ಸೂರ್ಯಕುಮಾರ್ ಸೇನೆಗೆ ಮತ್ತೊಂದು ವಿಜಯಮಾಲೆ. ಏಷ್ಯಾಕಪ್ ಫೈನಲ್ ಗೇರಿದ ಟೀಮ್ ಇಂಡಿಯಾ

ಬಾಂಗ್ಲಾದೇಶದ ವಿರುದ್ಧ ನಡೆದ ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಸೂರ್ಯಕುಮಾರ್ ನೇತೃತ್ವದ ಟೀಮ್ ಇಂಡಿಯಾ 41 ರನ್ಗಳಿಂದ ಭರ್ಜರಿ ಗೆಲುವು ದಾಖಲು ಮಾಡಿದೆ. ಈ ಮೂಲಕ ಏಷ್ಯಾಕಪ್ನಲ್ಲಿ ಸತತ ಐದು ಮ್ಯಾಚ್ಗಳಲ್ಲಿ ವಿಜಯಮಾಲೆ ಧರಿಸಿದೆ.

ದುಬೈನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿ ಟೀಮ್ ಇಂಡಿಯಾವನ್ನು ಮೊದಲ ಬ್ಯಾಟಿಂಗ್ಗೆ ಆಹ್ವಾನ ಮಾಡಿತು. ಅದರಂತೆ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಅಭಿಷೇಕ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ಗಳ ಟಾರ್ಗೆಟ್ ಅನ್ನು ನೀಡಿತ್ತು.

ಇದಾದ ಮೇಲೆ ಗುರಿ ಬೆನ್ನತ್ತಿದ್ದ ಬಾಂಗ್ಲಾದೇಶ ಆರಂಭದಲ್ಲೇ ದೊಡ್ಡ ಆಘಾತಕ್ಕೆ ಒಳಗಾಯಿತು. ಓಪನರ್ ತಾಂಜಿದ್ ಹಸನ್ ತಮೀಮ್ ಕೇವಲ 1 ರನ್ಗೆ ಔಟ್ ಆದರು. ಇವರ ನಂತರ ಬಂದ ಪರ್ವೇಜ್ ಹೊಸೇನ್ ಎಮನ್, ಓಪನರ್ ಸೈಫ್ ಹಸನ್ಗೆ ಉತ್ತಮ ಸಾಥ್ ಕೊಟ್ಟು 21 ರನ್ ಗಳಿಸಿ ಔಟ್ ಆದರು. ಇನ್ನೊಂದೆಡೆ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೈಫ್ ಹಸನ್ ಅರ್ಧಶತಕ ಬಾರಿಸಿ ಪಂದ್ಯದ ಕೊನೆವರೆಗೂ ಹೋರಾಟ ನಡೆಸಿದ್ದನು.

ಸೈಫ್ ಹಸನ್ ಕೊನೆವರೆಗೆ ಹೋರಾಟ ನಡೆಸಿ 51 ಎಸೆತಗಳಲ್ಲಿ 3 ಬೌಂಡರಿ ಹಾಗೂ 5 ಸಿಕ್ಸರ್ಗಳಿಂದ 69 ರನ್ ಗಳಿಸಿದರು. ತೋಹಿದ್ ಹೃದಯ್ 7, ಕ್ಯಾಪ್ಟನ್ ಜಾಕೀರ್ ಅಲಿ 4 ರನ್ ಬಿಟ್ಟರೇ ಉಳಿದ ಯಾವ ಬ್ಯಾಟರ್ ಕೂಡ 7 ರನ್ಗಳ ಗಡಿ ದಾಟಲಿಲ್ಲ. ಹೀಗಾಗಿ 19.3 ಓವರ್ಗಳಲ್ಲಿ ಕೇವಲ 127 ರನ್ಗೆ ಬಾಂಗ್ಲಾ ಆಟಗಾರರು ಆಲೌಟ್ ಆದರು. ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಸೋಲುಂಡಿತು. ಈ ವಿಜಯಮಾಲೆಯೊಂದಿಗೆ ಟೀಮ್ ಇಂಡಿಯಾ ಏಷ್ಯಾಕಪ್ ಫೈನಲ್ಗೆ ಎಂಟ್ರಿಕೊಟ್ಟಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!