15 ಲಕ್ಷಕ್ಕೆ ಸುಪಾರಿ ಕೊಟ್ಟು ಗರ್ಭಿಣಿ ಪತ್ನಿಯನ್ನೇ ಮುಗಿಸಿದ; ಸೀನಿಯರ್ ಮೇಲೆ ಮೋಹ.. ಪತ್ನಿಗೆ ಚಟ್ಟ!

ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ.

ಬೆಳಗಾವಿ: ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆರು ತಿಂಗಳ ಗರ್ಭಿಣಿಯನ್ನಾಗಿ ಮಾಡಿ ಇದೀಗ ಇನ್ನೊಬ್ಬಳ ಮೇಲಿನ ವ್ಯಾಮೋಹಕ್ಕೆ ಬಿದ್ದು 15 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಹೆಂಡತಿಯನ್ನೇ ಮುಗಿಸಿದ ಘಟನೆ ಕಾಗವಾಡ ತಾಲೂಕಿನ ಬಿ.ಕೆ.ಉಗಾರದಲ್ಲಿ ನಡೆದಿದೆ. ಚೈತಾಲಿ ಗಂಡನ ಸುಪಾರಿಗೆ ಬಲಿಯಾದ ಮಹಿಳೆ. ಪ್ರದೀಪ್ ಪ್ರಮುಖ ಆರೋಪಿ. ಪ್ರಕರಣ ಸಂಬಂಧ ಪ್ರದೀಪ್ ಸೇರಿ, ಸಾಥ್ ನೀಡಿದ್ದ ಇನ್ನಿಬ್ಬರು ಆರೋಪಿಗಳನ್ನು ಕಾಗವಾಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ. ಪತಿ ಪ್ರದೀಪ್ ಹಾಗೂ ಮೃತ ಚೈತಾಲಿ ಉಗಾರ್ ಬಿ.ಕೆ.ಗ್ರಾಮದವರು. ಒಂದೇ ಗ್ರಾಮದವರಾದ ಇವರು ಪ್ರೀತಿಸಿ ಎರಡು ವರ್ಷಗಳ ಹಿಂದಷ್ಟೇ ಮದುವೆ ಆಗಿದ್ದರು. ಸಾಕ್ಷಿಯಾಗಿ ಆರು ತಿಂಗಳ ಗರ್ಭಿಣಿ ಕೂಡ ಆಗಿದ್ದಳು ಎಂದು ತಿಳಿದುಬಂದಿದೆ.

ಆಗಿದ್ದೇನು..? ಕಾನೂನು ಪದವಿ ಪಡೆದಿದ್ದ ಪ್ರದೀಪ್ ಕಿರಣಗಿ, ಕಾಗವಾಡ ಕೋರ್ಟ್‌ನಲ್ಲಿ ವಕೀಲ ವೃತ್ತಿಯಲ್ಲಿದ್ದ. ಪ್ರೇಮ-ವಿವಾಹದ ಬಳಿಕವೂ ಕಾಲೇಜಿನ ಸೀನಿಯರ್ ಜೊತೆಗೆ ಪ್ರದೀಪ್​​ಗೆ ಲವ್ ಶುರುವಾಗಿತ್ತಂತೆ. ಸೀನಿಯರ್ ಲೇಡಿಯನ್ನ ಬುಟ್ಟಿಗೆ ಹಾಕಿಕೊಳ್ಳಲು ತನಗೆ ಮದುವೆಯೇ ಆಗಿಲ್ಲ ಎಂದು ನಾಟಕವಾಡಿದ್ದಾನೆ ಎನ್ನಲಾಗಿದೆ. ಜೂನಿಯರ್ ಪ್ರದೀಪ್ ಮಾತು ನಂಬಿದ್ದ ಸೀನಿಯರ್​, ಪ್ರೀತಿಯ ಬಲೆಗೆ ಬಿದ್ದಿದ್ದಳು. ಯಾವಾಗ ಸೀನಿಯರ್ ಮೇಲೆ ಮೋಹ ಹೆಚ್ಚಾಯಿತೋ ಆಗಲೇ ಪತ್ನಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಾನೆ ಅನ್ನೋದು ತನಿಖೆಯಿಂದ ತಿಳಿದುಬಂದಿದೆ.

ಮಾಡಿದ್ದೇನು..? ಪ್ರದೀಪ್ ತನ್ನ ಹೆಂಡತಿಯನ್ನ ಮುಗಿಸಲು ಸ್ನೇಹಿತನ ಸಹಾಯ ಪಡೆದಿದ್ದಾನೆ. ಸ್ನೇಹಿತ ರಾಜೇಂದ್ರ ಜೊತೆ ಮಾತುಕತೆ ನಡೆಸಿ 15 ಲಕ್ಷ ರೂಪಾಯಿಗೆ ಸೂಪಾರಿ ಕೊಟ್ಟಿದ್ದ ಎನ್ನಲಾಗಿದೆ. ಅಂತೆಯೇ ಚೈತಾಲಿಯನ್ನ ಮುಗಿಸಲು ಎರಡು ಬಾರಿ ಪ್ರಯತ್ನಿಸಿದ್ದಾರೆ. ಆದರೆ ಅದು ಫೇಲ್ ಆಗಿತ್ತು. ಮೂರನೇ ಬಾರಿಗೆ ಯಶಸ್ವಿಯಾಗಿದ್ದಾರೆ. ಭಾರವಾದ ವಸ್ತುವಿನಿಂದ ತಲೆಗೆ ಹೊಡೆದು ಆರು ತಿಂಗಳ ಗರ್ಭಿಣಿಯ ಜೀವ ತೆಗೆದಿದ್ದರು.

ಮುಂದೆ ಏನಾಯ್ತು..? ಆರೋಪಿಗಳಿಬ್ಬರು ಹಾಗೂ ಪ್ರದೀಪ್ ಸೇರಿ ಪ್ಲಾನ್ ಮಾಡಿದ್ದಾರೆ. ಪ್ಲಾನ್ ಪ್ರಕಾರವೇ ಆಕೆಯನ್ನು ಮುಗಿಸಿ, ಮೃತದೇಹವನ್ನು ಕೆಲ ಹೊತ್ತು ರಸ್ತೆಗೆ ತಂದು ಕಾಲ ಕಳೆದಿದ್ದಾರೆ. ಅದಾದ ನಂತರ ಆರೋಪಿ ಪ್ರದೀಪ್ ಪೊಲೀಸರಿಗೆ ಖುದ್ದು ಕರೆ ಮಾಡಿದ್ದಾನೆ. ಸೆಪ್ಟೆಂಬರ್ 7 ರಂದು ರಾತ್ರಿ 9.30ಕ್ಕೆ ಕರೆ ಮಾಡಿದ ಆತ, ಸರ್​ ರಸ್ತೆಯಲ್ಲಿ ಹೋಗುವಾಗ ಅಪಘಾತ ಆಗಿದೆ. ನನ್ನದೇ ಕಾರಿನಲ್ಲಿ ಹೋಗುವಾಗ ಅಪಘಾತ ಆಗಿದೆ. ಹೆಂಡತಿಗೆ ಗಂಭೀರ ಪೆಟ್ಟು ಬಿದ್ದಿದೆ. ನನಗೂ ಗಾಯವಾಗಿದೆ. ಪತ್ನಿ ಚೈತಾಲಿಯನ್ನು ಕಾಗವಾಡ ತಾಲೂಕು ಆಸ್ಪತ್ರೆಗೆ ದಾಖಲಿಸುತ್ತಿರೋದಾಗಿ ಹೇಳಿದ್ದಾನೆ. ವಿಷಯ ತಿಳಿದ ಪೊಲೀಸರು ತಕ್ಷಣವೇ ಕಾಗವಾಡ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಸಿಕ್ಕಿಬಿದ್ದಿದ್ದು ಹೇಗೆ..? ಪೊಲೀಸರು ಆಸ್ಪತ್ರೆಗೆ ಹೋದಾಗ ಚೈತ್ರಾಲಿ ಅನ್ನೋರು ಯಾರೂ ಇರಲಿಲ್ಲ. ಕೂಡಲೇ ಪೊಲೀಸರು ಪ್ರದೀಪ್​ಗೆ ಕರೆ ಮಾಡಿದ್ದಾರೆ. ಆಗ ಕಾಗವಾಡ ಬದಲು ಮಹಾರಾಷ್ಟ್ರದ ಮೀರಜ್‌‌ ಆಸ್ಪತ್ರೆಗೆ ಚೈತ್ರಾಣಿ ‌ಕರೆತಂದಿರುವುದಾಗಿ ಪೊಲೀಸರಿಗೆ ಪ್ರದೀಪ್ ಮಾಹಿತಿ ನೀಡಿದ್ದಾನೆ. ತಕ್ಷಣವೇ ‌ಪ್ರದೀಪ್ ನಿವಾಸಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿದ್ದಾರೆ. ಆಗ ಪ್ರದೀಪ್ ನಿವಾಸದ ಎದುರು ಕಾರು ನಿಂತಿತ್ತು. ಇದರಿಂದ ಪ್ರದೀಪ್ ನಡೆ ಮೇಲೆ ಪೊಲೀಸರಿಗೆ ಅನುಮಾನ ಬಂದಿದೆ. ಇದರ ನಡುವೆ ಪ್ರದೀಪ್ ಮೀರಜ್ ಪೊಲೀಸರನ್ನ ಭೇಟಿಯಾಗಿ, ಪತ್ನಿ ಅಪಘಾತದಿಂದ ಮೃತರಾಗಿದ್ದು ದೂರು ದಾಖಲಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾನೆ. ಆಗ ಮೀರಜ್ ಪೊಲೀಸರು ‌ಕಾಗವಾಡ ಠಾಣೆಯ ‌ಪೊಲೀಸರನ್ನ ಸಂಪರ್ಕಿಸುತ್ತಾರೆ. ಆಗ ನಾವು ಮೀರಜ್‌ಗೆ ಬರ್ತಿದ್ದೇವೆ, ಯಾವುದೇ ‌ದೂರು ದಾಖಲಿಸಿಕೊಳ್ಳದಂತೆ ಮನವಿ ಮಾಡುತ್ತಾರೆ.

ಮೀರಜ್‌ಗೆ ಬರುತ್ತಿದ್ದಂತೆಯೇ ಪೊಲೀಸರು ಪ್ರದೀಪ್​ನ ವಿಚಾರಣೆಗೆ ಒಳಪಡಿಸುತ್ತಾರೆ. ಆಗ ಪ್ರದೀಪ್​​ಗೆ ಅಪಘಾತದಿಂದ ಯಾವುದೇ ಗಾಯ ಆಗದಿರೋದು ಗೊತ್ತಾಗಿದೆ. ಚೈತಾಲಿ ‌ಮೃತದೇಹ ನೋಡಿದ ಪೊಲೀಸರು ಇದು ಅಪಘಾತವಲ್ಲ, ಕೊ*ಲೆ ಎಂಬುದನ್ನ ಮೇಲ್ನೋಟಕ್ಕೆ ಪತ್ತೆಹಚ್ಚಿಕೊಳ್ತಾರೆ. ತಕ್ಷಣವೇ ಪ್ರದೀಪ್​ನನ್ನ ‌ತೀವ್ರ ವಿಚಾರಣೆ ಮಾಡಿದಾಗ ಕೊ*ಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಾತ್ರವಲ್ಲ, ಸ್ಥಳ ಮಹಜರು ವೇಳೆ ಪ್ರಕರಣಕ್ಕೆ ಸಾಥ್ ನೀಡಿದವರ ಹೆಸರನ್ನೂ ಹೇಳಿದ್ದಾನೆ. ಪ್ರಕರಣದಲ್ಲಿ ಐವರು ಆರೋಪಿಗಳು ಬಾಗಿಯಾಗಿರುವ ಶಂಕೆಯಿದ್ದ, ಮೂವರ ಬಂಧನವಾಗಿದೆ. ಮತ್ತಿಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು