ವಿಷ ಕೊಡಿ ಎಂದ ದರ್ಶನ್​ ಬಿಗ್ ರಿಲೀಫ್ ನೀಡಿದ ಕೋರ್ಟ್

ನಟ ದರ್ಶನ್​​ಗೆ ಬೆಂಗಳೂರು ಸೆಷನ್ಸ್ ಕೋರ್ಟ ಬಿಗ್ ರಿಲೀಫ್ ನೀಡಿದೆ. ದರ್ಶನ್​ರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಅಲ್ಲದೆ, ಅಲ್ಲದೆ, ದರ್ಶನ್​ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಇದರೊಂದಿಗೆ ದರ್ಶನ್​ಗೆ ಬಿಗ್ ರಿಲೀಫ್ ದೊರೆತಂತಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ (Darshan) ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಕೋರ್ಟ್ ನಿರಾಕರಿಸಿದೆ. ಅಲ್ಲದೆ, ಅವರ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಮ್ಮತಿಸಿದ್ದು, ಬಿಗ್ ರಿಲೀಫ್ ದೊರೆತಂತಾಗಿದೆ. A2 ದರ್ಶನ್ ಅನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲು ಸಕಾರಣಗಳಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ಕೊಲೆ ಆರೋಪಿ ದರ್ಶನ್​ಗೆ ಜೈಲಿನ ಆವರಣದಲ್ಲಿ ಓಡಾಡಲು ಅನುಮತಿ ಕೊಟ್ಟಿದೆ.
ದರ್ಶನ್ ಮನವಿಗೆ ಸ್ಪಂದಿಸಿದ ಕೋರ್ಟ್ ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ದರ್ಶನ್ ಮಾಡಿದ್ದ ಮನವಿಯನ್ನು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಪುರಸ್ಕರಿಸಿದೆ. ದರ್ಶನ್​ಗೆ ಹೆಚ್ಚುವರಿ ಹಾಸಿಗೆ ಮತ್ತು ದಿಂಬು ನೀಡಲು ಅನುಮತಿ ನೀಡಿದೆ. ಆದರೆ, ಜೈಲಿನ ಕೈಪಿಡಿ ಅನುಸರಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಜೈಲು ನಿಯಮ ಉಲ್ಲಂಘಿಸಿದರೆ ಜೈಲು ಐಜಿಯಿಂದ ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ್ದೇ ಆದಲ್ಲಿ ಬೇರೆ ಜೈಲಿಗೆ ಸ್ಥಳಾಂತರಿಸಲು ಐಜಿ ಕ್ರಮ ಕೈಗೊಳ್ಳಬಹುದು ಎಂದೂ ಆದೇಶದಲ್ಲಿ ನ್ಯಾಯಾಲಯ ತಿಳಿಸಿದೆ.

ವಿಷ ಕೊಡಿ ಎಂದಿದ್ದ ದರ್ಶನ್: ತೀರ್ಪಿಗೂ ಮುನ್ನ ವಿಚಾರಣೆ ವೇಳೆ ಜಡ್ಜ್ ಬಳಿ ಮನವಿ ಮಾಡಿದ್ದ ದರ್ಶನ್, ‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ, ನನಗೆ ಮಾತ್ರ ವಿಷ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ಮನವಿ ಮಾಡಿದ್ದರು. ಆಗ ಜಡ್ಜ್ ‘ನೀವು ಹಾಗೆಲ್ಲಾ ಹೇಳುವಂತಿಲ್ಲ’ ಎಂದಿದ್ದರು.

ವಿಷ ಕೊಡಿ ಎಂದಿದ್ದೇಕೆ ದರ್ಶನ್? ಸುಪ್ರೀಂ ಕೋರ್ಟ್​ ಖಡಕ್ ಸೂಚನೆಯ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲಿನಂತೆ ವಿಐಪಿ ಸೌಲಭ್ಯ ಸಿಗುತ್ತಿರಲಿಲ್ಲ. ರಾಜಾತಿಥ್ಯ ಸಿಗುತ್ತಿರಲಿಲ್ಲ. ಜೈಲಿನಲ್ಲಿ ಓರ್ವ ಸಾಮಾನ್ಯ ಖೈದಿಯಂತೆ ಪರಿಗಣಿಸಲಾಗುತ್ತಿತ್ತು. ಜೈಲಿನ ಖೈದಿಗಳ ಕೊಠಡಿಯಿಂದಲೂ ಹೊರಗೆ ಬರಲಾಗುತ್ತಿರಲಿಲ್ಲ. ಇದರಿಂದ ನರಕಯಾತನೆ ಅನುಭವಿಸುತ್ತಿರುವ ದರ್ಶನ್ ವಿಷ ಕೊಡಿ ಎಂದು ಮನವಿ ಮಾಡಿದ್ದರು. ಇದೀಗ ಕೋರ್ಟ್ ಸಹ ದರ್ಶನ್ ಬಗ್ಗೆ ತುಸು ಕನಿಕರ ತೋರಿದ್ದು, ಹಾಸಿಗೆ ದಿಂಬು ಹಾಗೂ ಜೈಲಿನಲ್ಲಿ ಓಡಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ದರ್ಶನ್​ಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!