ಡಾ ರಾಜ್​​ಕುಮಾರ್ ಅವರಿಂದ ದಸರಾ ‘ಉದ್ಘಾಟನೆ’ ಪ್ರಾರಂಭವಾಗಿದ್ದು! ಹೇಗೆ ಗೊತ್ತೆ?

ನಾಡ ಹಬ್ಬ ದಸರಾ ಆಚರಣೆಗೆ ದಿನಗಣನೆ ಶುರುವಾಗಿದೆ. ಜಂಬೂ ಸವಾರಿಯ ತಾಲೀಮು ಜಾರಿಯಲ್ಲಿದೆ. ಈ ಬಾರಿಯ ದಸರಾ ಉದ್ಘಾಟನೆಯನ್ನು ಬಾನು ಮುಷ್ಕಾಖ್ ಅವರು ಮಾಡಲಿದ್ದಾರೆ. ಆದರೆ ಇದಕ್ಕೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿಗರು ವಿರೋಧ ವ್ಯಕ್ತಪಡಿಸಿದ್ದಾರೆ. ಅಂದಹಾಗೆ ದಸರಾ ಉದ್ಘಾಟನೆ ಸಂಪ್ರದಾಯಕ್ಕೆ ನಾಂದಿ ಹಾಡಿದ್ದು ಡಾ ರಾಜ್​​ಕುಮಾರ್ ಅವರು ಎಂಬುದು ಎಷ್ಟು ಮಂದಿಗೆ ಗೊತ್ತು?
ದಸರಾ ‘ಉದ್ಘಾಟನೆ’ ಪ್ರಾರಂಭವಾಗಿದ್ದು ಡಾ ರಾಜ್​​ಕುಮಾರ್ ಅವರಿಂದ, ಹೇಗೆ ಗೊತ್ತೆ?

ಮೈಸೂರು ದಸರಾ ಆಚರಣೆಗೆ ಶತಮಾನಗಳ ಇತಿಹಾಸವಿದೆ. 14ನೇ ಶತಮಾನದಿಂದಲೂ ಮೈಸೂರಿನಲ್ಲಿ ದಸರಾ ಆಚರಣೆ ಬಲು ಅದ್ಧೂರಿಯಾಗಿ ಆಚರಣೆ ಆಗುತ್ತಾ ಬರುತ್ತಿದೆ. ಮೊದಲಿಗೆ ಮಹಾರಾಜರು ಅಂಬಾರಿಯಲ್ಲಿ ಕೂತು ನಗರದ ಪ್ರದಕ್ಷಿಣೆ ಹಾಕುತ್ತಿದ್ದರು ಇದಕ್ಕೆ ಜಂಬೂ ಸವಾರಿ ಎನ್ನಲಾಗುತ್ತಿತ್ತು. ಆ ಬಳಿಕ ಅಂಬಾರಿಯಲ್ಲಿ ಚಾಮುಂಡೇಶ್ವರಿ ತಾಯಿಯ ಮೂರ್ತಿಯನ್ನಿಟ್ಟು ಪ್ರದಕ್ಷಿಣೆ ಹಾಕಿಸಲಾಗುತ್ತದೆ.

ಈ ಬಾರಿಯೂ ಸಹ ದಸರಾ ಅದ್ಧೂರಿಯಾಗಿ ನಡೆಯಲಿದೆ. ಆದರೆ ಈ ಬಾರಿ ದಸರಾ ಸಣ್ಣ ವಿವಾದಕ್ಕೆ ಕಾರಣವಾಗಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಸರ್ಕಾರವು ಆಹ್ವಾನ ನೀಡಿರುವುದನ್ನು ಬಿಜೆಪಿಗರು ವಿರೋಧಿಸುತ್ತಿದ್ದಾರೆ. ಅಂದಹಾಗೆ ಈ ‘ದಸರಾ ಉದ್ಘಾಟನೆ’ ಎಂಬುದಕ್ಕೆ ಪ್ರಾಮುಖ್ಯತೆ ದೊರೆತಿದ್ದು ಡಾ ರಾಜ್​​ಕುಮಾರ್ ಅವರಿಂದ. ದಸರಾ ಅನ್ನು ಮೊದಲ ಬಾರಿ ‘ಉದ್ಘಾಟನೆ’ ಮಾಡಿದ್ದು ಡಾ ರಾಜ್​​ಕುಮಾರ್ ಅವರೇ.

1993ಕ್ಕೆ ಮುಂಚೆ ದಸರಾ ಉದ್ಘಾಟನೆ ಮಾಡುವ ಸಂಪ್ರದಾಯ ಇರಲಿಲ್ಲ. ಅದಕ್ಕೂ ಮುಂಚೆ ಸ್ಥಳೀಯವಾಗಿ ಪೂಜಾ ಮಾಡಿ ಜಂಬೂ ಸವಾರಿ ಮಾಡಲಾಗುತ್ತಿತ್ತು. ಜಂಬೂ ಸವಾರಿಗೆ ಮುಂಚೆ ಚಿನ್ನದ ಅಂಬಾರಿಗೆ ಮುಖ್ಯ ಮಂತ್ರಿ ಆಗಿದ್ದವರು ಪುಷ್ಪಾರ್ಚನೆ ಮಾಡುವ ಸಂಪ್ರದಾಯ ಇತ್ತು. ಆದರೆ 1993 ರಲ್ಲಿ ನೆರೆಯ ಮಹಾರಾಷ್ಟ್ರದ ಲಾಥೋರ್​​ನಲ್ಲಿ ಭಾರಿ ಭೂಕಂಪನ ಆಗಿತ್ತು. ಸುಮಾರು 10 ಸಾವಿರ ಜನ ನಿಧನ ಹೊಂದಿದ್ದರು. 10 ಲಕ್ಷ ಜನ ಮನೆ-ಮಠ ಕಳೆದುಕೊಂಡಿದ್ದರು. ನೆರೆ ರಾಜ್ಯದಲ್ಲಿ ವಿಪತ್ತು ಸಂಭಿಸಿದ್ದ ಕಾರಣ ರಾಜ್ಯದಲ್ಲಿ ದಸರಾ ಆಚರಣೆ ಬೇಡ ಎಂಬ ಕೂಗು ಎದ್ದಿತ್ತು.

ಆಗ ಸಿಎಂ ಆಗಿದ್ದವರು ವೀರಪ್ಪ ಮೋಯ್ಲಿ. ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬಂದಿರುವ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಸರಾ ಅನ್ನು ನಿಲ್ಲಿಸುವುದು ಬೇಡ ಎಂಬ ನಿರ್ಧಾರವನ್ನು ವೀರಪ್ಪ ಮೋಯ್ಲಿ ತಳೆದರು. ಆದರೆ ಅವರ ನಿರ್ಧಾರಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ಆಗ ವೀರಪ್ಪ ಮೋಯ್ಲಿ ಅವರು ಡಾ ರಾಜ್​​ಕುಮಾರ್ ಅವರ ನೆರವು ಪಡೆದರು. ರಾಜ್​​ಕುಮಾರ್ ಅವರನ್ನು ದಸರಾ ಉದ್ಘಾಟನೆಗೆಂದು ಆಹ್ವಾನಿಸಿದರು. ರಾಜ್​​ಕುಮಾರ್ ಅವರ ಆಗಮನದಿಂದ ದಸರಾ ಆಚರಣೆಗೆ ಇದ್ದ ವಿರೋಧ ತಣ್ಣಗಾಯ್ತು. ಸುಸೂತ್ರವಾಗಿ ಹಿಂದಿಗಿಂತಲೂ ಅದ್ಧೂರಿಯಾಗಿ ದಸರಾ ಆಚರಣೆ ನಡೆಯಿತು.

ರಾಜ್​​ಕುಮಾರ್ ಉದ್ಘಾಟನೆ ಮಾಡಿದ ಬಳಿಕ, ಪ್ರತಿವರ್ಷವೂ ಯಾರನ್ನಾದರೂ ಗಣ್ಯರನ್ನು, ಸಾಹಿತಿಗಳನ್ನು ಕರೆಸಿ ದಸರಾ ಉದ್ಘಾಟಿಸುವ ಸಂಪ್ರದಾಯ ಆರಂಭವಾಯ್ತು. ಜಂಬೂ ಸವಾರಿಯ ಹೊರತಾಗಿ ಸಿಎಂ ಆಗಿದ್ದವರು ಬೇರೆ ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರಲಿಲ್ಲ. 1994 ರಲ್ಲಿ ಸಿಎಂ ಆದ ಎಚ್​​​ಡಿ ದೇವೇಗೌಡ ಅವರು ಉದ್ಘಾಟನೆ ಕಾರ್ಯಕ್ರಮದಲ್ಲಿಯೂ ಭಾಗವಹಿಸುವ ಮೂಲಕ ಸಿಎಂಗಳು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ ಆಗುವ ಸಂಪ್ರದಾಯಕ್ಕೆ ಚಾಲನೆ ನೀಡಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!