11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ*

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ ಕಾರಣವಲ್ಲ ಎಂದು ಸಷ್ಟಪಡಿಸಿವೆ.

ಮಧ್ಯಪ್ರದೇಶದಲ್ಲಿ 9 ಮಕ್ಕಳು ಸಾವು: ಕಳೆದ 15 ದಿನದಲ್ಲಿ ಮಧ್ಯ ಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಈ ಮಕ್ಕಳ ಸಾವಿಗೆ ಕೋಲ್ಟಿಫ್ ಮತ್ತು ನೆಕ್‌ಸ್ಟೋ-ಡಿಎಸ್ ಕೆಮ್ಮಿನ ಔಷಧ ಸೇವನೆಯಿಂದ ಉಂಟಾದ ಕಿಡ್ನಿ ವೈಫಲ್ಯ ಕಾರಣ ಎಂದು ಪೋಷಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮಧ್ಯ ಪ್ರದೇಶದ ಆರೋಗ್ಯ ಇಲಾಖೆಯು ಔಷಧದ ಪರೀಕ್ಷೆ ವೇಳೆ ಯಾವುದೇ ವಿಷಪೂರಿತ ಅಂಶ ಪತ್ತೆಯಾಗಿಲ್ಲ. ಔಷಧದ ನಿಷೇಧದ ಪ್ರಶ್ನೆಯೇ ಇಲ್ಲ. ಮಕ್ಕಳ ಸಾವಿಗೆ ಸಮಿತಿ ರಚಿಸಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.
ರಾಜಸ್ಥಾನದಲ್ಲಿ 2 ಮಕ್ಕಳ ಸಾವು: ರಾಜ ಸ್ಥಾನದ ಸಿಕಾರ್ ಮತ್ತು ಭರತ್‌ ಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದ್ದು, ಇಲ್ಲಿಯೂ ಸಹ ಔಷಧವೇ ಕಾರಣ ಎಂಬ ಆರೋಪವಿದೆ.

 

 

 

 

 

 

ತಮಿಳುನಾಡಿನಲ್ಲಿ ನಿಷೇಧ
ಮಕ್ಕಳ ಸಾವಿನ ಬೆನ್ನಲ್ಲೇ ತಮಿಳುನಾಡು ಸರ್ಕರ ಕೋಲ್ಟಿಫ್ ಸಿರಪ್ ಮೇಲೆ ನಿಷೇಧ ಹೇರಿದೆ. ತಮಿಳುನಾಡು ಔಷಧ ನಿಯಂತ್ರಣಾ ಮಂಡಳಿ ಈ ಕ್ರಮ ಕೈಗೊಂಡಿದೆ. ಘಟನೆ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಆರೋಪವಿದೆ. ಆದರೆ ಅಲ್ಲಿನ ಸರ್ಕಾರವು ವೈದ್ಯರಿಗೆ ಕ್ಲೀನ್‌ ಚಿಟ್ ನೀಡಿದೆ. ರಾಜಸ್ಥಾನ ಔಷಧ ನಿಯಂತ್ರಣ ಮಂಡಳಿಯು ಔಷಧಗಳ ಪೂರೈಕೆಗೆ ತಾತ್ಕಾಲಿಕ ತಡೆ ನೀಡಿದೆ. ಎರಡೂ ಪ್ರಕರಣಗಳಲ್ಲಿಯೂ ಪೋಷಕರು ವೈದ್ಯರ ಸೂಚನೆಯಿಲ್ಲದೆಯೇ ಔಷಧ ನೀಡಿದ್ದೇ ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ.

2 ವರ್ಷದ ಮಕ್ಕಳಿಗೆ ಕೆಮ್ಮಿನೌಷಧ ಬೇಡ: ಕೇಂದ್ರದ ಎಚ್ಚರಿಕೆ
ಅತ್ತ ಕೇಂದ್ರ ಸರ್ಕಾರ ಕಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ಜತೆಗೆ 2 ವರ್ಷದ ಒಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬಾರದೆಂದು ಆದೇಶಿಸಿದೆ. ಜೊತೆಗೆ ಕೆಮ್ಮಿನ ಔಷಧದ ಪರಿಣಾಮ ಎಂಬ ಯಾವುದೇ ಪ್ರಕರಣ ಬಂದಲ್ಲಿ ಖಾಸಗಿ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶ ಹೊರಡಿಸಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು