ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ಪ್ರಶಸ್ತಿ: ಅಭಿಮಾನಿಗಳಿಗೆ ಸಂಭ್ರಮ

ವಿಷ್ಣುವರ್ಧನ್ ಅಭಿಮಾನಿಗಳು ಹಾಗೂ ಕುಟುಂಬದವರ ಬಹುಕಾಲದ ಬೇಡಿಕೆ ಈಡೇರಿದೆ. ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ವಿಷ್ಣುವರ್ಧನ್ ಅವರಿಗೆ ಗೌರವ ಸಲ್ಲಿಸಲಾಗಿದೆ. ಬಿ. ಸರೋಜಾದೇವಿ ಅವರಿಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ನಟ ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬುದು ಅಭಿಮಾನಿಗಳು ಹಾಗೂ ಕುಟುಂಬದವರ ಒತ್ತಾಯ ಆಗಿತ್ತು. ಆ ಮನವಿಯನ್ನು ಸರ್ಕಾರ ಪುರಸ್ಕರಿಸಿದೆ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತವರಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಅಭಿನಂದನೆಗಳನ್ನು ತಿಳಿಸುತ್ತಿದ್ದಾರೆ. ಎಲ್ಲರೂ ಸಂಭ್ರಮಿಸುತ್ತಿದ್ದಾರೆ.

ವಿಷ್ಣುವರ್ಧನ್​ ಅಳಿಯ ಅನಿರುದ್ಧ್​ ಅವರು ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಅಪ್ಪಾಜಿಗೆ ಕರ್ನಾಟಕ ರತ್ನ ಘೋಷಿಸಿದ್ದಕ್ಕೆ ಖುಷಿ ಆಯಿತು. ಅಪ್ಪಾಜಿಯವರು ಈ ಕರ್ನಾಟಕ ರತ್ನ ಪ್ರಶಸ್ತಿಗೆ ಅರ್ಹರು. ಅವರು ಯಾವಾಗಲೂ ನಮ್ಮೊಂದಿಗೆ ಇರುತ್ತಾರೆ. ಕನ್ನಡ ಚಿತ್ರರಂಗದ ಎಲ್ಲ ಕಲಾವಿದರಿಗೆ ನನ್ನ ಧನ್ಯವಾದಗಳು’ ಎಂದು ಅನಿರುದ್ಧ್ ಹೇಳಿದ್ದಾರೆ.
ಅಭಿಮಾನಿಗಳ ಪಾಲಿಗೆ ವಿಷ್ಣುವರ್ಧನ್ ಅವರು ಕೋಟಿಗೊಬ್ಬ. ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸಿಕ್ಕಿರುವುದು ನಿಜಕ್ಕೂ ಸಂತಸ ತಂದಿದೆ. ‘ಕೋಟಿಗೊಬ್ಬ’ ಸಿನಿಮಾದ ಹಾಡಿನ ದೃಶ್ಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ವಿಷ್ಣುವರ್ಧನ್ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಹಲವು ರೀತಿಯ ಮೀಮ್ಸ್ ವೈರಲ್ ಆಗುತ್ತಿವೆ.

200ಕ್ಕೂ ಅಧಿಕ ಸಿನಿಮಾಗಳಲ್ಲಿ ಡಾ. ವಿಷ್ಣುವರ್ಧನ್ ಅವರು ನಟಿಸಿದ್ದರು. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದರು. 1972ರಿಂದ 2009ರ ತನಕ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು. ನಾಗರಹಾವು, ಭೂತಯ್ಯನ ಮಗ ಅಯ್ಯು, ಬಂಧನ, ಮುತ್ತಿನ ಹಾರ, ಯಜಮಾನ, ಹಾಲುಂಡ ತವರು, ಜೀವನದಿ, ಕೋಟಿಗೊಬ್ಬ, ಸೂರ್ಯವಂಶ, ಸಿಂಹಾದ್ರಿಯ ಸಿಂಹ, ಆಪ್ತಮಿತ್ರ ಮುಂತಾದ ಸಿನಿಮಾಗಳನ್ನು ಅಭಿಮಾನಿಗಳು ಎಂದಿಗೂ ಮರೆಯಲು ಸಾಧ್ಯವಿಲ್ಲ.

ಈ ವರ್ಷ ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಒಂದು ಬೇಸರದ ಸುದ್ದಿ ಕೇಳಿಬಂತು. ಅಭಿಮಾನ್ ಸ್ಟುಡಿಯೋದಲ್ಲಿ ಇದ್ದ ವಿಷ್ಣು ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಯಿತು. ಆ ಘಟನೆಯನ್ನು ಅಭಿಮಾನಿಗಳು ಹಾಗೂ ಅನೇಕ ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ವಿಷ್ಣುವರ್ಧನ್ ಪುಣ್ಯಭೂಮಿಯನ್ನು ಮತ್ತೆ ಪಡೆಯಲು ಅಭಿಮಾನಿಗಳು ಸರ್ಕಾರಕ್ಕೆ ಒತ್ತಾಯ ಹೇರಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!