ ತೀರುತ್ತೇವೆ. ನೀವುಗಳು ನೆಮ್ಮದಿಯಿಂದ ಇರಿ. ಧರ್ಮಸ್ಥಳಕ್ಕೆ ಒಂದೇ ಒಂದು ಹುಲ್ಲುಕಡ್ಡಿಯಷ್ಟು ತೊಂದರೆಯಾಗದಂತೆ ಹಿಂದೂಗಳ ಪವಿತ್ರ ಸ್ಥಳವಾಗಿ ಶಾಶ್ವತವಾಗಿ ಇರುವ ಹಾಗೇ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎಂದು ಅಮಿತ್ ಶಾ ಮಠಾಧೀಶರ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ನಾವು ಅಂದರೆ ಕೇಂದ್ರ ಸರ್ಕಾರ ಧರ್ಮಸ್ಥಳದ ಪರವಾಗಿದ್ದೇವೆ. ಒಂದೇ ಒಂದು ಕೂದಲು ಅಪಕೀರ್ತಿ ಈ ಸ್ಥಳಕ್ಕೆ ಬಾರದ ರೀತಿ ನಾವು ನೋಡಿಕೊಳ್ಳುತ್ತೇವೆ. ಧರ್ಮಸ್ಥಳದ ಪರಂಪರೆಯ ಬಗ್ಗೆ ನಮಗೆ ಮಾಹಿತಿಯಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನೂ ಇದೇ ಸ್ವಾಮೀಜಿಗಳ ನಿಯೋಗವು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಪತ್ರ ಸಲ್ಲಿಸಿದೆ. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರದ ಎಸ್‌ಐಟಿಯಿಂದ ಕೇಂದ್ರ ಸರ್ಕಾರದಡಿ ಇರುವ ಎನ್‌ಐಎ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು