ಒಟ್ಟೊಟ್ಟಿಗೆ ನೆರವೇರಿತು ಹಿಂದೂ ಮತ್ತು ಮುಸ್ಲಿಮರ ಸಾಮೂಹಿಕ ವಿವಾಹ; ಗದಗದಲ್ಲಿ ಕೋಮು ಸೌಹಾರ್ದತೆ ಸಂದೇಶ

ಗದಗದಲ್ಲಿ ನಡೆದ ಅಪರೂಪದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸದಲ್ಲಿ ಒಟ್ಟು 36 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿವೆ. ಬೆಟಗೇರಿ ಅಂಜುಮನ್ ಕಮಿಟಿಯಿಂದ ಆಯೋಜಿಸಲ್ಪಟ್ಟ ಈ ವಿಶೇಷ ಕಾರ್ಯಕ್ರಮ ರಾಜ್ಯಾದ್ಯಂತ ಕೋಮು ಸೌಹಾರ್ದತೆಯ ಸಂದೇಶ ಸಾರಿದೆ. ಪುಟ್ಟರಾಜ್ ಗವಾಯಿಗಳ ಅನುಗ್ರಹದಲ್ಲಿ ನಡೆದ ಈ ಮದುವೆಯು ಬಡವರಿಗೆ ಆರ್ಥಿಕ ಹೊರೆ ತಪ್ಪಿಸುವ ಉದ್ದೇಶ ಹೊಂದಿತ್ತು.
ನಾಡಿನೆಲ್ಲೆಡೆ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ಜಾತಿ ಜಾತಿಗಳ ಕಲಹ ಶುರುವಾಗಿದೆ. ಆದರೆ ಇತ್ತ ನಡೆದಾಡುವ ದೇವರ ನಾಡಿನಲ್ಲಿ ಹಿಂದೂ-ಮುಸ್ಲಿಂ ಭಾಯಿ ಭಾಯಿ ಬದುಕು ಸಾಗಿಸುತ್ತಿದ್ದಾರೆ. ಲಿಂಗೈಕ್ಯ ಪಂಡಿತ ಪುಟ್ಟರಾಜ್ ಗವಾಯಿಗಳ ನಡೆದಾಡಿದ ನೆಲದಲ್ಲಿ ಹಿಂದೂ-ಮುಸ್ಲಿಂ ಬಾಂಧವರ ಸಾಮೂಹಿಕ ವಿವಾವ ಮಹೋತ್ಸವ ಅದ್ಧೂರಿಯಾಗಿ ನಡೆದದ್ದು, 36 ನವದಂಪತಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಿಂಗೈಕ್ಯ ಪಂಡಿತ ಪುಟ್ಟರಾಜ್ ಗವಾಯಿಗಳು ನಡೆದಾಡಿದ ನೆಲ, ಸಂಗೀತ ಬೀಡು ಗದಗ ನಗರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದೆ. ಅಂಜುಮನ್ ಶಾಲೆ‌ ಆವರಣದಲ್ಲಿ ಹಿಂದೂ, ಮುಸ್ಲಿಂ ಜೋಡಿಗಳ ಸಾಮೂಹಿಕ ವಿವಾಹ ಮಹೋತ್ಸವ ಬಹಳ ಅದ್ಧೂರಿಯಾಗಿ ನಡೆದಿದೆ. ಬೆಟಗೇರಿ‌ ಅಂಜುಮನ್ ಕಮಿಟಿ ವತಿಯಿಂದ ಸಾಮೂಹಿಕ ವಿವಾಹ ಮಹೋತ್ಸವ ಆಯೋಜನೆ ಮಾಡಲಾಗಿತ್ತು. ಈ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ 36 ಜೋಡಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿಟ್ಟಿವೆ. 26 ಹಿಂದೂ‌ ಜೋಡಿಗಳು, 10 ಮುಸ್ಲಿಂ ಜೋಡಿಗಳು ಹಸೆಮಣೆ ಏರಿದ್ದಾರೆ. ಆ ಮೂಲಕ ನಾಡಿಗೆ ಕೋಮು ಸೌಹಾರ್ದತೆ ಸಂದೇಶ ಸಾರಿದ್ದಾರೆ.

ಈ ವೇಳೆ ಮಾತನಾಡಿದ ಪುಟ್ಟರಾಜ್ ಗವಾಯಿಗಳ ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು, ಇಂದಿನ ದುಬಾರಿ ಜಗತ್ತಿನಲ್ಲಿ ಮದುವೆಗೆ ಲಕ್ಷಾಂತರ ರೂ ಖರ್ಚು ಮಾಡಲಾಗುತ್ತಿದೆ. ಬಡವರಿಗೆ ಮದುವೆ ಮಾಡುವುದಂದರೆ ಕಷ್ಟದ ಕೆಲಸ. ಆದರೆ ಬೆಟಗೇರಿ ಅಂಜುಮನ್ ಕಮಿಟಿ ಸರ್ವಧರ್ಮಗಳ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಂಡಿದ್ದು ಖುಷಿಯ ವಿಚಾರ ಎಂದಿದ್ದಾರೆ.
ಬೆಟಗೇರಿ ಅಂಜುಮನ್ ಕಮಿಟಿಯಿಂದ ನವ ಜೋಡಿಗಳಿಗೆ ತಾಳಿ, ಕಾಲುಂಗರ, ಬಟ್ಟೆಗಳು ವಿತರಣೆ ಮಾಡಲಾಗಿದೆ. ಕಮಿಟಿ ಅಧ್ಯಕ್ಷ ಪೀರಸಾಬ್ ಕೌತಾಳ ದಂಪತಿ ನವಜೋಡಿಗಳಿಗೆ ತಾಳಿ, ಕಾಲುಂಗರ ನೀಡಿದರು. ಮದುವೆಗೆ ಅಗಮಿಸಿದ 6-7 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. 10 ಮುಸ್ಲಿಂ ಜೋಡಿಗಳಿಗೆ ಅವರ ಸಂಪ್ರದಾಯದಂತೆ ಮತ್ತು 26 ಹಿಂದೂ ಜೋಡಿಗಳಿಗೆ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಲಾಗಿದೆ. ಪುಟ್ಟರಾಜ್ ಗವಾಯಿಗಳ‌ ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹಾಗೂ ಮುಸ್ಲಿಂ ಧರ್ಮಗುರುಗಳ ಸಾನಿಧ್ಯದಲ್ಲಿ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು.
ಧರ್ಮಗಳ ಮಧ್ಯೆ ನಡೆಯುವ ಗಲಾಟೆ, ಗದ್ದಲಗಳ ಮಧ್ಯೆ ಪುಟ್ಟರಾಜ್ ಗವಾಯಿಗಳು ನಡೆದಾಡಿದ ನೆಲ ಗದಗ ನಗರದಲ್ಲಿ ನಡೆದ ಹಿಂದೂ-ಮುಸ್ಲಿಂ ಸಾಮೂಹಿಕ ವಿವಾಹ ಮಹೋತ್ಸವ ದೇಶದಲ್ಲೆಡೆ ಕೋಮು ಸೌಹಾರ್ದತೆ ಸಂದೇಶ ಸಾರಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!