ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ

ಮೈಸೂರು: ಬಾನಂಗಳದಲ್ಲಿ ಹಾರುವ ಲೋಹದ ಹಕ್ಕಿಗಳ ಸಾಹಸಮಯ ಪ್ರದರ್ಶನ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮತ್ತಷ್ಟು ಕಳೆ ತಂದಿತು.
ಗುರುವಾರ ಬನ್ನಿಮಂಟಪ(ಕವಾಯತು) ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ವೈಮಾನಿಕ ಪ್ರದರ್ಶನದ ಪೂರ್ವಭ್ಯಾಸದ ರೋಮನಾಚರಣಕಾರಿ ಪ್ರದರ್ಶನವನ್ನು ಕಂಡು ಮಕ್ಕಳು ಕುಣಿದು ಕುಪ್ಪಳಿಸಿದರು.

ಸಾರಂಗ ಕೇಂದ್ರ ವೈಮಾನಿಕ ಪ್ರದರ್ಶನದ 5 ಹೆಲಿಕ್ಯಾಪ್ಟರ್ ಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದು, ಮಿಂಚಿನ ರೀತಿ ಶರವೇಗದಲ್ಲಿ ಹಾರುವ ಪ್ರದರ್ಶನದ ಚಿತ್ತಾರವನ್ನು ನೆರೆದಿಂದಂತಹ ಸಾರ್ವಜನಿಕರು ಕಣ್ತುಂಬಿಕೊಂಡರು. ನೀಲಿ ಗಗನದಲ್ಲಿ ಓಲಾಡಿ- ತೇಲಾಡಿದ ಲೋಹದ ಹಕ್ಕಿಗಳು ಬಣ್ಣ ಬಣ್ಣದ ಹೊಗೆಯ ಮೂಲಕ ಹೃದಯ ಬಿಳಿ ಗೆರೆಗಳನ್ನು ಬರೆಯುವುದರ ಮೂಲಕ ರೋಮಾಂಚನಕಾರಿ ದೃಶ್ಯಕ್ಕೆ ಪಾತ್ರವಾದವು.

ಆಗಸದಲ್ಲಿ ಮೈನವಿರೇಳುವ ಮೈಮಾನಿಕ ಪ್ರದರ್ಶನವನ್ನು ಕಂಡು ಪ್ರೇಕ್ಷಕರು ಪುಳಕಿತಗೊಂಡರು. ಅನೇಕ ರೋಮಾಂಚನಕಾರಿ ಅನುಭವಕ್ಕೆ ಇಂದು ನಡೆದ ವೈಮಾನಿಕ ಪ್ರದರ್ಶನ ಸಾಕ್ಷಿಯಾದವು. ಬಾನಂಗಳಕ್ಕೆ ಹೇರಿ ನೆಲಕ್ಕೆ ರಪ್ಪನೆ ಬೀಳುವ ರೀತಿಯಲ್ಲಿ ಪ್ರದರ್ಶನ ನೀಡಿ ನೋಡುಗರನ್ನು ಅಚ್ಚರಿ ಗೊಳಿಸಿದವು.
ಪೂರ್ವಬ್ಯಾಸ ಪ್ರದರ್ಶನಕ್ಕೆ ಇಡೀ ಕವಾಯತು ಮೈದಾನ ಭರ್ತಿ ಆಗಿದ್ದು, ಸೆಪ್ಟೆಂಬರ್ 27 ರಂದು ಸಂಜೆ 5 ಗಂಟೆಗೆ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವೈಮಾನಿಕ ಪ್ರದರ್ಶನ ಕಣ್ತುಂಬಿಕೊಳ್ಳಲು ಮೈಸೂರಿಗರು ಕಾಯುತ್ತಿದ್ದಾರೆ, ಒಟ್ಟಾರೆ ಈ ಬಾರಿಯ ವೈಮಾನಿಕ ಪ್ರದರ್ಶನ ದಸರಾ ಮಹೋತ್ಸವಕ್ಕೆ ಇನ್ನಷ್ಟು ಮೆರುಗನ್ನು ತರಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!