ಭಾರತದ ಖ್ಯಾತ ಗಾಯಕ ನಿಧನ. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ

Zubeen Garg death: ಕನ್ನಡ ಸೇರಿದಂತೆ 10ಕ್ಕೂ ಹೆಚ್ಚು ಭಾಷೆಗಳಲ್ಲಿ ಹಲವಾರು ಜನಪ್ರಿಯ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಅವರು ಸಿಂಗಪುರದಲ್ಲಿ ನಡೆದ ಅವಘಡವೊಂದರಲ್ಲಿ ನಿಧನ ಹೊಂದಿದ್ದಾರೆ. ಜುಬೀನ್ ಅವರು ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮರಣ ಹೊಂದಿದ್ದಾರೆ.

ಕನ್ನಡ ಸೇರಿದಂತೆ ಭಾರತದ ಹಲವು ಭಾಷೆಗಳಲ್ಲಿ ಹಲವು ಅತ್ಯುತ್ತಮ ಹಾಡುಗಳನ್ನು ಹಾಡಿರುವ ಗಾಯಕ ಜುಬೀನ್ ಗರ್ಗ್ ಸಿಂಗಪುರದಲ್ಲಿ ನಡೆದ ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ (ಆಳ ಸಮುದ್ರದಲ್ಲಿ ಈಜಾಟ) ಸಾಹಸ ಮಾಡುವಾಗ ಜುಬೀನ್ ಗರ್ಗ್ ನಿಧನ ಹೊಂದಿದ್ದಾರೆ ಎನ್ನಲಾಗಿದೆ. ಸಿಂಗಪುರದ ಸ್ಥಳೀಯ ಪೊಲೀಸರ ವರದಿಯಂತೆ ಜುಬೀನ್ ಗರ್ಗ್ ಅವರನ್ನು ನದಿಯೊಂದರಿಂದ ಹೊರಗೆ ತೆಗೆಯಲಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಂತೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ಜುಬೀನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

 

ಅಸ್ಸಾಂ ಮೂಲದವರಾದ ಜುಬೀನ್ ಗರ್ಗ್ ಅವರು ಅಸ್ಸಾಮಿ ಸಿನಿಮಾಗಳ ಖ್ಯಾತ ನಟ ಆಗಿದ್ದರು. ಮಾತ್ರವಲ್ಲದೆ ಹಲವಾರು ಹಿಂದಿ, ಬೆಂಗಾಲಿ, ಅಸ್ಸಾಮಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಪಂಜಾಬಿ, ಒಡಿಯಾ, ಬೋಡೊ, ಕರ್ಬಿ, ತಿವಾ, ನೇಪಾಳಿ, ಭೋಜ್​​ಪುರಿ, ಭಿಷ್ಣುಪ್​ರಿಯ ಮಣಿಪುರಿ ಇನ್ನೂ ಕೆಲವು ಭಾಷೆಗಳಲ್ಲಿ ಹಾಡುಗಳನ್ನು ಹಾಡಿದ್ದರು. ಎಆರ್ ರೆಹಮಾನ್ ಸೇರಿದಂತೆ ಇನ್ನೂ ಕೆಲವು ಅತ್ಯುತ್ತಮ ಸಂಗೀತ ನಿರ್ದೇಶಕರುಗಳ ಮೆಚ್ಚಿನ ಗಾಯಕರಾಗಿದ್ದರು ಜುಬೀನ್ ಗರ್ಗ್.

ಕನ್ನಡದಲ್ಲಿ ಗಣೇಶ್ ನಟಿಸಿರುವ ‘ಹುಡುಗಾಟ’ ಸಿನಿಮಾದ ‘ಒಮ್ಮೊಮ್ಮೆ ಹೀಗೂ’, ‘ಮಹಾರುದ್ರ’ ಸಿನಿಮಾದ ‘ಅಮ್ಮಾ ನೀನು’, ‘ಪರಿಚಯ’ ಸಿನಿಮಾದ ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದಾರೆ. ಹಿಂದಿಯಲ್ಲಿ ‘ದಿಲ್ ಸೇ’ , ‘ಗ್ಯಾಂಗ್​​ಸ್ಟರ್’, ‘ಅಶೋಕಾ’, ‘ಕ್ರಿಶ್’,‘ಆನ್’, ಇನ್ನೂ ಹಲವಾರು ಜನಪ್ರಿಯ ಸಿನಿಮಾಗಳಲ್ಲಿ ಹಾಡುಗಳನ್ನು ಹಾಡಿದ್ದಾರೆ. ‘ಗ್ಯಾಂಗ್​​ಸ್ಟರ್’ ಸಿನಿಮಾದ ‘ಯಾ ಆಲಿ’ ಹಾಡು ಭಾರಿ ದೊಡ್ಡ ಹಿಟ್ ಆಗಿತ್ತು, ‘ದಿಲ್ ಸೇ’ ಸಿನಿಮಾದ ‘ಪಾಕಿ ಪಾಕಿ ಪರದೇಸಿ’ ‘ಕಾಂಟೆ’ ಸಿನಿಮಾದ ‘ಮಾಹಿ ವೇ’ ಇನ್ನೂ ಹಲವಾರು ಹಾಡುಗಳನ್ನು ಜುಬೀನ್ ಗರ್ಗ್ ಹಾಡಿದ್ದರು.

ಬಹುಮುಖ ಪ್ರತಿಭೆ ಹೊಂದಿದ್ದ ಜುಬೀನ್ ಗಾಯಕರಾಗಿ ಮಾತ್ರವೇ ಅಲ್ಲದೆ ಅಸ್ಸಾಮಿ ಭಾಷೆಯ ಹಲವಾರು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದಾರೆ. ಜೊತೆಗೆ ಸಂಗೀತ ನಿರ್ದೇಶನ, ಗೀತ ರಚನೆ, ಚಿತ್ರಕತೆ ರಚನೆ, ಸಿನಿಮಾ ನಿರ್ಮಾಣಗಳನ್ನು ಸಹ ಜುಬೀನ್ ಗರ್ಗ್ ಮಾಡಿದ್ದಾರೆ. ಇದೀಗ ಖ್ಯಾತ ಗಾಯಕನ ನಿಧನಕ್ಕೆ ಹಲವಾರು ಸಂಗೀತಗಾರರು, ಸಂಗೀತ ನಿರ್ದೇಶಕರುಗಳು ಕಂಬನಿ ಮಿಡಿದಿದ್ದಾರೆ. ಸಿನಿಮಾ ನಟರುಗಳು ಕಂಬನಿ ಮಿಡಿದಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!