ಮದ್ದೂರಿನಲ್ಲಿ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ

ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಶಾಂತಿ ಸಭೆ ನಡೆಸಿದ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ ಜಪಿಸಿದ್ದಾರೆ.ಸಕ್ಕರೆನಾಡಿನ ಮದ್ದೂರು ಪಟ್ಟಣ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ ಇವತ್ತು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಯಿದ್ದು, ಬಿಜೆಪಿ ರಾಜ್ಯ ನಾಯಕರು ಭಾಗಿ ಆಗ್ತಿದ್ದು, ರಾಜಕೀಯ ಕಿಚ್ಚು ಧಗಧಗಿಸುವ ಸಾಧ್ಯತೆ ಇದೆ. ಇನ್ನು, ಶಾಂತಿ ಸಭೆ ನಡೆಸಿರುವ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಶಾಂತಿ ಮಂತ್ರ ಜಪಿಸಿದ್ದಾರೆ. ಮದ್ದೂರು ಗಲಾಟೆ ವಿಪಕ್ಷಗಳಿಗೆ ಅಸ್ತ್ರ ಸಿಕ್ಕಿದ್ದು ಸರ್ಕಾರದ ವಿರುದ್ಧ ರಾಜಕೀಯ ಸಮರಾಸ್ತ್ರ ಪ್ರಯೋಗಿಸ್ತಿದೆ. ನಿನ್ನೆ ಮದ್ದೂರಿನಲ್ಲಿ ಶಾಂತಿ ಸಭೆ ನಡೆಸಿದ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಘಟನೆ ನಡೆದ ತಕ್ಷಣವೇ ಸರ್ಕಾರ ಕ್ರಮ ಕೈಗೊಂಡಿದೆ ತಪ್ಪಿತಸ್ಥರು ಯಾರೇ ಇದ್ರೂ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದಿದ್ದಾರೆ.

 

ಇವತ್ತು 28 ಗಣಪತಿಗಳ ವಿಸರ್ಜನಾ ಕಾರ್ಯಕ್ರಮ ಈ ಮಧ್ಯೆ ಇವತ್ತು ಮದ್ದೂರು ಪಟ್ಟಣದಲ್ಲಿ 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಕಾರ್ಯಕ್ರಮ ಇದ್ದು, 20 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ರಾಜ್ಯ ನಾಯಕರು ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸ್ತಿದ್ದಾರೆ. ಹೀಗಾಗಿ ಬೂದಿಮುಚ್ಚಿದ ಕೆಂಡ ಮತ್ತೆ ಸ್ಫೋಟಿಸುವ ಆತಂಕ ಪೊಲೀಸರಿಗೆ ಕಾಡ್ತಿದೆ. ಗಣಪತಿ ವಿಸರ್ಜನೆ ವೇಳೆ ಶಾಂತಿ ಕಾಪಾಡುವಂತೆ ಸಚಿವ ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ , ಹಿಂದುಗಳ ಮೇಲೆ ಲಾಠಿ ಚಾರ್ಜ್ ಮೂಲಕ ಓಲೈಕೆ ರಾಜಕಾರಣ ಮಾಡ್ತಿದೆ ಅಂತ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಒಟ್ಟಾರೆ, ಶಾಂತಿಯಿಂದ ನಡೀಬೇಕಿದ್ದ ಗಣೇಶೋತ್ಸವ ಗಲಾಟೆ ಸ್ವರೂಪಕ್ಕೆ ತಿರುಗಿರೋದು ಒಳ್ಳೆಯ ಬೆಳವಣಿಗೆ ಅಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು