‘ಸು ಫ್ರಮ್ ಸೋ’ ಒಟಿಟಿಗೆ ಬಂದರೂ ಥಿಯೇಟರ್​ನಲ್ಲಿ ನಿಂತಿಲ್ಲ ಕಲೆಕ್ಷನ್

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಾಮ್ ಸೋ’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ನಂತರವೂ ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಂಡಿತು. 46 ದಿನಗಳ ಯಶಸ್ವಿ ಪ್ರದರ್ಶನದ ನಂತರ ಒಟಿಟಿಗೆ ಬಿಡುಗಡೆಯಾದರೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಲೇ ಇದೆ. ಇದು ಸಿನಿಮಾದ ಜನಪ್ರಿಯತೆ ಮತ್ತು ಪ್ರೇಕ್ಷಕರ ಆಸಕ್ತಿಯನ್ನು ತೋರಿಸುತ್ತದೆ.

ಕೆಲವು ಸಿನಿಮಾಗಳು ಒಟಿಟಿಗೆ ಬರೋ ಮೊದಲೇ ಥಿಯೇಟರ್​ನಿಂದ ಕಾಲ್ಕಿತ್ತಿರುತ್ತವೆ. ಕಲೆಕ್ಷನ್ ಕೂಡ ಸಂಪೂರ್ಣವಾಗಿ ನಿಂತು ಹೋಗಿರುತ್ತದೆ. ಆದರೆ, ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ (Su From So) ಇದಕ್ಕೆ ಭಿನ್ನ. ಈ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದಾಗ್ಯೂ ಚಿತ್ರ ಥಿಯೇಟರ್​​ನಲ್ಲಿ ಕಲೆಕ್ಷನ್ ಮಾಡೋದನ್ನು ಮುಂದುವರಿಸಿದೆ. ಇದು ಅನೇಕರಿಗೆ ಅಚ್ಚರಿ ತಂದಿದೆ. ಇದು ಸಿನಿಮಾದ ಜನಪ್ರಿಯತೆಯನ್ನು ಸೂಚಿಸುತ್ತದೆ. ‘ಸು ಫ್ರಮ್ ಸೋ’ ಸಿನಿಮಾ ಜುಲೈ 25ರಂದು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಸುಮಾರು 46 ದಿನಗಳ ಕಾಲ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡ ನಂತರದಲ್ಲಿ ಸಿನಿಮಾ ಒಟಿಟಿಗೆ ಕಾಲಿಟ್ಟಿದೆ. ಈ ಸಿನಿಮಾ ಒಂದೇ ದಿನ 6 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಉದಾಹರಣೆ ಇದೆ. ಈಗ ಚಿತ್ರ ಸೆಪ್ಟೆಂಬರ್ 9ರಂದು ಒಟಿಟಿಗೆ ಕಾಲಿಟ್ಟಿದೆ. ಆದರೆ, ಸಿನಿಮಾದ ಕಲೆಕ್ಷನ್ ಮಾತ್ರ ತಗ್ಗಿಲ್ಲ.

 

‘ಸು ಫ್ರಮ್ ಸೋ’ ಸಿನಿಮಾ ಸೆಪ್ಟೆಂಬರ್ 9ರಂದು 5 ಲಕ್ಷ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಒಟಿಟಿಗೆ ಬಂದ ಹೊರತಾಗಿಯೂ ಥಿಯೇಟರ್​ನಲ್ಲಿ ಸಾಕಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಅನೇಕರಿಗೆ ಸಿನಿಮಾ ಒಟಿಟಿಗೆ ಕಾಲಿಟ್ಟ ವಿಚಾರ ತಿಳಿದಿಲ್ಲದೇ ಇರಬಹುದು. ಹೀಗಾಗಿ, ದುಡ್ಡು ಕೊಟ್ಟು ಥಿಯೇಟರ್​ನಲ್ಲಿ ಸಿನಿಮಾ ವೀಕ್ಷಿಸುತ್ತಿದ್ದಾರೆ. ‘ಸು ಫ್ರಮ್ ಸೋ’ ಸಿನಿಮಾಗೆ ರಾಜ್​ ಬಿ ಶೆಟ್ಟಿ ನಿರ್ಮಾಣ ಇದೆ. ಈ ಸಿನಿಮಾದಿಂದ ಅವರು ದೊಡ್ಡ ಮಟ್ಟದಲ್ಲಿ ಲಾಭ ಕಂಡಿದ್ದಾರೆ. ಈ ಚಿತ್ರ ವಿಶ್ವ ಮಟ್ಟದಲ್ಲಿ 122.34 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದು ಸಿನಿಮಾದ ಅಂತಿಮ ಕಲೆಕ್ಷನ್ ಎಂದೇ ಹೇಳಬಹುದು. ಈ ಚಿತ್ರದ ಭಾರತದಲ್ಲಿ 107.34 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ ವಿದೇಶದಿಂದ 15 ಕೋಟಿ ರೂಪಾಯಿ ಹರಿದು ಬಂದಿದೆ. ‘ಸು ಫ್ರಮ್ ಸೋ’ ಚಿತ್ರವನ್ನು ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡುವುದರ ಜೊತೆಗೆ ನಟನೆಯನ್ನೂ ಮಾಡಿದ್ದಾರೆ. ಈ ಸಿನಿಮಾಗೆ ಜೆಪಿ ತುಮಿನಾಡ್ ನಿರ್ದೇಶನ ಇದೆ. ಈ ಚಿತ್ರದಲ್ಲಿ ಹಲವು ಸ್ಥಳೀಯ ಕಲಾವಿದರು ನಟಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!