11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ*

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ ಕಾರಣವಲ್ಲ ಎಂದು ಸಷ್ಟಪಡಿಸಿವೆ.

ಮಧ್ಯಪ್ರದೇಶದಲ್ಲಿ 9 ಮಕ್ಕಳು ಸಾವು: ಕಳೆದ 15 ದಿನದಲ್ಲಿ ಮಧ್ಯ ಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಈ ಮಕ್ಕಳ ಸಾವಿಗೆ ಕೋಲ್ಟಿಫ್ ಮತ್ತು ನೆಕ್‌ಸ್ಟೋ-ಡಿಎಸ್ ಕೆಮ್ಮಿನ ಔಷಧ ಸೇವನೆಯಿಂದ ಉಂಟಾದ ಕಿಡ್ನಿ ವೈಫಲ್ಯ ಕಾರಣ ಎಂದು ಪೋಷಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮಧ್ಯ ಪ್ರದೇಶದ ಆರೋಗ್ಯ ಇಲಾಖೆಯು ಔಷಧದ ಪರೀಕ್ಷೆ ವೇಳೆ ಯಾವುದೇ ವಿಷಪೂರಿತ ಅಂಶ ಪತ್ತೆಯಾಗಿಲ್ಲ. ಔಷಧದ ನಿಷೇಧದ ಪ್ರಶ್ನೆಯೇ ಇಲ್ಲ. ಮಕ್ಕಳ ಸಾವಿಗೆ ಸಮಿತಿ ರಚಿಸಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.
ರಾಜಸ್ಥಾನದಲ್ಲಿ 2 ಮಕ್ಕಳ ಸಾವು: ರಾಜ ಸ್ಥಾನದ ಸಿಕಾರ್ ಮತ್ತು ಭರತ್‌ ಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದ್ದು, ಇಲ್ಲಿಯೂ ಸಹ ಔಷಧವೇ ಕಾರಣ ಎಂಬ ಆರೋಪವಿದೆ.

 

 

 

 

 

 

ತಮಿಳುನಾಡಿನಲ್ಲಿ ನಿಷೇಧ
ಮಕ್ಕಳ ಸಾವಿನ ಬೆನ್ನಲ್ಲೇ ತಮಿಳುನಾಡು ಸರ್ಕರ ಕೋಲ್ಟಿಫ್ ಸಿರಪ್ ಮೇಲೆ ನಿಷೇಧ ಹೇರಿದೆ. ತಮಿಳುನಾಡು ಔಷಧ ನಿಯಂತ್ರಣಾ ಮಂಡಳಿ ಈ ಕ್ರಮ ಕೈಗೊಂಡಿದೆ. ಘಟನೆ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಆರೋಪವಿದೆ. ಆದರೆ ಅಲ್ಲಿನ ಸರ್ಕಾರವು ವೈದ್ಯರಿಗೆ ಕ್ಲೀನ್‌ ಚಿಟ್ ನೀಡಿದೆ. ರಾಜಸ್ಥಾನ ಔಷಧ ನಿಯಂತ್ರಣ ಮಂಡಳಿಯು ಔಷಧಗಳ ಪೂರೈಕೆಗೆ ತಾತ್ಕಾಲಿಕ ತಡೆ ನೀಡಿದೆ. ಎರಡೂ ಪ್ರಕರಣಗಳಲ್ಲಿಯೂ ಪೋಷಕರು ವೈದ್ಯರ ಸೂಚನೆಯಿಲ್ಲದೆಯೇ ಔಷಧ ನೀಡಿದ್ದೇ ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ.

2 ವರ್ಷದ ಮಕ್ಕಳಿಗೆ ಕೆಮ್ಮಿನೌಷಧ ಬೇಡ: ಕೇಂದ್ರದ ಎಚ್ಚರಿಕೆ
ಅತ್ತ ಕೇಂದ್ರ ಸರ್ಕಾರ ಕಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ಜತೆಗೆ 2 ವರ್ಷದ ಒಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬಾರದೆಂದು ಆದೇಶಿಸಿದೆ. ಜೊತೆಗೆ ಕೆಮ್ಮಿನ ಔಷಧದ ಪರಿಣಾಮ ಎಂಬ ಯಾವುದೇ ಪ್ರಕರಣ ಬಂದಲ್ಲಿ ಖಾಸಗಿ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶ ಹೊರಡಿಸಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!