ಹೊಸ ಬದುಕಿನ ಮೊದಲ ಹೆಜ್ಜೆಯಲ್ಲೇ ಮಾನವೀಯತೆಯ ಬೆಳಕು ಚೆಲ್ಲಿದ ನವಜೋಡಿ

ಮೈಸೂರು: ಮೈಸೂರಿನಲ್ಲಿ ನವ ಜೋಡಿಗಳಿಂದ ನೇತ್ರದಾನ ಮೈಸೂರಿನ ನಿವಾಸಿ ಚಂದನ್ ಮತ್ತು ಲಾವಣ್ಯ ಇಂದು ಸರಳ ಮದುವೆ ಮೂಲಕ ಹೊಸ ಬದುಕಿನ ಹೆಜ್ಜೆ ಇಟ್ಟಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ಈ ಜೋಡಿ, ಇಂದಿನ ದಿನ ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಚಾಲನೆ ನೀಡಿದರು.
ಮದುವೆ ಎಂದರೆ ಕೇವಲ ಸಂಬಂಧಿಕ–ಸ್ನೇಹಿತರಿಗೆ ಔತಣಕೂಟ, ಆನಂದ–ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ, ಈ ಜೋಡಿ ನಿಜಕ್ಕೂ ಮಾದರಿಯಾಗಿದ್ದಾರೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗ್ರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ ಸಮ್ಮುಖದಲ್ಲಿ ದೇವಸ್ಥಾನದಲ್ಲೇ ನೇತ್ರದಾನ ಪ್ರಕ್ರಿಯೆಗೆ ಸಹಿ ಹಾಕಿದರು.ಮುಂದಿನ ಪೀಳಿಗೆಯ ನಾಲ್ಕು ಮಂದಿಗೆ, ನಾಲ್ಕು ಕುಟುಂಬಗಳಿಗೆ ಬೆಳಕಾಗುವ ಹಾದಿಯನ್ನು ಬರೆದು ಇವರು ಸಮಾಜದ ಮುಂದೆ ವಿಶಿಷ್ಟ ಮಾದರಿಯಾಗಿದ್ದಾರೆ.

ನವವರ ಚಂದನ್ ಅವರು:“ಇಂದಿನ ಯುವಕರಿಗೆ ಮದುವೆ ಎಂದರೆ ಹಳದಿ, ಸಂಗೀತ್, ಪ್ರೀ–ವೆಡಿಂಗ್ ಫೋಟೋ ಶೂಟ್ ಅಷ್ಟೆ. ನಾವು ಸಹ ಹಾಗೆ ಅಂದುಕೊಂಡಿದ್ದೆವು. ಆದರೆ ಮದುವೆಯ ಕ್ಷಣ ಸಮಾಜಕ್ಕೆ ಕೊಡುಗೆಯಾಗಿ ನೆನಪಾಗಲಿ ಎಂದುಕೊಂಡಾಗ ಡಾ. ರಾಜ್ ಕುಮಾರ್ ಅವರ ದಾರಿಯನ್ನು ಅನುಸರಿಸಿ, ‘ನೇತ್ರದಾನ ಮಹಾದಾನ’ ಎಂಬ ಮಾತಿನಂತೆ ನಾವು ಈ ಕಾರ್ಯಕ್ಕೆ ಮುಂದಾದೆವು. ಇದರಿಂದ ಮನಸ್ಸಿಗೆ ನಿಜವಾದ ಆತ್ಮತೃಪ್ತಿ ದೊರಕಿದೆ.”
ನಂತರ ಮಾತನಾಡಿದ ವಧು ಲಾವಣ್ಯ ಅವರು: “ಹತ್ತು ವರ್ಷಗಳ ಪ್ರೀತಿಯನ್ನು ಕುಟುಂಬದವರ ಒಪ್ಪಿಗೆಯೊಂದಿಗೆ ಇಂದು ಮದುವೆಯಾಗಿ ಸಾರ್ಥಕತೆ ಕಂಡಿದ್ದೇವೆ. ಈ ಕ್ಷಣವನ್ನು ಇನ್ನಷ್ಟು ಅರ್ಥಪೂರ್ಣವಾಗಿಸಲು ನೇತ್ರದಾನಕ್ಕೆ ಸಹಿ ಹಾಕಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಂದಿ ಇಂತಹ ಕಾರ್ಯಕ್ಕೆ ಮುಂದೆ ಬರಲಿ ಎಂದು ಹಾರೈಸುತ್ತೇನೆ.”ತಮ್ಮ ಭಾವನೆ ಹಂಚಿಕೊಂಡುರು.

ಒಟ್ಟಾರೆಯಾಗಿ ಮದುವೆಯ ಸಂಭ್ರಮವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣಗೊಳಿಸಿದ ನವ ದಂಪತಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು