ಸೂರ್ಯಕುಮಾರ್ ಸೇನೆಗೆ ಮತ್ತೊಂದು ವಿಜಯಮಾಲೆ. ಏಷ್ಯಾಕಪ್ ಫೈನಲ್ ಗೇರಿದ ಟೀಮ್ ಇಂಡಿಯಾ

ಬಾಂಗ್ಲಾದೇಶದ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಗೆಲುವು ದಾಖಲು ಮಾಡಿದೆ. ಈ ಮೂಲಕ ಏಷ್ಯಾಕಪ್ನಲ್ಲಿ ಸತತ ಐದು ಮ್ಯಾಚ್ಗಳಲ್ಲಿ ವಿಜಯಮಾಲೆ ಧರಿಸಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿ ಟೀಮ್ ಇಂಡಿಯಾವನ್ನು ಮೊದಲ ಬ್ಯಾಟಿಂಗ್ಗೆ ಆಹ್ವಾನ ಮಾಡಿತು. ಅದರಂತೆ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ಗಳ ಟಾರ್ಗೆಟ್ ಅನ್ನು ನೀಡಿತ್ತು.

ಇದಾದ ಮೇಲೆ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ಆರಂಭದಲ್ಲೇ ದೊಡ್ಡ ಆಘಾತಕ್ಕೆ ಒಳಗಾಯಿತು. ಓಪನರ್ ತಾಂಜಿದ್ ಹಸನ್ ತಮೀಮ್ ಕೇವಲ 1 ರನ್ಗೆ ಔಟ್ ಆದರು. ಇವರ ನಂತರ ಬಂದ ಪರ್ವೇಜ್ ಹೊಸೇನ್ ಎಮನ್, ಓಪನರ್ ಸೈಫ್ ಹಸನ್ಗೆ ಉತ್ತಮ ಸಾಥ್ ಕೊಟ್ಟು 21 ರನ್ ಗಳಿಸಿ ಔಟ್ ಆದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೈಫ್ ಹಸನ್ ಅರ್ಧಶತಕ ಬಾರಿಸಿ ಪಂದ್ಯದ ಕೊನೆವರೆಗೂ ಹೋರಾಟ ನಡೆಸಿದ್ದನು.

ಸೈಫ್ ಹಸನ್ ಕೊನೆವರೆಗೆ ಹೋರಾಟ ನಡೆಸಿ 51 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ಗಳಿಂದ 69 ರನ್ ಗಳಿಸಿದರು. ತೋಹಿದ್ ಹೃದಯ್ 7, ಕ್ಯಾಪ್ಟನ್ ಜಾಕೀರ್ ಅಲಿ 4 ರನ್ ಬಿಟ್ಟರೇ ಉಳಿದ ಯಾವ ಬ್ಯಾಟರ್ ಕೂಡ 7 ರನ್ಗಳ ಗಡಿ ದಾಟಲಿಲ್ಲ. ಹೀಗಾಗಿ 19.3 ಓವರ್ಗಳಲ್ಲಿ ಕೇವಲ 127 ರನ್ಗೆ ಬಾಂಗ್ಲಾ ಆಟಗಾರರು ಆಲೌಟ್ ಆದರು. ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಸೋಲುಂಡಿತು. ಈ ವಿಜಯಮಾಲೆಯೊಂದಿಗೆ ಟೀಮ್ ಇಂಡಿಯಾ ಏಷ್ಯಾಕಪ್ ಫೈನಲ್ಗೆ ಎಂಟ್ರಿಕೊಟ್ಟಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!