‘ಕೂಲಿ’ ಸಿನಿಮಾ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಟ ಆಮಿರ್ ಖಾನ್

ನಟ ಆಮಿರ್ ಖಾನ್ ಅವರು ತಮಿಳಿನ ‘ಕೂಲಿ’ ಸಿನಿಮಾದಲ್ಲಿ ಒಂದು ಅತಿಥಿ ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ಮಾಡಿದ್ದಕ್ಕೆ ಅವರು ಈಗ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಆ ಕುರಿತು ಪತ್ರಿಕೆಯೊಂದರಲ್ಲಿ ವರದಿ ಆದ ಬಳಿಕ ಆಮಿರ್ ಖಾನ್ ತಂಡದ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ.

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಹಲವು ಕಲಾವಿದರು ನಟಿಸಿದರು. ಉಪೇಂದ್ರ, ರಚಿತಾ ರಾಮ್, ಸೌಬಿನ್ ಶಾಹಿರ್, ಆಮಿರ್ ಖಾನ್ (Aamir Khan), ನಾಗಾರ್ಜುನ, ಶ್ರುತಿ ಹಾಸನ್, ಪೂಜಾ ಹೆಗ್ಡೆ ಮುಂತಾದವರು ಅಭಿನಯಿಸಿದರು. ಬಾಕ್ಸ್ ಆಫೀಸ್​​ನಲ್ಲಿ ಈ ಚಿತ್ರಕ್ಕೆ ನೂರಾರು ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಇತ್ತೀಚೆಗೆ ಒಂದು ಸುದ್ದಿ ಪ್ರಕಟ ಆಯಿತು. ಆಮಿರ್ ಖಾನ್ ಅವರು ‘ಕೂಲಿ’ (Coolie) ಸಿನಿಮಾದಲ್ಲಿ ನಟಿಸಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಯಿತು. ಆ ಬಗ್ಗೆ ಅವರ ತಂಡದವರಿಂದ ಪ್ರತಿಕ್ರಿಯೆ ಬಂದಿದೆ.

ಅಂದಹಾಗೆ, ಆಮಿರ್ ಖಾನ್ ಅವರು ‘ಕೂಲಿ’ ಸಿನಿಮಾದಲ್ಲಿ ಮಾಡಿದ್ದು ಅತಿಥಿ ಪಾತ್ರ. ಅದನ್ನು ಆಮಿರ್ ಖಾನ್ ಅವರೇ ಮಾಡಬೇಕು ಎಂಬುದೇನೂ ಇರಲಿಲ್ಲ. ರಜನಿಕಾಂತ್ ಅವರ ಮೇಲಿನ ಪ್ರೀತಿ, ಗೌರವದ ಕಾರಣಕ್ಕೆ ಅವರು ಆ ಪಾತ್ರವನ್ನು ಮಾಡಲು ಒಪ್ಪಿಕೊಂಡರು. ಆದರೆ ಈಗ ‘ಯಾಕಾದ್ರೂ ರಜನಿ ಜೊತೆ ಕೂಲಿ ಸಿನಿಮಾ ಮಾಡಿದ್ನೋ’ ಎಂದು ಆಮಿರ್ ಖಾನ್ ಬೇಸರ ಮಾಡಿಕೊಂಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಟ್ವಿಸ್ಟ್ ಏನೆಂದರೆ ಆಮಿರ್ ಖಾನ್ ಅವರು ಯಾವ ಪತ್ರಿಕೆಗೂ ಆ ರೀತಿಯ ಹೇಳಿಕೆ ನೀಡಿಲ್ಲ! ಈ ಕುರಿತು ಅವರ ಟೀಮ್ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ‘ಆಮಿರ್ ಖಾನ್ ಅವರು ಇಂಥ ಯಾವುದೇ ಸಂದರ್ಶನ ನೀಡಿಲ್ಲ. ಕೂಲಿ ಸಿನಿಮಾ ಬಗ್ಗೆ ಅವರು ನೆಗೆಟಿವ್ ಆಗಿ ಮಾತನಾಡಿಲ್ಲ’ ಎಂದು ಹೇಳಿಕೆ ಬಿಡುಗಡೆ ಮಾಡಲಾಗಿದೆ.

ರಜನಿಕಾಂತ್ ಬಗ್ಗೆ ಆಮಿರ್ ಖಾನ್ ಅವರಿಗೆ ಬಹಳ ಗೌರವ ಇದೆ. ನಿರ್ದೇಶಕ ಲೋಕೇಶ್ ಕನಗರಾಜ್ ಮತ್ತು ಇಡೀ ಕೂಲಿ ಸಿನಿಮಾ ತಂಡದ ಬಗ್ಗೆ ಅವರಿಗೆ ಆ ಗೌರವ ಇದೆ. ಬಾಕ್ಸ್​ ಆಫೀಸ್​​ನಲ್ಲಿ ಈ ಸಿನಿಮಾ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸಿನಿಮಾ ಬಗ್ಗೆ ಈ ಗಳಿಕೆಯೇ ಎಲ್ಲವನ್ನೂ ಹೇಳುತ್ತಿದೆ’ ಎಂದು ಆಮಿರ್ ಖಾನ್ ತಂಡದವರು ಪ್ರತಿಕ್ರಿಯಿಸಿದ್ದಾರೆ.

‘ಕೂಲಿ’ ಸಿನಿಮಾಗೆ ಅಂದಾಜು 400 ಕೋಟಿ ರೂಪಾಯಿ ಬಂಡವಾಳ ಸುರಿಯಲಾಗಿತ್ತು. ಅದಕ್ಕೆ ಹೋಲಿಸಿದರೆ 500 ಕೋಟಿ ರೂಪಾಯಿ ಕಲೆಕ್ಷನ್ ಏನೇನೂ ಅಲ್ಲ. ಅಲ್ಲದೇ ವಿಮರ್ಶೆ ದೃಷ್ಟಿಯಿಂದಲೂ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ಒಟಿಟಿಯಲ್ಲೂ ವೀಕ್ಷಣೆಗೆ ಲಭ್ಯವಿದೆ. ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಆಮಿರ್ ಖಾನ್ ಇನ್ನೊಂದು ಸಿನಿಮಾ ಮಾಡಬೇಕಿತ್ತು. ಆದರೆ ಈ ಚಿತ್ರ ಸೆಟ್ಟೇರುವುದು ಅನುಮಾನ ಎನ್ನಲಾಗುತ್ತಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!