ಇವಿಎಂ ಸಾಕು, ಬ್ಯಾಲೆಟ್​​​ ಪೇಪರ್​​ ಬೇಕು !

ದೇಶದಲ್ಲಿ ಎರಡೇ ಚರ್ಚೆ, ಒಂದು ಜಿಎಸ್​​ಟಿ, ಇನ್ನೊಂದು ವೋಟ್​​​ ಚೋರಿ. ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಸರಣಿಯಾಗಿ ಮತಗಳ್ಳತನ ಆರೋಪ ಮಾಡಿದ್ದು, ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಮಧ್ಯೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆ ವಿಚಾರದಲ್ಲಿ ಹೊಸ ದಾಳ ಉರುಳಿಸಿದೆ. ಅಷ್ಟೇ ಅಲ್ಲ, ಸಂಪುಟ ಸಭೆಯಲ್ಲಿ ಹಲವು ವಿಚಾರಗಳಲ್ಲಿ ಹೊಸ ನಿರ್ಧಾರಗಳನ್ನ ತಳೆದಿದೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದ ಚುನಾವಣಾ ವ್ಯವಸ್ಥೆ ಮೇಲೆ ನಂಬಿಕೆಯೇ ಇಲ್ಲ. ಇವಿಎಂ ಮೇಲಂತೂ ಎಳ್ಳಷ್ಟು ವಿಶ್ವಾಸವಿಲ್ಲ. ಹೀಗಾಗಿ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧವೇ ಕೈ ನಾಯಕ ರಾಹುಲ್ ಗಾಂಧಿ ಸಿಡಿದೆದ್ದಿದ್ದಾರೆ. ಇದೇ ವಿಚಾರ ಇಟ್ಟುಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸ್ತಿದ್ದಾರೆ. ಇದ್ರ ಮಧ್ಯೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಚುನಾವಣೆ ವಿಚಾರದಲ್ಲಿ ಹೊಸ ನಿಲುವು ತಳೆದಿದೆ.

ರಾಹುಲ್ ಗಾಂಧಿ ಸರಣಿಯಾಗಿ ಮತಗಳ್ಳತನ ಆರೋಪ ಮಾಡಿದ್ದು, ದೇಶಾದ್ಯಂತ ಭಾರೀ ಚರ್ಚೆ ಹುಟ್ಟುಹಾಕಿದೆ. ಇದೇ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸ್ತಾನೆ ಇದೆ. ಈ ಮಧ್ಯೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರಗಳನ್ನ ಕೈಗೊಂಡಿದೆ. ಇವಿಎಂ ಸಾಕು, ಬ್ಯಾಲೆಟ್​​​ ಪೇಪರ್​​ ಬೇಕು ಅಂತ ಚುನಾವಣೆ ಆಯೋಗಕ್ಕೆ ಸಂಪುಟದಿಂದ ಶಿಫಾರಸು ಮಾಡಿದೆ. ಸದ್ಯಕ್ಕೆ ಗ್ರಾಮ ಪಂಚಾಯ್ತಿಯಲ್ಲಿ ಮಾತ್ರ ಬ್ಯಾಲೇಟ್​​ ಬಳಕೆಯಲ್ಲಿದೆ. ಪುರಸಭೆ, ನಗರಸಭೆ, ಪಾಲಿಕೆ ಎಲೆಕ್ಷನ್​​ನಲ್ಲಿ ಇವಿಎಂ ಪ್ರಯೋಗ ನಡೆದಿದೆ.

ಇತ್ತೀಚೆಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗಿದೆ.ಮತಗಳ್ಳತನ ಚರ್ಚೆ ಆಗ್ತಿದ್ದು, ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸ ಕುಗ್ಗಿದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್​ಗೆ ಆದ್ಯತೆ ನೀಡಿ . ಇವಿಎಂ ಬದಲು ಬ್ಯಾಲೆಟ್ ಪೇಪರ್ ಜಾರಿಗೆ ನಿಯಮಗಳನ್ನು ರೂಪಿಸಿ
ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಂಪುಟ ಒಪ್ಪಿದೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನ ಕೈಗೊಳ್ಳಲಾಗಿದೆ. ಅದರಲ್ಲಿ 2025ರ ವರ್ಷಾಂತ್ಯದೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನವೆಂಬರ್‌ ವೇಳೆಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!