ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್ ಪ್ರಕರಣ: 2 ನೋಟಿಸ್​​ಗೂ ಉತ್ತರ ನೀಡದ ವಿಜಯಲಕ್ಷ್ಮಿ

ವಿಜಯಲಕ್ಷ್ಮಿ ದರ್ಶನ್ ಅವರಿಗೆ ಅಶ್ಲೀಲ, ಅಸಭ್ಯ ಕಮೆಂಟ್ ಬಂದಿದೆ ಎಂದು ದೂರು ನೀಡಲಾಗಿತ್ತು. ಆದರೆ ಅದಕ್ಕೆ ಸಂಬಂಧಿಸಿದ ನೋಟಿಸ್​​ಗಳಿಗೆ ವಿಜಯಲಕ್ಷ್ಮಿ ಅವರು ಯಾವುದೇ ಉತ್ತರ ನೀಡುತ್ತಿಲ್ಲ. ಈಗಾಗಲೇ ಎರಡು ನೋಟಿಸ್ ಕಳಿಸಿರುವ ಪೊಲೀಸರು ಮೂರನೇ ನೋಟಿಸ್ ಕಳಿಸಲು ಮುಂದಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಗೆ ಕೆಡಿಗೇಡಿಗಳು ಅಸಭ್ಯ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭ ಆಗಿತ್ತು. ಅಶ್ಲೀಲ ಕಮೆಂಟ್​​ಗಳಿಗೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು ಎರಡು ಬಾರಿ ನೋಟಿಸ್ ಕಳಿಸಿದ್ದಾರೆ. ಆದರೆ ಈ ಎರಡೂ ನೋಟಿಸ್​​ಗಳಿಗೆ ಅವರು ಉತ್ತರ ನೀಡಿಲ್ಲ! ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳಲು ಚೆನ್ನಮ್ಮನಕರೆ ಅಚ್ಚುಕಟ್ಟು ಪೊಲೀಸರಿಂದ ನೋಟಿಸ್ ಕಳಿಸಲಾಗಿದೆ. ಪೊಲೀಸರ ನೋಟಿಸ್​​ಗಳಿಗೆ ವಿಜಯಲಕ್ಷ್ಮಿ ಅವರು ಕ್ಯಾರೇ ಎನ್ನುತ್ತಿಲ್ಲ.
ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್​​ಗಳು ಬಂದಿವೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಹಾಗಾಗಿ ಮಹಿಳಾ ಆಯೋಗದಿಂದ ಸುಮೋಟೊ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಎರಡು ನೋಟಿಸ್​​ಗಳಿಗೂ ವಿಜಯಲಕ್ಷ್ಮಿ ಅವರಿಂದ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈಗ ಮೂರನೇ ನೋಟಿಸ್ ನೀಡಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಒಂದು ವೇಳೆ, ಮೂರನೇ ನೋಟಿಸ್​ಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದಾದರೆ ಪೊಲೀಸರು ಈ ಪ್ರಕರಣವನ್ನು ಮುಕ್ತಾಯ ಮಾಡಲಿದ್ದಾರೆ. ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತನಿಖೆಗೆ ಯಾವುದೇ ಮಾಹಿತಿ ಅಥವಾ ಲೀಡ್ ಸಿಗುತ್ತಿಲ್ಲ ಎಂದು ಸಿ ರಿಪೋರ್ಟ್ ಸಲ್ಲಿಕೆ ಮಾಡಲಾಗುತ್ತದೆ. ಈಗಲಾದರೂ ವಿಜಯಲಕ್ಷ್ಮಿ ಅವರು ನೋಟಿಸ್​​ಗೆ ಪ್ರತಿಕ್ರಿಯಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.

ಕಳೆದ ಎರಡು ವರ್ಷಗಳ ಹಿಂದಿನ ಕಾಮೆಂಟ್​​ಗೆ ಇತ್ತೀಚೆಗೆ ದೂರು ನೀಡಲಾಯಿತು. 6 ಟ್ವಿಟರ್ ಖಾತೆಗಳು ಕೂಡ ಎರಡು ವರ್ಷಗಳ ಹಿಂದೆಯೇ ಡಿಲೀಟ್ ಆಗಿವೆ. ಕಳೆದ ಎರಡು ವರ್ಷಗಳಿಂದ ಆರು ಟ್ಟಿಟರ್ ಅಕೌಂಟ್​​ಗಳಿಂದ ಯಾವುದೇ ಮೆಸೇಜ್​​ಗಳು ವಿನಿಮಯ ಆಗಿಲ್ಲ. ಈ ಎಲ್ಲ ಮಾಹಿತಿಯನ್ನು ಕಲೆ ಹಾಕಿರುವ ಸಿಕೆ ಅಚ್ಚುಕಟ್ಟು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ಅರೆಸ್ಟ್ ಆದಾಗಿನಿಂದ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೆಟ್ಟಿಗರು ಪರ-ವಿರೋಧ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಭರದಲ್ಲಿ ಕೆಲವರು ಅಸಭ್ಯ, ಅಶ್ಲೀಲ ಪದ ಬಳಕೆ ಮಾಡುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!